AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?

ಆಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ 27ನೇ ತಾರೀಖು ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?
ವಿ.ಕೆ.ಶಶಿಕಲಾ ನಟರಾಜನ್
ಪೃಥ್ವಿಶಂಕರ
| Edited By: |

Updated on:Feb 10, 2021 | 3:10 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಶಶಿಕಲಾ ನಟರಾಜನ್​ ಇಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ 27ನೇ ತಾರೀಖು ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು. ಆದರೆ ಜೈಲಿನಲ್ಲಿದ್ದ ವೇಳೆ ಶಶಿಕಲಾ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಿಂದಾಗಿ ಇದೇ ತಿಂಗಳ 20 ರಂದು ಬೌರಿಂಗ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಬಳಿಕ ಸಿಟಿ ಸ್ಕ್ಯಾನ್​ಗೆಂದು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿತ್ತು.

21ನೇ ತಾರೀಖು ಶಶಿಕಲಾ ಸ್ವಾಬ್ ಟೆಸ್ಟ್ ವೇಳೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 27ನೇ ತಾರೀಖು ಜೈಲಿನಿಂದ ಬಿಡುಗಡೆಯಾದರು ಶಶಿಕಲಾ ಆಸ್ಪತ್ರೆಯಲ್ಲಿ ಉಳಿಯಬೇಕಾಯಿತು. ಸದ್ಯ ಕೊವಿಡ್ ಪ್ರೊಟೊಕಾಲ್ ಪ್ರಕಾರ ಚಿಕಿತ್ಸೆ ಪೂರ್ಣಗೊಂಡಿರುವುದರಿಂದ ಇಂದು ಆಸ್ಪತ್ರೆಯಿಂದ ಶಶಿಕಲಾ ಡಿಸ್ಚಾರ್ಜ್ ಆಗಿದ್ದಾರೆ.

ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ.. ಸದ್ಯ ಪುಷ್ಯ ಮಾಸ ನಡೆಯುತ್ತಿದ್ದು ಫೆಬ್ರವರಿ ಹನ್ನೊಂದರ ನಂತರ ಮಾಘಮಾಸ ಶುರುವಾಗಲಿದೆ. ಹೀಗಾಗಿ ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಶಶಿಕಲಾ ತಯಾರಿ ನಡೆಸಿದ್ದಾರೆಂದು ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ. ಮಾಘಮಾಸದಲ್ಲಿ ಎಂಟ್ರಿಯಾದ್ರೆ ಶುಭವಾಗಲಿದೆ ಅನ್ನೋ ನಂಬಿಕೆಯಿಂದಾಗಿ ಈ ತೀರ್ಮಾನಕ್ಕೆ ಬರಲಾಗಿದೆ.

ಫೆಬ್ರವರಿ ಹನ್ನೊಂದರ ನಂತರ ಅದ್ದೂರಿ ಮೇರವಣಿಗೆ ಮೂಲಕ ತವರಿಗೆ ಮರಳಲು ಶಶಿಕಲಾ ಮತ್ತು ಆಪ್ತರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಬೇಕಾದ ಪೂರಕ ಸಿದ್ದತೆ ನಡೆಸಿ, ಅಮಾವಾಸ್ಯೆ ನಂತರ ನಿರ್ದಿಷ್ಟ ದಿನಾಂಕ ನಿಗದಿ ಮಾಡಿ ತಮಿಳುನಾಡಿಗೆ ಎಂಟ್ರಿಕೊಡಲಿದ್ದಾರೆ. ಈ‌ ಹಿನ್ನೆಲೆಯಲ್ಲಿ ಇಂದು ಹೊಸೂರು, ಅಥವಾ ಬೆಂಗಳೂರಿನ ಅಪ್ತರ ಐಷಾರಾಮಿ ಮನೆಯಲ್ಲಿ ಶಶಿಕಲಾ ವಾಸ್ತವ್ಯ ಹೂಡಲಿದ್ದಾರೆ.

ಶಶಿಕಲಾಗೆ ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ -ವಿಕ್ಟೋರಿಯಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

Published On - 12:37 pm, Sun, 31 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ