AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ, ಆಯೋಧ್ಯೆ, ಮಥುರಾ ಮೇಲೆ ಬಾಂಬ್ ದಾಳಿ ಎಚ್ಚರಿಕೆ: PFIನಿಂದ ಪ್ರತೀಕಾರದ ಪತ್ರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅಂದರ ಅಂಗ ಸಂಸ್ಥೆಗಳು ಹಾಗೂ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದಕ್ಕೆ ಸಂಘಟನೆ ಪ್ರತೀಕಾರದ ಪತ್ರವೊಂದನ್ನು ರವಾನಿಸಿದೆ.

ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ, ಆಯೋಧ್ಯೆ, ಮಥುರಾ ಮೇಲೆ ಬಾಂಬ್ ದಾಳಿ ಎಚ್ಚರಿಕೆ: PFIನಿಂದ ಪ್ರತೀಕಾರದ ಪತ್ರ
Modi PFI
TV9 Web
| Edited By: |

Updated on: Oct 08, 2022 | 6:05 PM

Share

ನವದೆಹಲಿ: ದೇಶದ್ರೋಹಿ ಕೃತ್ಯದ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಇತರೆ ಅಂಗ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಬ್ಯಾನ್​ ಆಗಿರುವ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತೀಕಾರಕ್ಕಾಗಿ ಕಾಯುತ್ತಿದ್ದು, ಇದೀಗ ಸಂಘಟನೆ ಪ್ರತೀಕಾರದ ಪತ್ರವೊಂದನ್ನು ರವಾನಿಸಿದೆ.

ಆಯೋಧ್ಯೆ ರಾಮ ಮಂದಿರ, ಮಥುರಾ ಕೃಷ್ಣ ಮಂದಿರದ ಮೇಲೆ ಆತ್ಮಾಹುತಿ ದಾಳಿ ಮಾಡುವುದಾಗಿ ಈ ಪತ್ರದ ಮೂಲಕ ಎಚ್ಚರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ ನೀಡುವುದಾಗಿ ಪತ್ರದಲ್ಲಿ ಬರೆಯಲಾಗಿದೆ. ಇಷ್ಟೇ ಅಲ್ಲ ನಿಷೇಧಕ್ಕೆ ದೊಡ್ಡ ಮಟ್ಟದಲ್ಲಿ ಪ್ರತೀಕಾರಾ ತೀರಿಸುವುದಾಗಿ ಎಚ್ಚರಿಸಿದೆ.

ಇದನ್ನೂ ಓದಿ: PFI ಬ್ಯಾನ್ ಬಳಿಕ ಕಿಲ್ಲಿಂಗ್ ಟಾಸ್ಕ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಹಿಟ್​ ಲಿಸ್ಟ್​ನಲ್ಲಿ ಯಾರಿದ್ದಾರೆ..?

ಮಹಾರಾಷ್ಟ್ರ ಬಿಜೆಪಿ ಶಾಸಕ ವಿಜಯ್ ಕುಮಾರ್ ದೇಶ್‌ಮುಖ್ ಅವರಿಗೆ ಈ ಪತ್ರ ಕಳುಹಿಸಲಾಗಿದೆ. ಪಿಎಫ್ಐ ನಾಯಕ ಮೊಹಮ್ಮದ್ ಶಫಿ ಬಿರಾಜ್‌ದಾರ್ ಹೆಸರಿನಲ್ಲಿ ಈ ಪತ್ರ ಬಂದಿದೆ. ಈ ಕುರಿತು ವಿಜಯ್ ಕುಮಾರ್ ದೇಶ್‌ಮುಖ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿಂದಿಯಲ್ಲಿ ಪತ್ರ ಬರೆಯಲಾಗಿದ್ದು, ಪಿಎಫ್ಐ ಸಂಘಟನೆ ನಿಷೇಧಕ್ಕೆ ಸೇಡು ತೀರಿಸಿಕೊಳ್ಳುವುದು ಖಚಿತ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಪವಿತ್ರ ಕ್ಷೇತ್ರ ಆಯೋಧ್ಯೆ ಹಾಗೂ ಮಥುರಾದ ಮೇಲೆ ಆತ್ಮಾಹುತಿ ದಾಳಿ ಮೂಲಕ ಮಂದಿರ ಸ್ಫೋಟಿಸಲಾಗುವುದು ಎಂದು ಪತ್ರದಲ್ಲಿ ಹೇಳಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್