AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗುತ್ತಿದೆ ಶ್ರೀರಾಮಂದಿರ ನಿರ್ಮಾಣ ಕಾರ್ಯ; ಸ್ಥಳದ ಚಿತ್ರಣ ತೋರಿಸುವ ಸೆಟಲೈಟ್ ಫೋಟೋ ಬಿಡುಗಡೆ

ಅಯೋಧ್ಯೆ ರಾಮಮಂದಿರದ ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನು ಸ್ವಚ್ಛಗೊಳಿಸಿ, ಕಾಂಕ್ರೀಟ್​ ಹಾಕಲು ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿರುವುದು ಸೆಟಲೈಟ್​ ಫೋಟೋದಿಂದ ಕಾಣುತ್ತಿದೆ.

ಭರದಿಂದ ಸಾಗುತ್ತಿದೆ ಶ್ರೀರಾಮಂದಿರ ನಿರ್ಮಾಣ ಕಾರ್ಯ; ಸ್ಥಳದ ಚಿತ್ರಣ ತೋರಿಸುವ ಸೆಟಲೈಟ್ ಫೋಟೋ ಬಿಡುಗಡೆ
ಕಲಾವಿದನ ಕಲ್ಪನೆಯಲ್ಲಿ ಅಯೋದ್ಯೆ ರಾಮಮಂದಿರ
TV9 Web
| Edited By: |

Updated on: Jun 30, 2021 | 4:01 PM

Share

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಕೊವಿಡ್​ 19 ಎರಡನೇ ಅಲೆ ಹೊತ್ತಲ್ಲೂ ಕಾಮಗಾರಿ ನಿಂತಿಲ್ಲ. ಅಲ್ಲೀಗ ಚಿತ್ರಣವೇ ಬದಲಾಗಿದ್ದು, ಅದರ ಸೆಟಲೈಟ್​ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ರಾಮಮಂದಿರವಿದ್ದ ಸ್ಥಳ ಮೊದಲು ಹೇಗಿತ್ತು? ಈಗ ಹೇಗಾಗಿದೆ ಎಂಬುದರ ಸ್ಪಷ್ಟ ಬದಲಾವಣೆಯನ್ನು ಫೋಟೋದಲ್ಲಿ ಕಾಣಬಹುದು.

ಅಯೋಧ್ಯೆ ರಾಮಮಂದಿರದ ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನು ಸ್ವಚ್ಛಗೊಳಿಸಿ, ಕಾಂಕ್ರೀಟ್​ ಹಾಕಲು ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿರುವುದು ಸೆಟಲೈಟ್​ ಫೋಟೋದಿಂದ ಕಾಣುತ್ತಿದೆ. ಅಲ್ಲೆಲ್ಲ ಕೆಲಸಗಾರರು, ಇಂಜನಿಯರ್​ಗಳು ಇದ್ದಾರೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನು ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಸಂಬಂಧಪಟ್ಟ ಇಂಜಿನಿಯರ್​ಗಳಿಗೆ ಸೂಚಿಸಿದೆ.

ಶ್ರೀರಾಮಮಂದಿರಕ್ಕೆ ರೋಲರ್​ ಕಾಂಪ್ಯಾಕ್ಟೆಡ್​ ಕಾಂಕ್ರೀಟ್​​ (ಆರ್​ಸಿಸಿ)ನ ಅಡಿಪಾಯ ಹಾಕಲಾಗುವುದು. ಇದರ ಅನ್ವಯ 1,20,000 ಚದರ ಅಡಿ ಪ್ರದೇಶದಲ್ಲಿ 40-45 ಪದರ ಕಾಂಕ್ರೀಟ್ ಹಾಕಲಾಗುವುದು. ಅದರಲ್ಲಿ 4 ಲೇಯರ್​​ಗಳಷ್ಟೇ ಮುಗಿದಿದೆ ಎಂದೂ ಟ್ರಸ್ಟ್ ಮೇ 31ರಂದು ಮಾಹಿತಿ ನೀಡಿತ್ತು. ಈಗಾಗಲೇ 1,20,000 ಘನ ಮೀಟರ್​ ಪ್ರದೇಶಗಳಲ್ಲಿ ಮಣ್ಣು ಅಗೆಯಲಾಗಿದ್ದು, ಅದನ್ನೆಲ್ಲ ತೆರವುಗೊಳಿಸಲಾಗಿದೆ. ಅಕ್ಟೋಬರ್ ಅಷ್ಟೊತ್ತಿಗೆ 45 ಪದರಗಳ ಕಾಂಕ್ರೀಟ್ ಹಾಕುವ ಕೆಲಸ ಮುಗಿಯಬಹುದು ಎಂದೂ ಟ್ರಸ್ಟ್​ ತಿಳಿಸಿದೆ. ಇಲ್ಲಿದೆ ನೋಡಿ ಸೆಟಲೈಟ್​​ ಮೂಲಕ ಸೆರೆ ಹಿಡಿಯಲಾದ ಶ್ರೀರಾಮಮಂದಿರ ಸ್ಥಳದ ಚಿತ್ರ..

Shreeram Temple

ಸೆಟಲೈಟ್​ ಚಿತ್ರ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್