AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 14ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್  ಸಲ್ಮಾನ್

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮೊಹಮ್ಮದ್ ಬಿನ್ ಸಲ್ಮಾನ್ ಭೇಟಿ ನೀಡುತ್ತಿದ್ದು  ಸೆಪ್ಟೆಂಬರ್‌ನಲ್ಲಿ ವಿದೇಶಾಂಗ ಸಚಿವರ ಮೂಲಕ..

ನವೆಂಬರ್ 14ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್  ಸಲ್ಮಾನ್
ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 23, 2022 | 2:44 PM

Share

ದೆಹಲಿ: ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ (Mohammed bin Salman) ಅವರು ನವೆಂಬರ್ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನವೆಂಬರ್ 14 ರಂದು ಬೆಳಗ್ಗೆ ಆಗಮಿಸಲಿದ್ದು ಮರುದಿನ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಗೆ ಹೊರಡಲಿದ್ದಾರೆ ಎಂದು ಮೂಲಗಳು  ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಮೊಹಮ್ಮದ್ ಬಿನ್ ಸಲ್ಮಾನ್ ಭೇಟಿ ನೀಡುತ್ತಿದ್ದು  ಸೆಪ್ಟೆಂಬರ್‌ನಲ್ಲಿ ವಿದೇಶಾಂಗ ಸಚಿವರ ಮೂಲಕ ಭಾರತ ಪತ್ರ ಕಳುಹಿಸಿತ್ತು. ಸೌದಿ ಇಂಧನ ಸಚಿವ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಈ ವಾರ ಭಾರತಕ್ಕೆ ಭೇಟಿ ನೀಡಿದ್ದರು. ಅವರು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದ್ಯುತ್ ಸಚಿವ ಆರ್.ಕೆ.ಸಿಂಗ್ ಸೇರಿದಂತೆ ಭಾರತದ ಉನ್ನತ ಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದರು.

ಅರಬ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಯುವರಾಜ

ಸೌದಿ ಅರೇಬಿಯಾದ ಯುವರಾದ ಮೊಹಮ್ಮದ್ ಬಿನ್ ಸಲ್ಮಾನ್ ಅವರು ವೈದ್ಯರ ಸಲಹೆಯಂತೆ ಅಲ್ಜೀರಿಯಾದಲ್ಲಿ ಮುಂಬರುವ ಅರಬ್ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಲ್ಜೀರಿಯಾದ ಪ್ರೆಸಿಡೆನ್ಸಿ ತಿಳಿಸಿದೆ. ಯುವರಾಜಕುಮಾರ ಮೊಹಮ್ಮದ್ ಅವರ ಸ್ಥಿತಿಯ ಬಗ್ಗೆ ಸೌದಿ ಅರೇಬಿಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಅಲ್​​ಜಝೀರಾ ವರದಿ ಮಾಡಿದೆ.

ಶನಿವಾರ ತಡರಾತ್ರಿ ಅಲ್ಜೀರಿಯಾ ಪ್ರೆಸ್ ಸರ್ವಿಸ್‌ನಲ್ಲಿ ಅರೇಬಿಕ್ ಮತ್ತು ಫ್ರೆಂಚ್‌ನಲ್ಲಿ ನಡೆಸಲಾದ ಹೇಳಿಕೆಗಳು ಅಧ್ಯಕ್ಷ ಅಬ್ದೆಲ್‌ಮಡ್‌ಜಿದ್ ಟೆಬ್ಬೌನ್ ಅವರ ಕಚೇರಿಯಿಂದ ಅವರ ಮತ್ತು ಪ್ರಿನ್ಸ್ ಮೊಹಮ್ಮದ್ ನಡುವಿನ ದೂರವಾಣಿ ಕರೆ ಕುರಿತು ಹೇಳಿಕೆಯನ್ನು ಉಲ್ಲೇಖಿಸಿವೆ.

ವೈದ್ಯರು ಪ್ರಯಾಣ ಮಾಡಬೇಡಿ ಎಂದು ಸಲಹೆ ನೀಡಿದ್ದರಿಂದ ನವೆಂಬರ್ 1 ರಂದು ಅಲ್ಜೀರ್ಸ್‌ನಲ್ಲಿ ನಡೆಯಲಿರುವ ಅರಬ್ ಶೃಂಗಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಕ್ಕಾಗಿ ಯುವರಾಜ ಮೊಹಮ್ಮದ್ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Published On - 2:10 pm, Sun, 23 October 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!