AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರವೆನಿಸಿದ್ರೂ ಸತ್ಯ: ಮೃತ ವ್ಯಕ್ತಿಗೆ ಉಸಿರು ಮರಳಿಸಿದ ರಸ್ತೆಗುಂಡಿ

ರಸ್ತೆಗುಂಡಿಗಳು ಎನ್ನುವ ಶಬ್ದ ಕೇಳಿದಾಕ್ಷಣ ನಿಮ್ಮ ಮುಖದಲ್ಲಿ ನಗು ಮೂಡುವುದಿಲ್ಲ ಬದಲಾಗಿ ಮುಖ ಕೆಂಪಾಗುತ್ತದೆ. ರಸ್ತೆಗುಂಡಿಗಳು ಜೀವತೆಗೆದಿರುವುದನ್ನು ಕೇಳಿದ್ದೇವೆ, ಅಪಘಾತದಿಂದ ಸಾಕಷ್ಟು ಮಂದಿ ಗಂಭೀರ ಸ್ವರೂಪದ ಗಾಯಗಳನ್ನು ಕೂಡ ಅನುಭವಿಸಿದ್ದಾರೆ, ಆದರೆ ಜೀವಕೊಟ್ಟಿರುವುದನ್ನು ನೋಡಿದ್ದೀರಾ, ಈ ಘಟನೆ ವಿಚಿತ್ರವೆನಿಸಿದರೂ ಸತ್ಯ. 80 ವರ್ಷದ ವ್ಯಕ್ತಿಗೆ ಈ ರಸ್ತೆಗುಂಡಿಯೇ ಜೀವರಕ್ಷಕ ಎಂದರೆ ತಪ್ಪಾಗಲಾರದು.

ವಿಚಿತ್ರವೆನಿಸಿದ್ರೂ  ಸತ್ಯ: ಮೃತ ವ್ಯಕ್ತಿಗೆ ಉಸಿರು ಮರಳಿಸಿದ ರಸ್ತೆಗುಂಡಿ
ಆಸ್ಪತ್ರೆImage Credit source: NDTV
ನಯನಾ ರಾಜೀವ್
|

Updated on: Jan 13, 2024 | 7:54 AM

Share

ರಸ್ತೆಗುಂಡಿಗಳು(Patholes) ಎನ್ನುವ ಶಬ್ದ ಕೇಳಿದಾಕ್ಷಣ ನಿಮ್ಮ ಮುಖದಲ್ಲಿ ನಗು ಮೂಡುವುದಿಲ್ಲ ಬದಲಾಗಿ ಮುಖ ಕೆಂಪಾಗುತ್ತದೆ. ರಸ್ತೆಗುಂಡಿಗಳು ಜೀವತೆಗೆದಿರುವುದನ್ನು ಕೇಳಿದ್ದೇವೆ, ಅಪಘಾತದಿಂದ ಸಾಕಷ್ಟು ಮಂದಿ ಗಂಭೀರ ಸ್ವರೂಪದ ಗಾಯಗಳನ್ನು ಕೂಡ ಅನುಭವಿಸಿದ್ದಾರೆ, ಆದರೆ ಜೀವಕೊಟ್ಟಿರುವುದನ್ನು ನೋಡಿದ್ದೀರಾ, ಈ ಘಟನೆ ವಿಚಿತ್ರವೆನಿಸಿದರೂ ಸತ್ಯ. ಹರ್ಯಾಣದ  80 ವರ್ಷದ ವ್ಯಕ್ತಿಗೆ ಈ ರಸ್ತೆಗುಂಡಿಯೇ ಜೀವರಕ್ಷಕ ಎಂದರೆ ತಪ್ಪಾಗಲಾರದು.

ವೈದ್ಯರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಘೋಷಿಸಿಬಿಟ್ಟಿದ್ದು, ಕುಟುಂಬಸ್ಥರೆಲ್ಲರೂ ಅಳುತ್ತಾ ಶವವನ್ನು ಆಂಬ್ಯುಲೆನ್ಸ್​ನಲ್ಲಿ ಮನೆಗೆ ಸಾಗಿಸುತ್ತಿದ್ದರು. ಒಂದೆಡೆ ಅಂತ್ಯಕ್ರಿಯೆಗೆ ಕಟ್ಟಿಗೆಗಳನ್ನು ಸಂಗ್ರಹಿಸಲಾಗುತ್ತಿತ್ತು.

ಆಂಬ್ಯುಲೆನ್ಸ್​ ತೆರಳುತ್ತಿದ್ದಾಗ ರಸ್ತೆಗುಂಡಿಯೊಂದರ ಮೇಲೆ ಹಾದು ಹೋಯಿತು, ಅದಾದ ಬಳಿಕ ಕೈ ಚಲನೆ ಬಂದಿದ್ದನ್ನು ಅವರ ಮೊಮ್ಮಗ ನೋಡಿದ್ದ. ಹೃದಯಬಡಿತವನ್ನೂ ಗಮನಿಸಿದ, ತಕ್ಷಣ ಆಂಬ್ಯುಲೆನ್ಸ್​ ಡ್ರೈವರ್​​ಗೆ ತಕ್ಷಣ ಅಲ್ಲೇ ಹತ್ತಿರದಲ್ಲಿರುವ ಯಾವುದಾದರೂ ಆಸ್ಪತ್ರೆಗೆ ಕರೆದೊಯ್ಯುವಂತೆ ಮನವಿ ಮಾಡಲಾಯಿತು. ಅಲ್ಲಿನ ವೈದ್ಯರು ವ್ಯಕ್ತಿ ಬದುಕಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಇನ್ನೂ ಉಳಿದಿವೆ 7878 ರಸ್ತೆ ಗುಂಡಿ, ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ

80 ವರ್ಷದ ವ್ಯಕ್ತಿ ದರ್ಶನ್ ಸಿಂಗ್  ಹೃದ್ರೋಗದಿಂದ ಬಳಲುತ್ತಿದ್ದು, ಕರ್ನಾಲ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ. ಆದರೆ ಈ ಘಟನೆಯನ್ನು ಪವಾಡ ಎಂದೇ ಕುಟುಂಬದವರು ನಂಬಿದ್ದಾರೆ.

ದರ್ಶನ್ ಸಿಂಗ್ ಅವರ ಮೊಮ್ಮಗರಲ್ಲಿ ಒಬ್ಬರಾದ ಬಲ್ವಾನ್ ಸಿಂಗ್ ಕರ್ನಾಲ್ ಬಳಿಯ ನಿಸಿಂಗ್‌ನಲ್ಲಿ ವಾಸಿಸುತ್ತಿದ್ದರು. ನಾಲ್ಕು ದಿನಗಳಿಂದ ಅವರ ಅಜ್ಜ ವೆಂಟಿಲೇಟರ್‌ನಲ್ಲಿದ್ದರು ಮತ್ತು ಗುರುವಾರ ಬೆಳಿಗ್ಗೆ ಅವರ ಹೃದಯ ಬಡಿತ ನಿಂತಿದೆ ಎಂದು ವೈದ್ಯರು ಹೇಳಿದ್ದರು ಎಂದು ಮೊಮ್ಮಗ ತಿಳಿಸಿದ್ದಾರೆ.

ಅವರನ್ನು ವೆಂಟಿಲೇಟರ್‌ನಿಂದ ಹೊರತೆಗೆಯಲಾಯಿತು ಮತ್ತು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ನಾಲ್ಕು ದಿನಗಳಿಂದ ಅವರು ಪಟಿಯಾಲಾದಲ್ಲಿ ವೆಂಟಿಲೇಟರ್‌ನಲ್ಲಿದ್ದರು ಆದರೆ ಈಗ ಅವರು ಸ್ವಂತವಾಗಿ ಉಸಿರಾಡುತ್ತಿದ್ದಾರೆ ಎಂದು ಕುಟುಂಬ ಹೇಳಿದೆ. ಶೀಘ್ರ ಗುಣಮುಖರಾಗಲಿ ಎಂಬುದು ಎಲ್ಲರ ಹಾರೈಕೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​