AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರದಾ ಚಿಟ್ ಫಂಡ್ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿಚಾರಣೆ 2 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ಕೇಂದ್ರ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕ ತನಿಖೆ ಕೈಗೊಂಡಿದ್ದವು. 2014ರಲ್ಲಿ ಈ ಹಗರಣ ಪ್ರಕರಣದ ಗಂಭೀರತೆ ಮತ್ತು ಅಕ್ರಮ ನಡೆದಿರುವುದನ್ನು ಅರಿತ ಸುಪ್ರೀಂ ಕೋರ್ಟ್ ಸಿಬಿಐಗೆ ಪ್ರಕರಣ ಕೈಗೊಳ್ಳಲು ನಿರ್ದೇಶನ ನೀಡಿತ್ತು.

ಶಾರದಾ ಚಿಟ್ ಫಂಡ್ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿಚಾರಣೆ 2 ವಾರ ಮುಂದೂಡಿದ ಸುಪ್ರೀಂ ಕೋರ್ಟ್
ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್
guruganesh bhat
| Updated By: ಸಾಧು ಶ್ರೀನಾಥ್​|

Updated on: Feb 23, 2021 | 5:56 PM

Share

ದೆಹಲಿ: ಇಡೀ ದೇಶದ ಗಮನವನ್ನು ಸೆಳೆದಿದ್ದ ಶಾರದಾ ಚಿಟ್ ಫಂಡ್ ಹಗರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೋಲಿಸ್ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರೆ ಆರೋಪಿಗಳ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ. ಸಿಬಿಐ ಸಲ್ಲಿಸಿದ್ದ ಮನವಿ ಆಧರಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸರ್ವೋಚ್ಛ ನ್ಯಾಯಾಲಯ ಈ ಹಗರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಅತಿ ಹೆಚ್ಚು ಬಡ್ಡಿ ದರ ನೀಡುವ ಆಮಿಷವೊಡ್ಡಿ ನಡೆಯುತ್ತಿದ್ದ ಹಗರಣ 2013 ರಲ್ಲಿ ಬೆಳಕಿಗೆ ಬಂದಿತ್ತು. ಅದುವರೆಗೆ 17 ಲಕ್ಷ ಜನರಿಂದ ಠೇವಣಿ ಸಂಗ್ರಹಿಸಿದ್ದ ಶಾರದಾ ಚಿಟ್ ಫಂಡ್ ಸಂಸ್ಥೆಯು 200 ರಿಂದ 300 ಕೋಟಿ ರೂ. ಹಣ ಸಂಗ್ರಹಿಸಿತ್ತು ಎಂದು ಅಂದಾಜಿಸಲಾಗಿತ್ತು. ಶಾರದಾ ಗ್ರೂಪ್, ನಾಲ್ಕು ವರ್ಷಗಳಲ್ಲಿ ತನ್ನ ಮೂಲ ನೆಲೆ ಪಶ್ಚಿಮ ಬಂಗಾಳ ಸೇರಿ ಜಾರ್ಖಂಡ್, ಒರಿಸ್ಸಾ, ಈಶಾನ್ಯ ರಾಜ್ಯಗಳಲ್ಲಿ 300 ಕಚೇರಿಗಳನ್ನು ತೆರೆದಿತ್ತು.

ಈ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪಶ್ಚಿಮ ಬಂಗಾಳ ಸರ್ಕಾರ ಪ್ರಕರಣದ ತನಿಖೆಗೆ ಪ್ರತ್ಯೇಕ ತನಿಖಾ ಆಯೋಗವನ್ನು ರಚಿಸಿತ್ತು.  ಜತೆಗೆ, ಕಡಿಮೆ ಆದಾಯ ಹೂಡಿಕೆದಾರರಿಗೆ ಹಣವನ್ನು ಮರಳಿಸಲು 500 ಕೋಟಿ ಮೊತ್ತದ ನಿಧಿಯನ್ನು ಸ್ಥಾಪಿಸಿತ್ತು. ತನಿಖೆಯಲ್ಲಿ ಉದ್ಯಮಿಗಳು, ಪ್ರಭಾವಶಾಲಿಗಳು ಸೇರಿ ಹಲವರ ಹೆಸರು ಸಿಲುಕಿಕೊಂಡಿತ್ತು. ಜತೆಗೆ ಕೇಂದ್ರ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕ ತನಿಖೆ ಕೈಗೊಂಡಿದ್ದವು. 2014ರಲ್ಲಿ ಈ ಹಗರಣ ಪ್ರಕರಣದ ಗಂಭೀರತೆ ಮತ್ತು ಅಕ್ರಮ ನಡೆದಿರುವುದನ್ನು ಅರಿತ ಸುಪ್ರೀಂ ಕೋರ್ಟ್ ಸಿಬಿಐಗೆ ಪ್ರಕರಣ ಕೈಗೊಳ್ಳಲು ನಿರ್ದೇಶನ ನೀಡಿತ್ತು.

ಪ್ರಕರಣ ನಾಟಕೀಯ ತಿರುವು ಪಡೆದಿದ್ದೇ ಇವರಿಂದ..

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ಕಡತಗಳು ನಾಪತ್ತೆಯಾದ ಕುರಿತು ಪ್ರಶ್ನಿಸಲು ಪೊಲೀಸ್ ಆಯುಕ್ತ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರ ಮನೆಗೆ ಸಿಬಿಐ ತಂಡ ಆಗಮಿಸಿತ್ತು. ಆದರೆ ಸಿಬಿಐ ತಂಡವನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು. ಆನಂತರ ಸಿಬಿಐ ತಂಡವನ್ನು ಬಿಡುಗಡೆ ಮಾಡಿದ್ದರು. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಮತಾ ಬ್ಯಾನರ್ಜಿ ಆಪಾದಿಸಿ ಧರಣಿಯನ್ನು ಸಹ ನಡೆಸಿದ್ದರು. ಇದೀಗ ಸಿಬಿಐ ಮನವಿಯ ವಿಚಾರಣೆಯನ್ನು ಎರಡು ವಾರಗಳ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಐಪಿಎಸ್​ ರಾಜೀವ್ ಕುಮಾರ್ ಅವರು ವಿಪಕ್ಷಗಳ ನಾಯಕರ ಮೇಲೆ ನಿಗಾ ಇರಿಸುತ್ತಾರೆ ಎಂದು ಅಮಿತ್ ಶಾ ಆರೋಪಿಸಿ ಅವರನ್ನು 2016ರ ವಿಧಾನಸಭಾ ಚುನಾವಣೆಯಿಂದ ದೂರವಿರಿಸುವಂತೆ ಮನವಿ ಮಾಡಿದ್ದರು. ಪಶ್ಚಿಮ ಬಂಗಾಳದಲ್ಲಿ ಹಿಂದೆ ಎಡಪಕ್ಷಗಳು ಅಧಿಕಾರದಲ್ಲಿದ್ದಾಗ ಮಮತಾ ಬ್ಯಾನರ್ಜಿ ಸಹ ಇದೇ ತೆರನಾದ ಆರೋಪ ಹೋರಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಘೋಷಣೆಗಳ ಪ್ರವಾಹ: ಬಿಜೆಪಿಗೆ ಬೇಕಾಯ್ತು ಇಟಲಿ ಮೂಲದ ಹಾಡಿನ ಸಹಾಯ

Modipara vs Didir Doot: ಪಶ್ಚಿಮ ಬಂಗಾಳದಲ್ಲಿ ಆ್ಯಪ್​ ಫೈಟ್​! ಬಿಡುಗಡೆ ಆಯ್ತು ಮೋದಿ-ಮಮತಾ ಅಪ್ಲಿಕೇಶ್​​ನಗಳು!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!