AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?

ಆಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ 27ನೇ ತಾರೀಖು ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?
ವಿ.ಕೆ.ಶಶಿಕಲಾ ನಟರಾಜನ್
ಪೃಥ್ವಿಶಂಕರ
| Edited By: |

Updated on:Feb 10, 2021 | 3:10 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಶಶಿಕಲಾ ನಟರಾಜನ್​ ಇಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ 27ನೇ ತಾರೀಖು ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಲಾಗಿತ್ತು. ಆದರೆ ಜೈಲಿನಲ್ಲಿದ್ದ ವೇಳೆ ಶಶಿಕಲಾ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಿಂದಾಗಿ ಇದೇ ತಿಂಗಳ 20 ರಂದು ಬೌರಿಂಗ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಬಳಿಕ ಸಿಟಿ ಸ್ಕ್ಯಾನ್​ಗೆಂದು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿತ್ತು.

21ನೇ ತಾರೀಖು ಶಶಿಕಲಾ ಸ್ವಾಬ್ ಟೆಸ್ಟ್ ವೇಳೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 27ನೇ ತಾರೀಖು ಜೈಲಿನಿಂದ ಬಿಡುಗಡೆಯಾದರು ಶಶಿಕಲಾ ಆಸ್ಪತ್ರೆಯಲ್ಲಿ ಉಳಿಯಬೇಕಾಯಿತು. ಸದ್ಯ ಕೊವಿಡ್ ಪ್ರೊಟೊಕಾಲ್ ಪ್ರಕಾರ ಚಿಕಿತ್ಸೆ ಪೂರ್ಣಗೊಂಡಿರುವುದರಿಂದ ಇಂದು ಆಸ್ಪತ್ರೆಯಿಂದ ಶಶಿಕಲಾ ಡಿಸ್ಚಾರ್ಜ್ ಆಗಿದ್ದಾರೆ.

ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ.. ಸದ್ಯ ಪುಷ್ಯ ಮಾಸ ನಡೆಯುತ್ತಿದ್ದು ಫೆಬ್ರವರಿ ಹನ್ನೊಂದರ ನಂತರ ಮಾಘಮಾಸ ಶುರುವಾಗಲಿದೆ. ಹೀಗಾಗಿ ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಶಶಿಕಲಾ ತಯಾರಿ ನಡೆಸಿದ್ದಾರೆಂದು ಆಪ್ತ ಮೂಲಗಳಿಂದ ಮಾಹಿತಿ ದೊರೆತಿದೆ. ಮಾಘಮಾಸದಲ್ಲಿ ಎಂಟ್ರಿಯಾದ್ರೆ ಶುಭವಾಗಲಿದೆ ಅನ್ನೋ ನಂಬಿಕೆಯಿಂದಾಗಿ ಈ ತೀರ್ಮಾನಕ್ಕೆ ಬರಲಾಗಿದೆ.

ಫೆಬ್ರವರಿ ಹನ್ನೊಂದರ ನಂತರ ಅದ್ದೂರಿ ಮೇರವಣಿಗೆ ಮೂಲಕ ತವರಿಗೆ ಮರಳಲು ಶಶಿಕಲಾ ಮತ್ತು ಆಪ್ತರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಬೇಕಾದ ಪೂರಕ ಸಿದ್ದತೆ ನಡೆಸಿ, ಅಮಾವಾಸ್ಯೆ ನಂತರ ನಿರ್ದಿಷ್ಟ ದಿನಾಂಕ ನಿಗದಿ ಮಾಡಿ ತಮಿಳುನಾಡಿಗೆ ಎಂಟ್ರಿಕೊಡಲಿದ್ದಾರೆ. ಈ‌ ಹಿನ್ನೆಲೆಯಲ್ಲಿ ಇಂದು ಹೊಸೂರು, ಅಥವಾ ಬೆಂಗಳೂರಿನ ಅಪ್ತರ ಐಷಾರಾಮಿ ಮನೆಯಲ್ಲಿ ಶಶಿಕಲಾ ವಾಸ್ತವ್ಯ ಹೂಡಲಿದ್ದಾರೆ.

ಶಶಿಕಲಾಗೆ ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ -ವಿಕ್ಟೋರಿಯಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

Published On - 12:37 pm, Sun, 31 January 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ