AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khap Mahapanchayat: ಒಂದೇ ಗ್ರಾಮ, ಒಂದೇ ಗೋತ್ರ ವಿವಾಹಗಳನ್ನು ನಿಷೇಧಿಸುವಂತೆ ಆಗ್ರಹಿಸಿದ ಸರ್ವ ಜಾತಿಯ ಖಾಪ್ ಮಹಾಪಂಚಾಯತ್

ಸರ್ವ ಜಾತಿಯ ಖಾಪ್ ಮಹಾಪಂಚಾಯತ್ ಮಂಗಳವಾರ ಹಿಂದೂ ವಿವಾಹ ಕಾಯಿದೆಯಲ್ಲಿ ಅದೇ ಗ್ರಾಮದೊಳಗೆ ಮತ್ತು ಒಂದೇ ಗೋತ್ರದ ಜನರ ನಡುವೆ ವಿವಾಹಗಳನ್ನು ನಿಷೇಧಿಸಲು ತಿದ್ದುಪಡಿಯನ್ನು ಒತ್ತಾಯಿಸಿತು.

Khap Mahapanchayat: ಒಂದೇ ಗ್ರಾಮ, ಒಂದೇ ಗೋತ್ರ ವಿವಾಹಗಳನ್ನು ನಿಷೇಧಿಸುವಂತೆ ಆಗ್ರಹಿಸಿದ ಸರ್ವ ಜಾತಿಯ ಖಾಪ್ ಮಹಾಪಂಚಾಯತ್
TV9 Web
| Edited By: |

Updated on: Oct 05, 2022 | 6:01 PM

Share

ಸರ್ವ ಜಾತಿಯ ಖಾಪ್ ಮಹಾಪಂಚಾಯತ್ ಮಂಗಳವಾರ ಹಿಂದೂ ವಿವಾಹ ಕಾಯಿದೆಯಲ್ಲಿ ಅದೇ ಗ್ರಾಮದೊಳಗೆ ಮತ್ತು ಒಂದೇ ಗೋತ್ರದ ಜನರ ನಡುವೆ ವಿವಾಹಗಳನ್ನು ನಿಷೇಧಿಸಲು ತಿದ್ದುಪಡಿಯನ್ನು ಒತ್ತಾಯಿಸಿತು.ಸಂಸ್ಥೆಯ ರಾಷ್ಟ್ರೀಯ ಸಂಚಾಲಕ ಟೆಕ್ ರಾಮ್ ಕಾಂಡೇಲಾ ಅವರ ಅಧ್ಯಕ್ಷತೆಯಲ್ಲಿ ಹರಿಯಾಣದ ಜಿಂದ್‌ನಲ್ಲಿ ಮಹಾಪಂಚಾಯತ್ ನಡೆಯಿತು. ಉತ್ತರ ಭಾರತದ ವಿವಿಧ ರಾಜ್ಯಗಳ ಒಟ್ಟು 150 ಖಾಪ್ (ಕೌನ್ಸಿಲ್), ವಿವಿಧ ಸಾಮಾಜಿಕ ಸಂಘಟನೆಗಳು ಮತ್ತು ಇತರರು ಇದರಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಯಿತು ಎಂದು ಕಾಂಡೇಲಾ ತಿಳಿಸಿದರು. ಹಿಂದೂ ವಿವಾಹ ಕಾಯಿದೆಗೆ ತಿದ್ದುಪಡಿ ತಂದು ಒಂದೇ ಗ್ರಾಮ ಹಾಗೂ ಪಕ್ಕದ ಗ್ರಾಮ ಹಾಗೂ ಒಂದೇ ಗೋತ್ರದಲ್ಲಿ ನಡೆಯುವ ವಿವಾಹಗಳನ್ನು ನಿಷೇಧಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದೇವೆ ಎಂದರು.ಇತ್ತೀಚಿಗೆ ಸುರಿದ ಮಳೆಯಿಂದ ಆಗಿರುವ ಬೆಳೆ ಹಾನಿಯ ಕುರಿತು ವಿಶೇಷ ಗಿರ್ದಾವರಿ (ಸಮೀಕ್ಷೆ) ನಡೆಸಿ ನಷ್ಟ ಅನುಭವಿಸಿದವರಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಮಹಾಪಂಚಾಯತ್‌ನಲ್ಲಿ ಪ್ರಸ್ತಾಪಿಸಿದ ಇತರ ಬೇಡಿಕೆಗಳನ್ನು ಉಲ್ಲೇಖಿಸಿ ಕಂಡೇಲ ಹೇಳಿದರು.

ಇದನ್ನು ಓದಿ: ಹಿಂದೂ-ಮುಸ್ಲಿಂ ಡಿಎನ್​ಎ ಒಂದೇ ಎಂದಮೇಲೆ ಅಸಮತೋಲನ ಎಲ್ಲಿದೆ?; ಮೋಹನ್ ಭಾಗವತ್​ಗೆ ಓವೈಸಿ ತಿರುಗೇಟು

ಇನ್ನೂ ಜಲಾವೃತ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ನೀರು ಹರಿಸಲು ತಕ್ಷಣದ ವ್ಯವಸ್ಥೆ ಮಾಡಬೇಕು ಎಂದರು. ಯುವಕರನ್ನು ಮಾದಕ ವಸ್ತುಗಳಿಂದ ದೂರವಿಡಲು ಪ್ರತಿ ಗ್ರಾಮಗಳಲ್ಲಿ ಕಂಡೇಲ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಷ್ಟದ ಕುರಿತು ದಾಖಲೆ ಸಿದ್ಧಪಡಿಸಿ ಮುಖ್ಯಮಂತ್ರಿ ಹಾಗೂ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ನಿರ್ಣಯ ಅಂಗೀಕರಿಸಲಾಯಿತು.ಕಾಂಡೇಲಾ ಖಾಪ್‌ನ ಮುಖ್ಯಸ್ಥರಾದ ಕಾಂಡೇಲಾ, ಖಾಪ್ ಮಹಾಪಂಚಾಯತ್ ಇತರ ಹಲವಾರು ವಿಷಯಗಳ ಬಗ್ಗೆ ಕುರಿತು ಮುಖ್ಯಮಂತ್ರಿಯನ್ನು ಭೇಟಿಯಾಗಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್