AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸೌದಿ ಅರೇಬಿಯಾ ಮಸೀದಿಗಳ ಒಳಗೆ ಇಫ್ತಾರ್ ನಿಷೇಧ? ಸತ್ಯಾಸತ್ಯತೆ ಏನು?

ಸೌದಿ ಅರೇಬಿಯಾದಲ್ಲಿ ಇನ್ನು ಮುಂದೆ ಮಸೀದಿಗಳಲ್ಲಿ ಇಫ್ತಾರ್ ನಡೆಯುವುದಿಲ್ಲ, ಕ್ರೌನ್ ಪ್ರಿನ್ಸ್ ಸಲ್ಮಾನ್ ನಿಷೇಧ ಹೇರಿದ್ದಾರೆ. ನಮಾಜ್ ಸಮಯದಲ್ಲಿ ಧಾರ್ಮಿಕ ಪ್ರವಚನಗಳನ್ನು ಕಡಿಮೆ ಮಾಡುವಂತೆ ಇಮಾಮ್‌ಗಳಿಗೆ ಆದೇಶಿಸಲಾಗಿದೆ ಎಂಬ ಟ್ವೀಟ್ ವೈರಲ್ ಆಗಿದ್ದು, ಇದರ ಸತ್ಯಾಸತ್ಯತೆ ಏನು? ಇಲ್ಲಿದೆ ಫ್ಯಾಕ್ಟ್ ಚೆಕ್

Fact Check: ಸೌದಿ ಅರೇಬಿಯಾ ಮಸೀದಿಗಳ ಒಳಗೆ ಇಫ್ತಾರ್ ನಿಷೇಧ? ಸತ್ಯಾಸತ್ಯತೆ ಏನು?
ವೈರಲ್ ಟ್ವೀಟ್​​ನ ಫ್ಯಾಕ್ಟ್ ಚೆಕ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 28, 2024 | 7:57 PM

Share

ಬೆಂಗಳೂರು ಫೆಬ್ರವರಿ 28: ಸೌದಿ ಅರೇಬಿಯಾದ (Saudi Arabia) ಮಸೀದಿಗಳಲ್ಲಿ ಇನ್ನು ಮುಂದೆ ಇಫ್ತಾರ್ (Iftar) ನಡೆಯುವುದಿಲ್ಲ. ಧಾರ್ಮಿಕ ಪ್ರವಚನಗಳನ್ನು ಕಡಿಮೆ ಮಾಡಲು ಇಮಾಮ್‌ಗಳನ್ನು ಕೇಳಲಾಯಿತು. ಹೀಗೆ ನಿಷೇಧ ಹೇರಿದ್ದು ಕ್ರೌನ್ ಪ್ರಿನ್ಸ್ ಸಲ್ಮಾನ್ (Crown Prince Salman) ಎಂದು ಇತ್ತೀಚೆಗೆ ಟಿವಿ ಪತ್ರಕರ್ತ ಪ್ರಖಾರ್ ಶ್ರೀವಾಸ್ತವ ಅವರು ಎಕ್ಸ್ ನಲ್ಲಿ ಬರೆದಿದ್ದು, ಅದು ವೈರಲ್ ಆಗಿತ್ತು. “ಸೌದಿ ಅರೇಬಿಯಾದಲ್ಲಿ ಇನ್ನು ಮುಂದೆ ಮಸೀದಿಗಳಲ್ಲಿ ಇಫ್ತಾರ್ ನಡೆಯುವುದಿಲ್ಲ, ಕ್ರೌನ್ ಪ್ರಿನ್ಸ್ ಸಲ್ಮಾನ್ ನಿಷೇಧ ಹೇರಿದ್ದಾರೆ. ನಮಾಜ್ ಸಮಯದಲ್ಲಿ ಧಾರ್ಮಿಕ ಪ್ರವಚನಗಳನ್ನು ಕಡಿಮೆ ಮಾಡುವಂತೆ ಇಮಾಮ್‌ಗಳಿಗೆ ಆದೇಶಿಸಲಾಗಿದೆ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.

ಸೌದಿ ಅರೇಬಿಯಾದಲ್ಲಿ ಹೀಗೊಂದು ಆದೇಶ ನೀಡಲಾಗಿದೆಯೇ? ಇದರ ಸತ್ಯಾಸತ್ಯತೆ ಏನು ಎಂದು ಹುಡುಕಿದಾಗ DFRAC ಫ್ಯಾಕ್ಟ್ ಚೆಕ್ ಸುದ್ದಿ ಸಿಕ್ಕಿದೆ.

ಫ್ಯಾಕ್ಟ್ ಚೆಕ್

DFRAC ತಂಡವು ಈ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದಾಗ ನವ ಭಾರತ್ ಟೈಮ್ಸ್ ಮತ್ತು ಗಲ್ಫ್ ನ್ಯೂಸ್‌ನಿಂದ ಕೆಲವು ಮಾಧ್ಯಮ ವರದಿಗಳನ್ನು ಕಂಡುಹಿಡಿದಿದೆ. ಮಾಧ್ಯಮ ವರದಿಗಳ ಪ್ರಕಾರ, ರಂಜಾನ್‌ನಲ್ಲಿ ಸೂರ್ಯಾಸ್ತದ ಸಮಯದಲ್ಲಿ ನೀಡಲಾಗುವ ಇಫ್ತಾರ್ ಮಸೀದಿಗಳ ಒಳಗೆ ನಡೆಯಬಾರದು ಮತ್ತು ಬದಲಿಗೆ ಅಂಗಳದಲ್ಲಿ ಗೊತ್ತುಪಡಿಸಿದ ಸ್ಥಳದಲ್ಲಿ ನಡೆಸಬೇಕು. ಮಸೀದಿ ಸ್ವಚ್ಛವಾಗಿಡುವ ಉದ್ದೇಶದಿಂದ ಇದನ್ನು ಮಾಡಲಾಗಿದೆ.

ಇದಲ್ಲದೆ, ರಂಜಾನ್‌ನಲ್ಲಿ ನೀಡಲಾಗುವ ತರಾವೀಹ್ ಪ್ರಾರ್ಥನೆಯ ಸಮಯವನ್ನು ಹೆಚ್ಚಿಸುವುದನ್ನು ತಪ್ಪಿಸಲು ಮತ್ತು ಆರಾಧಕರಿಗೆ ಪ್ರಯೋಜನಕಾರಿಯಾದ ಧರ್ಮೋಪದೇಶಗಳನ್ನು ನೀಡಲು ಇಮಾಮ್‌ಗಳನ್ನು ಒತ್ತಾಯಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ವಿಶೇಷವಾಗಿ ಉಪವಾಸದ ನಿಯಮಗಳು ಮತ್ತು ಪವಿತ್ರ ತಿಂಗಳ ರಂಜಾನ್‌ನ ಅರ್ಹತೆಗಳನ್ನು ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣ: ಅಖಿಲೇಶ್ ಯಾದವ್​​ಗೆ ಸಿಬಿಐ ಸಮನ್ಸ್

ವೈರಲ್ ಟ್ವೀಟ್ ತಪ್ಪು ಮಾಹಿತಿಯಿಂದ ಕೂಡಿದ್ದು

ಮಸೀದಿಗಳನ್ನು ಸ್ವಚ್ಛವಾಗಿಡಲು ಇಫ್ತಾರ್ ಕೂಟಗಳನ್ನು ನಡೆಸಬಾರದು ಮತ್ತು ರಂಜಾನ್‌ನಲ್ಲಿ ನೀಡಲಾಗುವ ತರಾವೀಹ್ ನಮಾಝಿನ ಸಮಯವನ್ನು ಹೆಚ್ಚಿಸುವುದನ್ನು ತಪ್ಪಿಸಲು ಇಮಾಮ್‌ಗಳನ್ನು ಒತ್ತಾಯಿಸಲಾಗಿದೆ ಎಂಬ ಟ್ವೀಟ್ ತಪ್ಪು ಮಾಹಿತಿಯಿಂದ ಕೂಡಿದ್ದಾಗಿದೆ ಎಂಬುದು ಇಲ್ಲಿ ಸ್ಪಷ್ಟ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್