AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗುತ್ತಿದೆ ಶ್ರೀರಾಮಂದಿರ ನಿರ್ಮಾಣ ಕಾರ್ಯ; ಸ್ಥಳದ ಚಿತ್ರಣ ತೋರಿಸುವ ಸೆಟಲೈಟ್ ಫೋಟೋ ಬಿಡುಗಡೆ

ಅಯೋಧ್ಯೆ ರಾಮಮಂದಿರದ ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನು ಸ್ವಚ್ಛಗೊಳಿಸಿ, ಕಾಂಕ್ರೀಟ್​ ಹಾಕಲು ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿರುವುದು ಸೆಟಲೈಟ್​ ಫೋಟೋದಿಂದ ಕಾಣುತ್ತಿದೆ.

ಭರದಿಂದ ಸಾಗುತ್ತಿದೆ ಶ್ರೀರಾಮಂದಿರ ನಿರ್ಮಾಣ ಕಾರ್ಯ; ಸ್ಥಳದ ಚಿತ್ರಣ ತೋರಿಸುವ ಸೆಟಲೈಟ್ ಫೋಟೋ ಬಿಡುಗಡೆ
ಕಲಾವಿದನ ಕಲ್ಪನೆಯಲ್ಲಿ ಅಯೋದ್ಯೆ ರಾಮಮಂದಿರ
TV9 Web
| Edited By: |

Updated on: Jun 30, 2021 | 4:01 PM

Share

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಕೊವಿಡ್​ 19 ಎರಡನೇ ಅಲೆ ಹೊತ್ತಲ್ಲೂ ಕಾಮಗಾರಿ ನಿಂತಿಲ್ಲ. ಅಲ್ಲೀಗ ಚಿತ್ರಣವೇ ಬದಲಾಗಿದ್ದು, ಅದರ ಸೆಟಲೈಟ್​ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ರಾಮಮಂದಿರವಿದ್ದ ಸ್ಥಳ ಮೊದಲು ಹೇಗಿತ್ತು? ಈಗ ಹೇಗಾಗಿದೆ ಎಂಬುದರ ಸ್ಪಷ್ಟ ಬದಲಾವಣೆಯನ್ನು ಫೋಟೋದಲ್ಲಿ ಕಾಣಬಹುದು.

ಅಯೋಧ್ಯೆ ರಾಮಮಂದಿರದ ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನು ಸ್ವಚ್ಛಗೊಳಿಸಿ, ಕಾಂಕ್ರೀಟ್​ ಹಾಕಲು ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿರುವುದು ಸೆಟಲೈಟ್​ ಫೋಟೋದಿಂದ ಕಾಣುತ್ತಿದೆ. ಅಲ್ಲೆಲ್ಲ ಕೆಲಸಗಾರರು, ಇಂಜನಿಯರ್​ಗಳು ಇದ್ದಾರೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನು ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಸಂಬಂಧಪಟ್ಟ ಇಂಜಿನಿಯರ್​ಗಳಿಗೆ ಸೂಚಿಸಿದೆ.

ಶ್ರೀರಾಮಮಂದಿರಕ್ಕೆ ರೋಲರ್​ ಕಾಂಪ್ಯಾಕ್ಟೆಡ್​ ಕಾಂಕ್ರೀಟ್​​ (ಆರ್​ಸಿಸಿ)ನ ಅಡಿಪಾಯ ಹಾಕಲಾಗುವುದು. ಇದರ ಅನ್ವಯ 1,20,000 ಚದರ ಅಡಿ ಪ್ರದೇಶದಲ್ಲಿ 40-45 ಪದರ ಕಾಂಕ್ರೀಟ್ ಹಾಕಲಾಗುವುದು. ಅದರಲ್ಲಿ 4 ಲೇಯರ್​​ಗಳಷ್ಟೇ ಮುಗಿದಿದೆ ಎಂದೂ ಟ್ರಸ್ಟ್ ಮೇ 31ರಂದು ಮಾಹಿತಿ ನೀಡಿತ್ತು. ಈಗಾಗಲೇ 1,20,000 ಘನ ಮೀಟರ್​ ಪ್ರದೇಶಗಳಲ್ಲಿ ಮಣ್ಣು ಅಗೆಯಲಾಗಿದ್ದು, ಅದನ್ನೆಲ್ಲ ತೆರವುಗೊಳಿಸಲಾಗಿದೆ. ಅಕ್ಟೋಬರ್ ಅಷ್ಟೊತ್ತಿಗೆ 45 ಪದರಗಳ ಕಾಂಕ್ರೀಟ್ ಹಾಕುವ ಕೆಲಸ ಮುಗಿಯಬಹುದು ಎಂದೂ ಟ್ರಸ್ಟ್​ ತಿಳಿಸಿದೆ. ಇಲ್ಲಿದೆ ನೋಡಿ ಸೆಟಲೈಟ್​​ ಮೂಲಕ ಸೆರೆ ಹಿಡಿಯಲಾದ ಶ್ರೀರಾಮಮಂದಿರ ಸ್ಥಳದ ಚಿತ್ರ..

Shreeram Temple

ಸೆಟಲೈಟ್​ ಚಿತ್ರ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ