AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ

ದೃಷ್ಟಿ ತೆಗೆದು ಚಿನ್ನಮ್ಮಳನ್ನ ಸ್ವಾಗತಿಸಲು ಅಭಿಮಾನಿಗಳು ತೆಂಗಿನಕಾಯಿ, ಪೂಜಾ ಸಾಮಾನುಗಳನ್ನು ತಂದಿದ್ದರು. ಜೊತೆಗೆ ತಿರುಪತಿ ಸೇರಿದಂತೆ ಹಲವು ದೇವಸ್ಥಾನಗಳಿಂದ ಅರ್ಚಕರು ಪ್ರಸಾದವನ್ನು ತಂದಿದ್ದರು.

ತವರಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್; ಅಭಿಮಾನಿಗಳನ್ನು ಕಂಡು ಭಾವುಕ
ಬೆಂಬಲಿಗರೊಂದಿಗೆ ತವರಿಗೆ ಹೊರಟ ಶಶಿಕಲಾ ನಟರಾಜನ್
sandhya thejappa
| Edited By: |

Updated on:Feb 10, 2021 | 3:11 PM

Share

ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ಸೆರೆವಾಸ ಅನುಭವಿಸಿ ಚೆನ್ನೈಗೆ ತೆರಳುತ್ತಿರುವ ಶಶಿಕಲಾ ನಟರಾಜನ್ ಮಾರ್ಗ ಮಧ್ಯೆ ಅಭಿಮಾನಿಗಳನ್ನು ಕಂಡು ಭಾವುಕರಾದರು. ಬೆಳಗ್ಗೆ ರೆಸಾರ್ಟ್​ನಿಂದ ಹೊರಟ ಶಶಿಕಲಾಗೆ 8 ಕ್ಕು ಹೆಚ್ಚು ವಾಹನಗಳಲ್ಲಿ ಅಂಗ ರಕ್ಷಕರನ್ನು ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ 50ಕ್ಕು ಹೆಚ್ಚು ವಾಹನಗಳಲ್ಲಿ ಬೆಂಬಲಿಗರು ಅಗಮಿಸಿದ್ದರು. ದೃಷ್ಟಿ ತೆಗೆದು ಚಿನ್ನಮ್ಮಳನ್ನ ಸ್ವಾಗತಿಸಲು ಅಭಿಮಾನಿಗಳು ತೆಂಗಿನಕಾಯಿ, ಪೂಜಾ ಸಾಮಾನುಗಳನ್ನು ತಂದಿದ್ದರು. ಜೊತೆಗೆ ತಿರುಪತಿ ಸೇರಿದಂತೆ ಹಲವು ದೇವಸ್ಥಾನಗಳಿಂದ ಅರ್ಚಕರು ಪ್ರಸಾದವನ್ನು ತಂದಿದ್ದರು.

ಶಶಿಕಲಾ ಆಗಮನದ ಹಿನ್ನೆಲೆಯಲ್ಲಿ ಜಯಲಲಿತ ಮತ್ತು ಚಿನ್ನಮ್ಮರ ಪೋಟೋ ಹಿಡಿದು ಅಭಿಮಾನಿಗಳು ಭರ್ಜರಿ ಡ್ಯಾನ್ಸ್ ಮಾಡಿದರು. ನಜೀರ್ ಅಹ್ಮದ್ ಎಂಬ ಅಂಗವಿಕಲ ಅಭಿಮಾನಿ ಒಂದೇ ಕೈಯಲ್ಲಿ ಪೋಟೋ ಹಿಡಿದು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಸಂಭ್ರಮಿಸಿದರು.

ಮತ್ತೊಂದು ಶಾಕ್ ಸುಪ್ರೀಂ ಕೋರ್ಟ್ ಆದೇಶದಂತೆ ಜಯಲಲಿತಾ ದತ್ತು ಪುತ್ರ ಸುಧಾಕರನ್ ಅಸ್ತಿಯನ್ನು ಸರ್ಕಾರ ಜಪ್ತಿ ಮಾಡಿದೆ. ಶಶಿಕಲಾ ಜೊತೆಯಲ್ಲಿ 4 ವರ್ಷಗಳ ಕಾಲ ಜೈಲಿನಲ್ಲಿದ್ದ ಸುಧಾಕರನ್ ದಂಡವನ್ನು ಭರಿಸದ ಕಾರಣ ಇನ್ನೂ ಜೈಲುವಾಸ ಅನುಭವಿಸುತ್ತಿದ್ದಾರೆ.

ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ತಮಿಳುನಾಡಿಗೆ ಗ್ರ್ಯಾಂಡ್ ವೆಲ್ಕಮ್ ಮಾಡಲು ಚಿನ್ನಮ್ಮ ಬೆಂಬಲಿಗರು ಪ್ಲಾನ್ ಮಾಡಿಕೊಂಡಿದ್ದಾರೆ. ಜಯಲಲಿತಾ ಱಲಿಯ ರೀತಿಯಲ್ಲಿ ಶಶಿಕಲಾ ಱಲಿ ಮಾಡಲು ಸಿದ್ಧತೆ ಮಾಡಿಕೊಂದಿದ್ದಾರೆ. ಜೊತೆಗೆ ಹೊಸೂರು ಬಳಿಯಿರುವ ತಮಿಳುನಾಡು ಕರ್ನಾಟಕ ಗಡಿಯಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.

ಅಭಿಮಾನಿಗಳ ಆಕ್ರೋಶ ತಮಿಳುನಾಡು ಜನ ಚಿನ್ನಮ್ಮ ಜೊತೆ ಇದ್ದಾರೆ. ರಾಜ್ಯದಲ್ಲಿ ಮುಂದೆ ಜಯಲಲಿತಾ ಅಮ್ಮ ಕೆಲಸವನ್ನು ಚಿನ್ನಮ್ಮ ಮಾಡುತ್ತಾರೆ. ನಮ್ಮ ಮತ ವಿಭಜನೆ ಆಗಲ್ಲ. ಚಿನ್ನಮ್ಮ ಎಲ್ಲಿ ಇರುತ್ತಾರೋ ಎಐಎಡಿಎಂಕೆ ಮತ ಅಲ್ಲಿ ಇರುತ್ತೆ ಎಂದು ಪಳನಿಸ್ವಾಮಿ ಮತ್ತು ಪನ್ನಿರ್ ಸೆಳ್ವಾಂ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

Published On - 10:21 am, Mon, 8 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ