AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Unity: 50 ಲಕ್ಷದ ಗಡಿದಾಟಿದೆ ಏಕತಾ ಮೂರ್ತಿ ವೀಕ್ಷಣೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ; ಸ್ಥಳದಲ್ಲಿ ನಡೆದಿವೆ ಹಲವು ಅಭಿವೃದ್ಧಿ ಕಾರ್ಯಗಳು

ಕೆವಾಡಿಯಾಕ್ಕೆ ಹೆಚ್ಚಿನ ರೈಲು ಸೇವೆ ಒದಗಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಎಂಟು ರೈಲುಗಳು ಇಲ್ಲಿಗೆ ಸಂಚರಿಸುವಂತೆ ಇತ್ತೀಚೆಗಷ್ಟೇ ಯೋಜನೆ ರೂಪಿಸಲಾಗಿದೆ. ಹಾಗೇ ಅಹ್ಮದಾಬಾದ್​ನ ಸಬರಮತಿ ನದಿ ಮತ್ತು ಏಕತಾ ಪ್ರತಿಮೆ ಇರುವ ಕೆವಾಡಿಯಾ ಮಧ್ಯೆ ಸೀ-ಪ್ಲೇನ್​ (ಜಲವಿಮಾನ) ಸೇವೆಯನ್ನೂ ಕಲ್ಪಿಸಲಾಗಿದೆ.

Statue of Unity: 50 ಲಕ್ಷದ ಗಡಿದಾಟಿದೆ ಏಕತಾ ಮೂರ್ತಿ ವೀಕ್ಷಣೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ; ಸ್ಥಳದಲ್ಲಿ ನಡೆದಿವೆ ಹಲವು ಅಭಿವೃದ್ಧಿ ಕಾರ್ಯಗಳು
ಏಕತಾ ಮೂರ್ತಿ
Follow us
Lakshmi Hegde
|

Updated on:Mar 15, 2021 | 5:37 PM

ದೆಹಲಿ: ವಿಶ್ವದಲ್ಲೇ ಅತ್ಯಂತ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಗುಜರಾತ್​ನ ನರ್ಮದಾ ಜಿಲ್ಲೆಯ ಕೇವಾಡಿಯಾದಲ್ಲಿರುವ ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರ 182 ಮೀಟರ್​ ಎತ್ತರದ ಏಕತಾ ಮೂರ್ತಿ (Statue of Unity) ಇದೀಗ ಮೈಲಿಗಲ್ಲೊಂದನ್ನು ನಿರ್ಮಿಸಿದೆ. 2018ರ ಅಕ್ಟೋಬರ್​ 31ರಂದು ಲೋಕಾರ್ಪಣೆಗೊಂಡ ಬಳಿಕ ಇದುವರೆಗೆ ಮೂರ್ತಿಯನ್ನು ನೋಡಲು 50 ಲಕ್ಷಕ್ಕೂ ಅಧಿಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದು ಇಂದು ಗುಜರಾತ್​ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಗುಜರಾತ್​​ನ ಅರಣ್ಯ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್​ ಗುಪ್ತಾ ಟ್ವೀಟ್​ ಕೂಡ ಮಾಡಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಏಕತಾ ಮೂರ್ತಿಯ ಫೋಟೋವನ್ನು ಶೇರ್​ ಮಾಡಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಿರ್ಮಿಸಲಾದ ಏಕತಾ ಮೂರ್ತಿ ಇಲ್ಲಿಯವರೆಗೆ 50 ಲಕ್ಷಕ್ಕೂ ಅಧಿಕ ಪ್ರವಾಸಿಗರನ್ನು ಸೆಳೆದಿದೆ. ಇದೀಗ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿದ್ದು, ಎಲ್ಲ ವಯಸ್ಸಿನವರನ್ನೂ ಆಕರ್ಷಿಸುತ್ತಿದೆ ಎಂದು ಬರೆದಿದ್ದಾರೆ.

ಗುಜರಾತ್​ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ಸರ್ದಾರ್​ ಸರೋವರದ ಡ್ಯಾಮ್​​ನ ಸಾಧು ಬೆಟ್​ ದ್ವೀಪದಲ್ಲಿ ನಿರ್ಮಿಸಲಾದ ಸರ್ದಾರ್​ ವಲ್ಲಭಭಾಯಿ ಪಟೇಲ್​ ಏಕತಾ ಮೂರ್ತಿ 2018ರಲ್ಲಿ ಉದ್ಘಾಟನೆಗೊಂಡಾಗಿನಿಂದ ದೇಶದ ಎಲ್ಲ ಕಡೆಯಿಂದ ಜನರು ಅದನ್ನು ನೋಡಲು ತೆರಳುತ್ತಿದ್ದಾರೆ. ಅಷ್ಟೇ ಅಲ್ಲ, ವಿದೇಶಿಗರೂ ಸಹ ಈ ಮೂರ್ತಿಯನ್ನು ವೀಕ್ಷಿಸಲು ಬರುತ್ತಿದ್ದಾರೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದರಿಂದ ಗುಜರಾತ್​ ಸರ್ಕಾರ ಕೂಡ ಹೆಚ್ಚಿನ ಆಸಕ್ತಿ ವಹಿಸಿ ಇಲ್ಲಿನ ಪ್ರದೇಶವನ್ನು ಅಭಿವೃದ್ಧಿಗೊಳಿಸಿದೆ.

ಕೆವಾಡಿಯಾಕ್ಕೆ ಹೆಚ್ಚಿನ ರೈಲು ಸೇವೆ ಒದಗಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಎಂಟು ರೈಲುಗಳು ಇಲ್ಲಿಗೆ ಸಂಚರಿಸುವಂತೆ ಇತ್ತೀಚೆಗಷ್ಟೇ ಯೋಜನೆ ರೂಪಿಸಲಾಗಿದೆ. ಹಾಗೇ ಅಹ್ಮದಾಬಾದ್​ನ ಸಬರಮತಿ ನದಿ ಮತ್ತು ಏಕತಾ ಪ್ರತಿಮೆ ಇರುವ ಕೆವಾಡಿಯಾ ಮಧ್ಯೆ ಸೀ-ಪ್ಲೇನ್​ (ಜಲವಿಮಾನ) ಸೇವೆಯನ್ನೂ ಕಲ್ಪಿಸಲಾಗಿದೆ. ಈ ಯೋಜನೆಯನ್ನು ಸರ್ದಾರ್​ ವಲ್ಲಭಭಾಯಿ ಪಟೇಲ್​ರ ಜನ್ಮ ಶತಮಾನೋತ್ಸವದಂದು ಪ್ರಧಾನಿ ನರೇಂದ್ರ ಮೋದಿಯವರೇ ಉದ್ಘಾಟಿಸಿದ್ದರು. ಇದು ಕೂಡ ದೇಶದಲ್ಲೇ ಮೊದಲ ಜಲವಿಮಾನ ಯೋಜನೆಯಾಗಿದೆ. ಕೊವಿಡ್​-19 ಸೋಂಕಿನ ಕಾರಣದಿಂದ ಕಳೆದ ವರ್ಷ ಏಕತಾ ಮೂರ್ತಿಯನ್ನು ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಇರಲಿಲ್ಲ. 2020ರ ಮಾರ್ಚ್​​ನಿಂದಲೇ ಬಂದ್​ ಆಗಿದ್ದ ಈ ತಾಣವನ್ನು ಮತ್ತೆ ಪ್ರವಾಸಿಗರಿಗೆ ಮುಕ್ತ ಮಾಡಿಕೊಟ್ಟಿದ್ದು ಅಕ್ಟೋಬರ್​ 17ರಂದು. ಆಗಿನಿಂದಲೂ ಭರ್ಜರಿ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

ಧರ್ಮದ ಬಗ್ಗೆ ನಿಷ್ಠೆ ಇಲ್ಲ, ಕುಡಿತ ಹೆಚ್ಚಾಗಿದೆ, ನಾನು ಭ್ರಷ್ಟನಾಗಿದ್ದೇನೆ; ನಟ ಗೋವಿಂದ ಹೀಗಾಗಿದ್ದೇಕೆ?

Published On - 5:34 pm, Mon, 15 March 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು