AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂಒ ಅಧಿಕಾರಿ ಎಂದು ಸುಳ್ಳು ಹೇಳಿ 7 ಮದುವೆಯಾಗಿದ್ದ ವ್ಯಕ್ತಿಯ ಬಂಧಿಸಿದ ಎಸ್​ಟಿಎಫ್

ತನ್ನನ್ನು ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು 7 ಮದುವೆಯಾಗಿರುವ ವ್ಯಕ್ತಿಯನ್ನು ಒಡಿಶಾ ಪೊಲೀಸ್​ ವಿಶೇಷ ಕಾರ್ಯಪಡೆ(ಎಸ್​ಟಿಎಫ್​) ಬಂಧಿಸಿದೆ. ಆರೋಪಿ ವಿರುದ್ಧ ಕಾಶ್ಮೀರ ಪೊಲೀಸರು ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಿದ್ದಾರೆ. ಆರೋಪಿಯನ್ನು ಸೈಯದ್ ಇಶಾನ್ ಬುಖಾರಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಇಶಾನ್ ಬುಖಾರಿ ಮತ್ತು ಡಾ ಇಶಾನ್ ಬುಖಾರಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ.

ಪಿಎಂಒ ಅಧಿಕಾರಿ ಎಂದು ಸುಳ್ಳು ಹೇಳಿ 7 ಮದುವೆಯಾಗಿದ್ದ ವ್ಯಕ್ತಿಯ ಬಂಧಿಸಿದ ಎಸ್​ಟಿಎಫ್
ಬುಖಾರಿImage Credit source: NDTV
ನಯನಾ ರಾಜೀವ್
|

Updated on: Dec 17, 2023 | 9:11 AM

Share

ತನ್ನನ್ನು ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು 7 ಮದುವೆಯಾಗಿರುವ ವ್ಯಕ್ತಿಯನ್ನು ಒಡಿಶಾ ಪೊಲೀಸ್​ ವಿಶೇಷ ಕಾರ್ಯಪಡೆ(ಎಸ್​ಟಿಎಫ್​) ಬಂಧಿಸಿದೆ. ಆರೋಪಿ ವಿರುದ್ಧ ಕಾಶ್ಮೀರ ಪೊಲೀಸರು ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಿದ್ದಾರೆ. ಆರೋಪಿಯನ್ನು ಸೈಯದ್ ಇಶಾನ್ ಬುಖಾರಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯನ್ನು ಇಶಾನ್ ಬುಖಾರಿ ಮತ್ತು ಡಾ ಇಶಾನ್ ಬುಖಾರಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ.

ತನ್ನನ್ನು ನ್ಯೂರೋ-ಸ್ಪೆಷಲಿಸ್ಟ್ ವೈದ್ಯ ಎಂದು ಬಣ್ಣಿಸಿಕೊಂಡ ಬುಖಾರಿ ತನ್ನನ್ನು ಸೇನಾ ವೈದ್ಯ, ಪಿಎಂಒ ಅಧಿಕಾರಿ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿಯ ನಿಕಟವರ್ತಿಯಾಗಿಯೂ ಹೇಳಿಕೊಂಡಿದ್ದಾನೆ. ಒಡಿಶಾ ಪೊಲೀಸರ ಹೇಳಿಕೆ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ವಾಸಿಸುತ್ತಿರುವ ಈ ವ್ಯಕ್ತಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ, ಈ ವ್ಯಕ್ತಿ ಕಾಶ್ಮೀರವಲ್ಲದೆ ದೇಶದ ಇತರೆ ರಾಜ್ಯಗಳಲ್ಲಿ 6-7 ಮದುವೆ ಮಾಡಿರುವುದು ಪತ್ತೆಯಾಗಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಒಡಿಶಾದ ಹೆಣ್ಣುಮಕ್ಕಳು ಈತ ಮದುವೆಯಾಗಿದ್ದ. ದಾಳಿಯ ಸಮಯದಲ್ಲಿ ಪೊಲೀಸರು 100 ಕ್ಕೂ ಹೆಚ್ಚು ಗಂಭೀರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬುಖಾರಿ ಹಲವು ಅನುಮಾನಾಸ್ಪದ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ,ಕೇರಳ ಮತ್ತು ಪಾಕಿಸ್ತಾನದ ಅನುಮಾನಾಸ್ಪದ ವ್ಯಕ್ತಿಗಳು ಭಾಗಿಯಾಗಿರುವ ಆರೋಪವಿದೆ.

ಮತ್ತಷ್ಟು ಓದಿ: ತಿರುಪತಿಯಲ್ಲಿ ವಿಐಪಿ ದರ್ಶನಕ್ಕಾಗಿ ಸುಳ್ಳು ಹೇಳಿದ ನಕಲಿ ಐಆರ್​ಎಸ್​ ಅಧಿಕಾರಿ ಬಂಧನ

ಡಿಸೆಂಬರ್ 15 ರಂದು ಬಂದ ಮಾಹಿತಿಯ ಮೇರೆಗೆ ಎಸ್‌ಟಿಎಫ್ ಸ್ಥಳೀಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿ ಆತನನ್ನು ಬಂಧಿಸಲಾಗಿದೆ. ಕುಪ್ವಾರದ ಹಂದ್ವಾರ ನಿವಾಸಿ ಬುಖಾರಿ, ಜಾಜ್‌ಪುರದ ಧರ್ಮಶಾಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಕ್ಕಿಬಿದ್ದಿದ್ದಾನೆ.

ಅಮೆರಿಕದ ಕಾರ್ನೆಲ್ ಯೂನಿವರ್ಸಿಟಿ, ಕೆನಡಾದ ಹೆಲ್ತ್ ಸರ್ವೀಸಸ್ ಇನ್‌ಸ್ಟಿಟ್ಯೂಟ್, ತಮಿಳುನಾಡಿನ ವೆಲ್ಲೂರ್ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು ಹೆಸರಿನಲ್ಲಿ ಪಡೆದಿರುವ ನಕಲಿ ವೈದ್ಯಕೀಯ ಪದವಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲವಾರು ಬಾಂಡ್‌ಗಳು, ಅಫಿಡವಿಟ್‌ಗಳು, ಎಟಿಎಂ ಕಾರ್ಡ್‌ಗಳು, ಗುರುತಿನ ಚೀಟಿಗಳು, ಖಾಲಿ ಚೆಕ್‌ಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?