AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಪುರಾ: ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ, ಭುಗಿಲೆದ್ದ ಆಕ್ರೋಶ

ತ್ರಿಪುರಾದ ಕಾಲೇಜೊಂದರಲ್ಲಿ ವಸಂತ ಪಂಚಮಿಯಂದು ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿಗೆ ನುಗ್ಗಿ ಸರಸ್ವತಿ ದೇವಿಯ ವಿಗ್ರಹಕ್ಕೆ ಸೀರೆ ಹೊದಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಶಿಕ್ಷಣ ಹಾಗೂ ಜ್ಞಾನದ ಅಧಿದೇವತೆ ಶಾರದೆಯ ಜನ್ಮದಿನದಂದು ಆಕೆಯನ್ನು ಸ್ಮರಿಸಿದರೆ ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ ಎಂಬುದು ನಂಬಿಕೆ.

ತ್ರಿಪುರಾ: ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ, ಭುಗಿಲೆದ್ದ ಆಕ್ರೋಶ
ಸರಸ್ವತಿ
ನಯನಾ ರಾಜೀವ್
|

Updated on: Feb 15, 2024 | 12:11 PM

Share

ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ(Saraswati) ವಿಗ್ರಹಕ್ಕೆ ಪೂಜೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತ್ರಿಪುರಾ ಹತ್ತಿರದ ಲಿಚುಬಗಾನ್​ನ ಕಾಲೇಜಿನಲ್ಲಿ ಪೂಜೆ ಆಚರಣೆಯಲ್ಲಿ ಸರಸ್ವತಿ ವಿಗ್ರಹಕ್ಕೆ ಪೂಜೆ ಮಾಡಲಾಗಿತ್ತು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿಗೆ ನುಗ್ಗಿ ಸರಸ್ವತಿ ದೇವಿಯ ವಿಗ್ರಹಕ್ಕೆ ಸೀರೆ ಹೊದಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಶಿಕ್ಷಣ ಹಾಗೂ ಜ್ಞಾನದ ಅಧಿದೇವತೆ ಶಾರದೆಯ ಜನ್ಮದಿನದಂದು ಆಕೆಯನ್ನು ಸ್ಮರಿಸಿದರೆ ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ ಎಂಬುದು ನಂಬಿಕೆ. ಜೀವನದಲ್ಲಿ ಕೆಲವೊಮ್ಮೆ ಹಣ ಬರುತ್ತದೆ ಮತ್ತು ಹೋಗುತ್ತದೆ. ಅದಕ್ಕಾಗಿಯೇ ಲಕ್ಷ್ಮಿ ದೇವಿಯನ್ನು ಚಂಚಲೆ ಎಂದೂ ಕರೆಯುತ್ತಾರೆ. ಆದರೆ ನಾವು ಕಲಿತ ವಿದ್ಯೆ ಮತ್ತು ಕಷ್ಟಪಟ್ಟು ಸಂಪಾದಿಸಿದ ಜ್ಞಾನ ಎಲ್ಲೂ ಹೋಗುವುದಿಲ್ಲ. ಅದಕ್ಕಾಗಿಯೇ ಅನೇಕ ಜನರು ಶಾರದಾ ದೇವಿಯನ್ನು ಆಕೆಯ ಆಶೀರ್ವಾದಕ್ಕಾಗಿ ಪೂಜಿಸುತ್ತಾರೆ.

ಇಂತಹ ಶುಭ ದಿನದಂದು ಆಘಾತಕಾರಿ ಘಟನೆಯೊಂದು ನಡೆದಿದೆ. ವಸಂತ ಪಂಚಮಿಯಂದು ಸರಸ್ವತಿ ದೇವಿಯ ವಿಗ್ರಹಗಳನ್ನು ಪೂಜಿಸಲಾಗುತ್ತದೆ. ಶಾಲೆ, ಕಾಲೇಜು ಮತ್ತು ಹಳ್ಳಿಗಳಲ್ಲಿ ವಿಶೇಷವಾಗಿ ವೀಣೆ, ಪುಸ್ತಕಗಳು, ಕಮಲದ ಹೂವು ಮತ್ತು ಜಪಮಾಲೆಯನ್ನು ಕೈಯಲ್ಲಿ ಹೊಂದಿರುವ ವಿಗ್ರಹಗಳನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ, ತ್ರಿಪುರಾದ ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿನಲ್ಲಿ ಸರಸ್ವತಿ ದೇವಿಯ ಪ್ರತಿಮೆಯನ್ನು ಅತ್ಯಂತ ತಪ್ಪಾಗಿ ವಿರೂಪಗೊಳಿಸಲಾಗಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Vasant Panchami 2024: ವಸಂತ ಪಂಚಮಿಯ ದಿನ ಈ ವಸ್ತುಗಳನ್ನು ದಾನ ಮಾಡಿ, ಭವಿಷ್ಯವೇ ಬದಲಾಗುತ್ತೆ!

ವಿಗ್ರಹವನ್ನು ಮಾಡುವಾಗ ಸಾಂಪ್ರದಾಯಿಕ ಸೀರೆಯಿಲ್ಲದೆ ತಯಾರಿಸಲಾಯಿತು. ಸೀರೆ ಇಲ್ಲದ ವಿಗ್ರಹವನ್ನು ಪೂಜಿಸಿದ್ದಕ್ಕೆ ಗದ್ದಲ ಶುರುವಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಇಡೀ ಪ್ರದೇಶ ಉದ್ವಿಗ್ನಗೊಂಡಿದೆ.

ಪ್ರತಿಮೆಯು ಹಿಂದೂ ದೇವಾಲಯಗಳ ಸಾಂಪ್ರದಾಯಿಕ ಶಿಲ್ಪಕಲೆಗಳಿಗೆ ಬದ್ಧವಾಗಿದೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶವನ್ನು ಹೊಂದಿಲ್ಲ ಎಂದು ಕಾಲೇಜು ಅಧಿಕಾರಿಗಳು ವಿವರಿಸಿದರು. ಪ್ಲಾಸ್ಟಿಕ್ ಶೀಟ್‌ಗಳಿಂದ ಮುಚ್ಚಿ ಪೂಜಾ ಮಂಟಪದ ಹಿಂದೆ ಇರಿಸಲಾಗಿದೆ. ಆದರೆ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆದರೆ, ಕಾಲೇಜು ಅಥವಾ ಎಬಿವಿಪಿ ಮತ್ತು ಬಜರಂಗದಳ ಅಧಿಕೃತ ದೂರು ದಾಖಲಿಸಿಲ್ಲ.

ಮತ್ತಷ್ಟು ಓದಿ: ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ