ಚುನಾವಣಾ ಬಾಂಡ್, ಇಲ್ಲಿಯವರೆಗೆ ಸಂಗ್ರಹವಾದ ಹಣ ಎಷ್ಟು? ರಾಜಕೀಯ ಪಕ್ಷಗಳಿಗೆ ಚಿನ್ನದ ಮೊಟ್ಟೆಯಾಗಿದ್ದ ಈ ಬಾಂಡ್​ಗೆ ಸುಪ್ರೀಂ ಕೊಕ್ಕೆ

SBI Issues Electoral Bonds Worth Rs 16,518 Crore Since 2018: ಚುನಾವಣಾ ಬಾಂಡ್ ಅಸಂವಿಧಾನಿಕವಾಗಿದ್ದು, ಅದರ ವಿತರಣೆ ಕೂಡಲೇ ನಿಲ್ಲಿಸುವಂತೆ ಎಸ್​ಬಿಐಗೆ ಸುಪ್ರೀಂಕೋರ್ಟ್ ತಿಳಿಸಿದೆ. 2018ರಲ್ಲಿ ಆರಂಭಗೊಂಡ ಎಲೆಕ್ಟೋರಲ್ ಬಾಂಡ್ ಯೋಜನೆಯಲ್ಲಿ ಬಾಂಡ್ ವಿತರಣೆ ಎಸ್​ಬಿಐ ಮಾತ್ರವೇ ಮಾಡುವುದು. ಇಲ್ಲಿಯವರೆಗೆ 16,518 ಕೋಟಿ ರೂ ಮೌಲ್ಯದ ಚುನಾವಣಾ ಬಾಂಡ್​ಗಳನ್ನು ಎಸ್​ಬಿಐ ವಿತರಿಸಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

ಚುನಾವಣಾ ಬಾಂಡ್, ಇಲ್ಲಿಯವರೆಗೆ ಸಂಗ್ರಹವಾದ ಹಣ ಎಷ್ಟು? ರಾಜಕೀಯ ಪಕ್ಷಗಳಿಗೆ ಚಿನ್ನದ ಮೊಟ್ಟೆಯಾಗಿದ್ದ ಈ ಬಾಂಡ್​ಗೆ ಸುಪ್ರೀಂ ಕೊಕ್ಕೆ
ಚುನಾವಣಾ ಬಾಂಡ್
Follow us
|

Updated on: Feb 15, 2024 | 12:06 PM

ನವದೆಹಲಿ, ಫೆಬ್ರುವರಿ 15: ಚುನಾವಣಾ ಬಾಂಡ್ ಅಥವಾ ಎಲೆಕ್ಟೋರಲ್ ಬಾಂಡ್ (Electoral bond) ಅನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ಪರಿಗಣಿಸಿ ತೀರ್ಪು ನೀಡಿದೆ. ಈ ಬಾಂಡ್ ವಿತರಣೆಯನ್ನು ತತ್​ಕ್ಷಣದಿಂದಲೇ ನಿಲ್ಲಿಸುವಂತೆ ಎಸ್​ಬಿಐಗೆ ನ್ಯಾಯಾಲಯ (Supreme Court) ಆದೇಶಿಸಿದೆ. ಹಾಗೆಯೇ, 2019ರ ಏಪ್ರಿಲ್ 12ರಿಂದ ಇಲ್ಲಿಯವರೆಗೆ ಯಾವ್ಯಾವ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಮೂಲಕ ಎಷ್ಟೆಷ್ಟು ಹಣ ರವಾನೆಯಾಗಿದೆ ಎಂಬ ಎಲ್ಲಾ ವಿವರಗಳನ್ನೂ ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ (election commission) ಸಲ್ಲಿಸುವಂತೆಯೂ ಸೂಚಿಸಿದೆ. ಎಸ್​ಬಿಐನಿಂದ ಮಾಹಿತಿ ಬಂದು ಒಂದು ವಾರದೊಳಗೆ ಈ ದೇಣಿಗೆಯ ವಿವರವನ್ನು ಚುನಾವಣಾ ಆಯೋಗ ಸಾರ್ವತ್ರಿಕಗೊಳಿಸಬೇಕು ಎಂದೂ ಕೋರ್ಟ್ ಹೇಳಿದೆ.

ಎಸ್​ಬಿಐನಲ್ಲಿ ಇಲ್ಲಿಯವರೆಗೆ ಸಂಗ್ರಹವಾದ ಎಲೆಕ್ಟೋರಲ್ ಬಾಂಡ್ ಮೊತ್ತ 16 ಸಾವಿರ ಕೋಟಿ ರೂಗೂ ಹೆಚ್ಚು

ಕೇಂದ್ರ ಸರ್ಕಾರ 2018ರಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದಿದ್ದು. ಇದು ಯಾವುದೇ ಸಾರ್ವಜನಿಕರು ಅನಾಮಧೇಯರಾಗಿದ್ದುಕೊಂಡು ರಾಜಕೀಯ ಪಕ್ಷಗಳಿಗೆ ಬಾಂಡ್ ಮೂಲಕ ದೇಣಿಗೆ ನೀಡಬಹುದು. ಎಸ್​ಬಿಐ ಬ್ಯಾಂಕ್​ನಲ್ಲಿ ಮಾತ್ರವೇ ಈ ಬಾಂಡ್ ವಿತರಣೆಗೆ ಅವಕಾಶ ನೀಡಲಾಗಿತ್ತು.

2018ರಲ್ಲಿ ಆರಂಭಗೊಂಡು ಇಲ್ಲಿಯವರೆಗೆ 30 ಕಂತುಗಳಲ್ಲಿ ಎಸ್​ಬಿಐ ಚುನಾವಣಾ ಬಾಂಡ್​ಗಳನ್ನು ವಿತರಿಸಿದೆ. ಈವರೆಗೆ 16,518 ಕೋಟಿ ರೂ ಮೌಲ್ಯದ ಬಾಂಡ್​ಗಳನ್ನು ಖರೀದಿಸಲಾಗಿದೆ. ಅಂದರೆ ಇಷ್ಟು ಮೊತ್ತದ ದೇಣಿಗೆಗಳು ರಾಜಕೀಯ ಪಕ್ಷಗಳಿಗೆ ಸಿಕ್ಕಿವೆ. ಈ ಅಂಕಿ ಅಂಶ ವಿವರವನ್ನು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಇತ್ತೀಚೆಗೆ ಲೋಕಸಭೆಯಲ್ಲಿ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ: ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ

ಎಲೆಕ್ಟೋರಲ್ ಬಾಂಡ್ ನಿಷೇಧಿಸಿದ್ದು ಯಾಕೆ?

ಚುನಾವಣಾ ಬಾಂಡ್ ಅಸಂವಿಧಾನಿಕವಾಗಿದ್ದು, ಇದು ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತದೆ ಎಂಬುದು ಸುಪ್ರೀಂ ಕೋರ್ಟ್ ಅಭಿಪ್ರಾಯವಾಗಿದೆ. ಕೋರ್ಟ್​ನ ಪ್ರಮುಖ ಆಕ್ಷೇಪಣೆ ಇರುವುದು ಎಲೆಕ್ಟೋರಲ್ ಬಾಂಡ್​ನ ಗೌಪ್ಯತೆ ವಿಚಾರದ ಬಗ್ಗೆ. ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ಕೊಟ್ಟವರ ಹೆಸರು ಸಾರ್ವತ್ರಿಕಗೊಳ್ಳುವುದಿಲ್ಲ. ಇದು ಅಸಂವಿಧಾನಿಕ, ಹಾಗೂ ಮಾಹಿತಿ ಹಕ್ಕು ಕಾಯ್ದೆ ನಿಯಮದ ಉಲ್ಲಂಘನೆ ಎಂಬುದು ಕೋರ್ಟ್​ನ ತಗಾದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ