AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ.

The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ
ದಿ ಕೇರಳ ಸ್ಟೋರಿ
ನಯನಾ ರಾಜೀವ್
|

Updated on: May 09, 2023 | 3:03 PM

Share

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಈ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಎನ್​ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿ ಕೇರಳ ಸ್ಟೋರಿ ಚಿತ್ರ ಮೇ 5 ರಂದು ಬಿಡುಗಡೆಯಾಗಿದೆ. ಸಿನಿಮಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಥಿಯೇಟರ್‌ಗಳಿಗೆ ಆಗಮಿಸುತ್ತಿದ್ದಾರೆ.

ದೇಶದ ಎರಡು ರಾಜ್ಯಗಳಾದ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದ್ದರೂ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದಲ್ಲಿಯೂ ಚಿತ್ರಕ್ಕೆ ಸಂಬಂಧಿಸಿದಂತೆ ರಾಜಕೀಯವು ತೀವ್ರಗೊಳ್ಳುತ್ತಿದೆ . ಚಿತ್ರದಲ್ಲಿ ಎಲ್ಲ ಸುಳ್ಳುಗಳನ್ನು ತೋರಿಸಲಾಗಿದೆ, ಚಿತ್ರ ನಿರ್ಮಾಪಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ.

ಮತ್ತಷ್ಟು ಓದಿ: The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್

32 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಆದರೆ ಅಧಿಕೃತ ಅಂಕಿ ಅಂಶ 3 ಆಗಿದೆ ಎಂದು ಅವರು ಹೇಳಿದರು. 32 ಸಾವಿರಕ್ಕೂ 3ಕ್ಕೂ ವ್ಯತ್ಯಾಸವಿಲ್ಲವೇ, ಈ ಕಾಲ್ಪನಿಕ ಕಥೆಯನ್ನು ನಿರ್ಮಿಸಿದ ನಿರ್ಮಾಪಕರು ಯಾರೇ ಆಗಿರಲಿ ಅವರನ್ನು ನೇಣಿಗೇರಿಸಬೇಕು ಎಂದು ಗುಡುಗಿದ್ದಾರೆ.

ಅದೇ ಸಮಯದಲ್ಲಿ, ಜಿತೇಂದ್ರ ಅವ್ಹಾದ್ ಅವರು ಟ್ವಿಟರ್‌ನಲ್ಲಿ ಮುಸ್ಲಿಂ ದಂಪತಿ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಕಾಸರಗೋಡಿನಲ್ಲಿ, ಮುಸ್ಲಿಂ ದಂಪತಿಅಬ್ದುಲ್ಲಾ ಮತ್ತು ಖಾಜಿದಾ ತಮ್ಮ ದತ್ತು ಪಡೆದ ಹಿಂದೂ ಮಗಳನ್ನು ಹಿಂದೂ ಹುಡುಗನಿಗೆ ಪೂರ್ಣ ಹಿಂದೂ ಸಂಪ್ರದಾಯದೊಂದಿಗೆ ಮದುವೆಮಾಡಿಕೊಟ್ಟರು. ಈ ವಿಷಯದ ಮೇಲೆ ಸಿನಿಮಾ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು