AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Statue of Unity: 50 ಲಕ್ಷದ ಗಡಿದಾಟಿದೆ ಏಕತಾ ಮೂರ್ತಿ ವೀಕ್ಷಣೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ; ಸ್ಥಳದಲ್ಲಿ ನಡೆದಿವೆ ಹಲವು ಅಭಿವೃದ್ಧಿ ಕಾರ್ಯಗಳು

ಕೆವಾಡಿಯಾಕ್ಕೆ ಹೆಚ್ಚಿನ ರೈಲು ಸೇವೆ ಒದಗಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಎಂಟು ರೈಲುಗಳು ಇಲ್ಲಿಗೆ ಸಂಚರಿಸುವಂತೆ ಇತ್ತೀಚೆಗಷ್ಟೇ ಯೋಜನೆ ರೂಪಿಸಲಾಗಿದೆ. ಹಾಗೇ ಅಹ್ಮದಾಬಾದ್​ನ ಸಬರಮತಿ ನದಿ ಮತ್ತು ಏಕತಾ ಪ್ರತಿಮೆ ಇರುವ ಕೆವಾಡಿಯಾ ಮಧ್ಯೆ ಸೀ-ಪ್ಲೇನ್​ (ಜಲವಿಮಾನ) ಸೇವೆಯನ್ನೂ ಕಲ್ಪಿಸಲಾಗಿದೆ.

Statue of Unity: 50 ಲಕ್ಷದ ಗಡಿದಾಟಿದೆ ಏಕತಾ ಮೂರ್ತಿ ವೀಕ್ಷಣೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ; ಸ್ಥಳದಲ್ಲಿ ನಡೆದಿವೆ ಹಲವು ಅಭಿವೃದ್ಧಿ ಕಾರ್ಯಗಳು
ಏಕತಾ ಮೂರ್ತಿ
Lakshmi Hegde
|

Updated on:Mar 15, 2021 | 5:37 PM

Share

ದೆಹಲಿ: ವಿಶ್ವದಲ್ಲೇ ಅತ್ಯಂತ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಗುಜರಾತ್​ನ ನರ್ಮದಾ ಜಿಲ್ಲೆಯ ಕೇವಾಡಿಯಾದಲ್ಲಿರುವ ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರ 182 ಮೀಟರ್​ ಎತ್ತರದ ಏಕತಾ ಮೂರ್ತಿ (Statue of Unity) ಇದೀಗ ಮೈಲಿಗಲ್ಲೊಂದನ್ನು ನಿರ್ಮಿಸಿದೆ. 2018ರ ಅಕ್ಟೋಬರ್​ 31ರಂದು ಲೋಕಾರ್ಪಣೆಗೊಂಡ ಬಳಿಕ ಇದುವರೆಗೆ ಮೂರ್ತಿಯನ್ನು ನೋಡಲು 50 ಲಕ್ಷಕ್ಕೂ ಅಧಿಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದು ಇಂದು ಗುಜರಾತ್​ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಗುಜರಾತ್​​ನ ಅರಣ್ಯ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್​ ಗುಪ್ತಾ ಟ್ವೀಟ್​ ಕೂಡ ಮಾಡಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಏಕತಾ ಮೂರ್ತಿಯ ಫೋಟೋವನ್ನು ಶೇರ್​ ಮಾಡಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಿರ್ಮಿಸಲಾದ ಏಕತಾ ಮೂರ್ತಿ ಇಲ್ಲಿಯವರೆಗೆ 50 ಲಕ್ಷಕ್ಕೂ ಅಧಿಕ ಪ್ರವಾಸಿಗರನ್ನು ಸೆಳೆದಿದೆ. ಇದೀಗ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿದ್ದು, ಎಲ್ಲ ವಯಸ್ಸಿನವರನ್ನೂ ಆಕರ್ಷಿಸುತ್ತಿದೆ ಎಂದು ಬರೆದಿದ್ದಾರೆ.

ಗುಜರಾತ್​ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ಸರ್ದಾರ್​ ಸರೋವರದ ಡ್ಯಾಮ್​​ನ ಸಾಧು ಬೆಟ್​ ದ್ವೀಪದಲ್ಲಿ ನಿರ್ಮಿಸಲಾದ ಸರ್ದಾರ್​ ವಲ್ಲಭಭಾಯಿ ಪಟೇಲ್​ ಏಕತಾ ಮೂರ್ತಿ 2018ರಲ್ಲಿ ಉದ್ಘಾಟನೆಗೊಂಡಾಗಿನಿಂದ ದೇಶದ ಎಲ್ಲ ಕಡೆಯಿಂದ ಜನರು ಅದನ್ನು ನೋಡಲು ತೆರಳುತ್ತಿದ್ದಾರೆ. ಅಷ್ಟೇ ಅಲ್ಲ, ವಿದೇಶಿಗರೂ ಸಹ ಈ ಮೂರ್ತಿಯನ್ನು ವೀಕ್ಷಿಸಲು ಬರುತ್ತಿದ್ದಾರೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದರಿಂದ ಗುಜರಾತ್​ ಸರ್ಕಾರ ಕೂಡ ಹೆಚ್ಚಿನ ಆಸಕ್ತಿ ವಹಿಸಿ ಇಲ್ಲಿನ ಪ್ರದೇಶವನ್ನು ಅಭಿವೃದ್ಧಿಗೊಳಿಸಿದೆ.

ಕೆವಾಡಿಯಾಕ್ಕೆ ಹೆಚ್ಚಿನ ರೈಲು ಸೇವೆ ಒದಗಿಸಲಾಗಿದೆ. ದೇಶದ ವಿವಿಧ ಭಾಗಗಳಿಂದ ಎಂಟು ರೈಲುಗಳು ಇಲ್ಲಿಗೆ ಸಂಚರಿಸುವಂತೆ ಇತ್ತೀಚೆಗಷ್ಟೇ ಯೋಜನೆ ರೂಪಿಸಲಾಗಿದೆ. ಹಾಗೇ ಅಹ್ಮದಾಬಾದ್​ನ ಸಬರಮತಿ ನದಿ ಮತ್ತು ಏಕತಾ ಪ್ರತಿಮೆ ಇರುವ ಕೆವಾಡಿಯಾ ಮಧ್ಯೆ ಸೀ-ಪ್ಲೇನ್​ (ಜಲವಿಮಾನ) ಸೇವೆಯನ್ನೂ ಕಲ್ಪಿಸಲಾಗಿದೆ. ಈ ಯೋಜನೆಯನ್ನು ಸರ್ದಾರ್​ ವಲ್ಲಭಭಾಯಿ ಪಟೇಲ್​ರ ಜನ್ಮ ಶತಮಾನೋತ್ಸವದಂದು ಪ್ರಧಾನಿ ನರೇಂದ್ರ ಮೋದಿಯವರೇ ಉದ್ಘಾಟಿಸಿದ್ದರು. ಇದು ಕೂಡ ದೇಶದಲ್ಲೇ ಮೊದಲ ಜಲವಿಮಾನ ಯೋಜನೆಯಾಗಿದೆ. ಕೊವಿಡ್​-19 ಸೋಂಕಿನ ಕಾರಣದಿಂದ ಕಳೆದ ವರ್ಷ ಏಕತಾ ಮೂರ್ತಿಯನ್ನು ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಇರಲಿಲ್ಲ. 2020ರ ಮಾರ್ಚ್​​ನಿಂದಲೇ ಬಂದ್​ ಆಗಿದ್ದ ಈ ತಾಣವನ್ನು ಮತ್ತೆ ಪ್ರವಾಸಿಗರಿಗೆ ಮುಕ್ತ ಮಾಡಿಕೊಟ್ಟಿದ್ದು ಅಕ್ಟೋಬರ್​ 17ರಂದು. ಆಗಿನಿಂದಲೂ ಭರ್ಜರಿ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

ಧರ್ಮದ ಬಗ್ಗೆ ನಿಷ್ಠೆ ಇಲ್ಲ, ಕುಡಿತ ಹೆಚ್ಚಾಗಿದೆ, ನಾನು ಭ್ರಷ್ಟನಾಗಿದ್ದೇನೆ; ನಟ ಗೋವಿಂದ ಹೀಗಾಗಿದ್ದೇಕೆ?

Published On - 5:34 pm, Mon, 15 March 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು