AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಬಾರಿ ಗೆದ್ದರೂ ಸತೀಶ್ ಮಹಾನಾರಿಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಇಲ್ಲಿದೆ ಕಾರಣ; ಕೆಲವೇ ದಿನಗಳಲ್ಲಿ ಅವರಿಗೆ ಕಾದಿದೆ ಗುಡ್​ ನ್ಯೂಸ್​ !

ಉತ್ತರ ಪ್ರದೇಶದಲ್ಲಿ ಕಳೆದ ಅವಧಿಗೆ ಹೃದಯ ನಾರಾಯಣ ದೀಕ್ಷಿತ್​ ಅವರು ವಿಧಾನಸಭೆ ಅಧ್ಯಕ್ಷರಾಗಿದ್ದರು. ಈ ಅವಧಿಗೆ ಸ್ಪೀಕರ್ ಸ್ಥಾನಕ್ಕೆ ಸತೀಶ್​ ಮಹಾನಾ ನೇಮಕವಾಗಲಿದ್ದಾರೆ ಎಂದು ಹೇಳಲಾಗಿದೆ.

8 ಬಾರಿ ಗೆದ್ದರೂ ಸತೀಶ್ ಮಹಾನಾರಿಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಇಲ್ಲಿದೆ ಕಾರಣ; ಕೆಲವೇ ದಿನಗಳಲ್ಲಿ ಅವರಿಗೆ ಕಾದಿದೆ ಗುಡ್​ ನ್ಯೂಸ್​ !
ಸತೀಶ್​ ಮಹಾನಾ
TV9 Web
| Edited By: |

Updated on:Mar 26, 2022 | 9:15 AM

Share

ಉತ್ತರ ಪ್ರದೇಶದಲ್ಲಿ (Uttar Pradesh) ನಿನ್ನೆ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ (Yogi Adityanath) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಹಾಗೇ ಬಿಜೆಪಿ ನಾಯಕ, ಎಂಟು ಬಾರಿ ಗೆದ್ದು ಶಾಸಕರಾಗಿರುವ ಸತೀಶ್​ ಮಹಾನಾ ಈ ಬಾರಿ ಉತ್ತರ ಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್​ ಆಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸತೀಶ್​ ಮಹಾನಾ ಎಂಟು ಬಾರಿ ಶಾಸಕರಾದರೂ ನಿನ್ನೆ ಅವರು ಸಚಿವರಾಗಿ ಸಂಪುಟ ಸೇರಲಿಲ್ಲ. ಈ ಮಧ್ಯೆ ಇಂದು ಹಂಗಾಮಿ ಸ್ಪೀಕರ್​ ರಾಮಪತಿ ಶಾಸ್ತ್ರಿಯವರಿಗೆ ರಾಜ್ಯಪಾಲೆ ಆನಂದಿಬೆನ್​ ಪಟೇಲ್​ ಪ್ರಮಾಣವಚನ ಬೋಧಿಸುವರು. ಹೊಸದಾಗಿ ಶಾಸಕರಾದವರೆಲ್ಲ ಮಾರ್ಚ್​ 28 ಮತ್ತು 29ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಸತೀಶ್​ ಮಹಾನಾ ಮೊದಲ ಅವಧಿಯ ಬಿಜೆಪಿ ಸರ್ಕಾರದಲ್ಲಿ ಉದ್ಯಮ ಅಭಿವೃದ್ಧಿ ಇಲಾಖೆ ಸಚಿವರಾಗಿದ್ದರು. ಮಾರ್ಚ್​ 30ರಂದು ವಿಧಾನಸಭೆಯಲ್ಲಿ ಇವರನ್ನೇ ಸ್ಪೀಕರ್​ ಆಗಿ ಆಯ್ಕೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದಲ್ಲಿ ಕಳೆದ ಅವಧಿಗೆ ಹೃದಯ ನಾರಾಯಣ ದೀಕ್ಷಿತ್​ ಅವರು ವಿಧಾನಸಭೆ ಅಧ್ಯಕ್ಷರಾಗಿದ್ದರು. ಈ ಅವಧಿಗೆ ಸ್ಪೀಕರ್ ಸ್ಥಾನಕ್ಕೆ ಸತೀಶ್​ ಮಹಾನಾ ನೇಮಕವಾಗಲಿದ್ದಾರೆ ಎಂದು ಹೇಳಲಾಗಿದೆ. ಯೋಗಿ ಆದಿತ್ಯನಾಥ್​ ಸಂಪುಟದ ಸಚಿವರ ಮೊದಲ ಪಟ್ಟಿ ನಿನ್ನೆ ಹೊರಬಿದ್ದಾಗ ಸತೀಶ್ ಮಹಾನಾ ಹೆಸರು ಇರಲಿಲ್ಲ. 8 ಬಾರಿ ಶಾಸಕರಾದರೂ ಅವರನ್ನು ಕೈಬಿಟ್ಟಿದ್ದೇಕೆ ಎಂಬ ಚರ್ಚೆ ಶುರುವಾದ ಬೆನಲ್ಲೇ, ಅವರು ವಿಧಾನಸಭೆ ಅಧ್ಯಕ್ಷರಾಗಿ ನೇಮಕಗೊಳ್ಳುವರು ಎಂಬ ಮಾಹಿತಿ ಹೊರಬಿದ್ದಿದೆ.

ಸತೀಶ್​ ಮಹಾನಾ ಅವರು 1991ರಿಂದಲೂ ಸತತವಾಗಿ ಗೆಲ್ಲುತ್ತಿದ್ದಾರೆ. ಈ ಬಾರಿ 8ನೇ ಬಾರಿಗೆ ಗೆದ್ದಿದ್ದಾರೆ. 1991ರಿಂದ 5  ಅವಧಿಗೆ ಕಾನ್ಪುರ ಕಂಟೋನ್ಮೆಂಟ್​ ಕ್ಷೇತ್ರದಿಂದ ಗೆದ್ದಿದ್ದರು. ಅದಾದ ಬಳಿಕ 2012ರಿಂದ ಇಲ್ಲಿಯವರೆಗೆ ಮೂರು ಅವಧಿಗೆ ಮಹಾರಾಜ್​ಪುರ ವಿಧಾನಸಭೆ ಕ್ಷೇತ್ರದಿಂದ ಗೆಲ್ಲುತ್ತಿದ್ದಾರೆ. ಅಂದಹಾಗೇ ಈ ಬಾರಿ ಮಹಾರಾಜ್​ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಫಟೇಹ್​ ಬಹದ್ದೂರ್​ ಗಿಲ್​ ವಿರುದ್ಧ 80 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

ಇದನ್ನೂ ಓದಿ: 21 ಸಚಿವರನ್ನು ಉಳಿಸಿ 22 ಸಚಿವರನ್ನು ಕೈ ಬಿಟ್ಟ ಯೋಗಿ ಆದಿತ್ಯನಾಥ; ಸಚಿವ ಸಂಪುಟದಲ್ಲಿ 31 ಹೊಸಬರು, ಐವರು ಮಹಿಳೆಯರು

Published On - 9:12 am, Sat, 26 March 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ