The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ.

The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ
ದಿ ಕೇರಳ ಸ್ಟೋರಿ

Updated on: May 09, 2023 | 3:03 PM

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಈ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಎನ್​ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿ ಕೇರಳ ಸ್ಟೋರಿ ಚಿತ್ರ ಮೇ 5 ರಂದು ಬಿಡುಗಡೆಯಾಗಿದೆ. ಸಿನಿಮಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಥಿಯೇಟರ್‌ಗಳಿಗೆ ಆಗಮಿಸುತ್ತಿದ್ದಾರೆ.

ದೇಶದ ಎರಡು ರಾಜ್ಯಗಳಾದ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದ್ದರೂ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದಲ್ಲಿಯೂ ಚಿತ್ರಕ್ಕೆ ಸಂಬಂಧಿಸಿದಂತೆ ರಾಜಕೀಯವು ತೀವ್ರಗೊಳ್ಳುತ್ತಿದೆ . ಚಿತ್ರದಲ್ಲಿ ಎಲ್ಲ ಸುಳ್ಳುಗಳನ್ನು ತೋರಿಸಲಾಗಿದೆ, ಚಿತ್ರ ನಿರ್ಮಾಪಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ.

ಮತ್ತಷ್ಟು ಓದಿ: The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್

32 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಆದರೆ ಅಧಿಕೃತ ಅಂಕಿ ಅಂಶ 3 ಆಗಿದೆ ಎಂದು ಅವರು ಹೇಳಿದರು. 32 ಸಾವಿರಕ್ಕೂ 3ಕ್ಕೂ ವ್ಯತ್ಯಾಸವಿಲ್ಲವೇ, ಈ ಕಾಲ್ಪನಿಕ ಕಥೆಯನ್ನು ನಿರ್ಮಿಸಿದ ನಿರ್ಮಾಪಕರು ಯಾರೇ ಆಗಿರಲಿ ಅವರನ್ನು ನೇಣಿಗೇರಿಸಬೇಕು ಎಂದು ಗುಡುಗಿದ್ದಾರೆ.

ಅದೇ ಸಮಯದಲ್ಲಿ, ಜಿತೇಂದ್ರ ಅವ್ಹಾದ್ ಅವರು ಟ್ವಿಟರ್‌ನಲ್ಲಿ ಮುಸ್ಲಿಂ ದಂಪತಿ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಕಾಸರಗೋಡಿನಲ್ಲಿ, ಮುಸ್ಲಿಂ ದಂಪತಿಅಬ್ದುಲ್ಲಾ ಮತ್ತು ಖಾಜಿದಾ ತಮ್ಮ ದತ್ತು ಪಡೆದ ಹಿಂದೂ ಮಗಳನ್ನು ಹಿಂದೂ ಹುಡುಗನಿಗೆ ಪೂರ್ಣ ಹಿಂದೂ ಸಂಪ್ರದಾಯದೊಂದಿಗೆ ಮದುವೆಮಾಡಿಕೊಟ್ಟರು. ಈ ವಿಷಯದ ಮೇಲೆ ಸಿನಿಮಾ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us