AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ಪಕ್ಷಗಳ ಬೆಂಬಲವಿದೆ, ರಾಹುಲ್ ಗಾಂಧಿ ತಮ್ಮ ಬಂಗಲೆ ಬಗ್ಗೆ ಚಿಂತಿಸುತ್ತಿಲ್ಲ: ಕಾಂಗ್ರೆಸ್

ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೂರತ್ ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ

19 ಪಕ್ಷಗಳ ಬೆಂಬಲವಿದೆ, ರಾಹುಲ್ ಗಾಂಧಿ ತಮ್ಮ ಬಂಗಲೆ ಬಗ್ಗೆ ಚಿಂತಿಸುತ್ತಿಲ್ಲ: ಕಾಂಗ್ರೆಸ್
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 28, 2023 | 6:47 PM

ಮಂಗಳವಾರ ಸಂಜೆ 7 ಗಂಟೆಗೆ ನವದೆಹಲಿಯಲ್ಲಿ ‘ಪ್ರಜಾಪ್ರಭುತ್ವ ಉಳಿಸಿ’ (Save democracy)ಶಾಂತಿ ಮೆರವಣಿಗೆಯೊಂದಿಗೆ ಪ್ರಾರಂಭವಾಗುವ ತಿಂಗಳ ಅವಧಿಯ ಸತ್ಯಾಗ್ರಹ ಕಾರ್ಯಕ್ರಮಗಳನ್ನು ಘೋಷಿಸಿದ ಕಾಂಗ್ರೆಸ್ (Congress), 19 ಪಕ್ಷಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಪ್ರತಿಭಟನೆಯ ವಿವರವಾದ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರ ಸಾವರ್ಕರ್ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿರುವ ಉದ್ಧವ್ ಬಾಳಾಸಾಹೇಬ್ ಠಾಕ್ರೆ  ನೇತೃತ್ವದ ಶಿವಸೇನಾ ಕೂಡ ಕಾಂಗ್ರೆಸ್ ಬೆಂಬಲಿಸುವ ಪಕ್ಷಗಳಲ್ಲಿ ಸೇರಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಕೋರ್ಟ್ ತೀರ್ಪು ನೀಡಿದ 24 ಗಂಟೆಗಳಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಅನರ್ಹಗೊಂಡ ನಂತರ ರಾಹುಲ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದರು. ಇದಾಗಿ 24 ಗಂಟೆಗಳಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ಪಡೆಯುತ್ತಾರೆ. ಲೋಕಸಭೆಯ ಸೆಕ್ರೆಟರಿಯೇಟ್‌ನ ವೇಗ ನೋಡಿ. ಆದರೆ ರಾಹುಲ್ ಗಾಂಧಿ ಅವರ ಬಂಗಲೆ ಬಗ್ಗೆ ಚಿಂತಿಸುತ್ತಿಲ್ಲ ಎಂದು ಅವರಿಗೆ ತಿಳಿದಿಲ್ಲ ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಈ ಬಗ್ಗೆ ನಮಗೆ ಆತಂಕವಿಲ್ಲ.ಆದರೆ ಅವರು ಎಲ್ಲವನ್ನೂ ಮಾಡುತ್ತಿರುವ ರೀತಿ ನೋಡಿದರೆ ಅವರು ರಾಹುಲ್ ಗಾಂಧಿಯನ್ನು ಬೆದರಿಸಲು ಬಯಸುತ್ತಾರೆ.ಈ ಎಲ್ಲಾ ತಂತ್ರಗಳಿಗೆ ನಾವು ಹೆದರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರೊಂದಿಗಿನ ಸೋಮವಾರದ ಸಭೆಯಲ್ಲಿ ರಾಹುಲ್ ಗಾಂಧಿ , ಪ್ರಶ್ನೆ ತಮ್ಮ ಅನರ್ಹತೆಯ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ. ವಿಷಯ ರಾಹುಲ್ ಗಾಂಧಿಯನ್ನು ಉಳಿಸುವುದು ಅಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದು ಎಂದು ಅವರೇ ಹೇಳಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂಬುದು ನಮ್ಮ ಪ್ರಶ್ನೆಯಾಗಿದೆ. ಸರ್ಕಾರಕ್ಕೆ ಜೆಪಿಸಿ ಬೇಡ. ನೀರವ್ ಮೋದಿಗೆ ಸರ್ಕಾರ ಕ್ಲೀನ್ ಚಿಟ್ ನೀಡುತ್ತಿದೆ. ಅವರು ಕಳೆದ ಒಂಬತ್ತು ವರ್ಷಗಳಿಂದ ಜಾತಿ ಗಣತಿ ನಡೆಸಲಿಲ್ಲ ಆದರೆ ಈಗ ಅದನ್ನು ಒಬಿಸಿ ಸಮಸ್ಯೆಯಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸೂರತ್ ನ್ಯಾಯಾಲಯದ ವಿರುದ್ಧ ಮೇಲ್ಮನವಿ

ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೂರತ್ ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಒಂದು ತಿಂಗಳ ಅವಕಾಶವಿದೆ. ಎಲ್ಲಿ ಮೇಲ್ಮನವಿ ಸಲ್ಲಿಸಬೇಕು ಮತ್ತು ಯಾವಾಗ ಮೇಲ್ಮನವಿ ಸಲ್ಲಿಸಬೇಕು ಎಂಬುದು ನಮಗೆ ತಿಳಿದಿದೆ. ಆದರೆ ಇತರ ವಿವರಗಳನ್ನು ಕಾನೂನು ತಂಡವು ರೂಪಿಸುತ್ತಿದೆ ಎಂದಿದ್ದಾರೆ ಜೈರಾಮ್ ರಮೇಶ್ .

ಕಾಂಗ್ರೆಸ್ ಮತ್ತು ಶಿವಸೇನಾ ನಡುವೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇವೆ

‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟದಲ್ಲಿ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.ಅದೇ ವೇಳೆಕಾಂಗ್ರೆಸ್ ಮತ್ತು ಶಿವಸೇನಾ (ಯುಬಿಟಿ) ನಡುವೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲಾಗುವುದು ಎಂದು ಕೆಸಿ ವೇಣುಗೋಪಾಲ್ ಹೇಳಿದರು.

ಇದನ್ನೂ ಓದಿ: ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ವಾಗ್ದಾಳಿ

ಬಿಜೆಪಿ ಸುಳ್ಳುಗಳನ್ನು ಹರಡುತ್ತಿದೆ

ರಾಹುಲ್ ಗಾಂಧಿ ಅವರ ವಕೀಲರ ತಂಡದಲ್ಲಿ ಕೆಲವು ನ್ಯೂನತೆಗಳಿವೆ ಎಂದು ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಆಗಿದ್ದು, ಘಟನೆಗಳ ಕಾಲಾನುಕ್ರಮದಿಂದ ಸ್ಪಷ್ಟವಾಗುತ್ತದೆ. ಈ ನಿಗದಿತ ಪಂದ್ಯದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನಾಯಕರು ರಾಹುಲ್ ಗಾಂಧಿ ಅವರ ಕಾನೂನು ತಂಡದ ಕಡೆಯಿಂದ ಮೇಲ್ಮನವಿ ಸಲ್ಲಿಸಲು ಉದ್ದೇಶಪೂರ್ವಕವಾಗಿ ವಿಳಂಬವಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Tue, 28 March 23