AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ

ಬಾಂಬೆ ಹೈಕೋರ್ಟಿನ ಗೋವಾ ಪೀಠದ ಹೊಸ ಕಟ್ಟಡದ ಉದ್ಘಾಟನೆ ಸಂದರ್ಭದಲ್ಲಿ ಸವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಜಾರಿಯಲ್ಲಿರುವ Uniform Civil Codeನ್ನು ಅಧ್ಯಯನ ಮಾಡಲು ಬುದ್ಧಿಜೀವಗಳಿಗೆ ಕರೆ ನೀಡಿದರು.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ
ಮುಖ್ಯ ನ್ಯಾಯಮೂರ್ತಿ ಎಸ್. ಎ ಬೋಬ್ಡೆ
ಡಾ. ಭಾಸ್ಕರ ಹೆಗಡೆ
|

Updated on:Mar 27, 2021 | 7:03 PM

Share

ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಅಥವಾ ಏಕರೂಪ ನಾಗರಿಕ ಸಂಹಿತೆ ಎಂದರೆ ಸಾಕು, ನಮ್ಮಲ್ಲಿ ಭಿನ್ನಾಭಿಪ್ರಾಯ ಶುರು. ಕೆಲವೊಮ್ಮೆ ಜಗಳದಲ್ಲೂ ಕೊನೆಗೊಂಡಿದ್ದಿದೆ. ಇದನ್ನು ಜಾರಿಗೆ ತರುವುದರಿಂದ ನಮ್ಮ ಧರ್ಮ ನಿರಪೇಕ್ಷ ಸಂವಿಧಾನಕ್ಕೆ ಅಪಚಾರವಾಗುತ್ತದೆ ಎಂದು ಬಹಳ ಜನ ಹೇಳುತ್ತಾರೆ. ನಿಮಗೆ ಗೊತ್ತಾ? ಗೋವಾದಲ್ಲಿ ಈ ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಬಹಳ ವರ್ಷಗಳಿಂದ ಜಾರಿಯಲ್ಲಿದೆ ಎಂಬುದು. ಅಲ್ಲಿ ಇದನ್ನು ಸಾಮಾನ್ಯ ಕುಟುಂಬ ಕಾಯ್ದೆ (Uniform Family Law) ಎಂದು ಕರೆಯುತ್ತಾರೆ. ಗೋವಾ ರಾಜ್ಯದಲ್ಲಿ ವಾಸಿಸುವ ಎಲ್ಲ ಧರ್ಮವನ್ನು ಅನುಸರಿಸುವ ಜನರು ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ.

ಈಗ ಈ ಸುದ್ದಿ ಏಕೆ?

ಇಂದು ಗೋವಾದಲ್ಲಿರುವ ಬಾಂಬೆ ಹೈ ಕೋರ್ಟ್​ನ ಗೋವಾ ಪೀಠದ​ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಏಕರೂಪ ನಾಗರಿಕ ಸಂಹಿತೆ ಇದೆ ಎಂದು ಹೇಳಿದರು. ಮುಖ್ಯ ನ್ಯಾಯಮೂರ್ತಿ ಅಲ್ಲಿಗೇ ನಿಲ್ಲದೆ.. ದೇಶದ ಬುದ್ಧಿಜೀವಿಗಳು ಇಲ್ಲಿಗೆ ಬಂದು ಅಧ್ಯಯನ ಮಾಡಬೇಕು. ಪ್ರತಿ ಬಾರಿ ಈ ವಿಚಾರ ಬಂದಾಗ ಬಿಸಿ ಬಿಸಿ ಚರ್ಚಿಸುವ ಈ ಬುದ್ಧಿಜೀವಿಗಳು ಇಲ್ಲಿಗೆ ಬಂದು ನೋಡಿದರೆ ಅವರಿಗೆ ಅರ್ಥವಾಗುತ್ತದೆ, ಈ ಕಾನೂನು ಇಲ್ಲಿ ಹೇಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮದುವೆಯಿಂದ ಹಿಡಿದು ಆಸ್ತಿ ಹಂಚಿಕೆವರೆಗೆ ಎಲ್ಲ ವಿಚಾರದಲ್ಲಿಯೂ ಗೋವಾದ ಏಕರೂಪ ನಾಗರಿಕ ಸಂಹಿತೆ, ಇಲ್ಲಿ ವಾಸಿಸುವ ಎಲ್ಲ ಧರ್ಮದ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಈ ಹಿಂದೆ ನಾನಿಲ್ಲಿ ಕೆಲಸ ಮಾಡಿದ್ದೇನೆ. ಅನೇಕ ಕೇಸುಗಳನ್ನು ಈ ಕಾನೂನಿನ ಅಡಿ ನಿರ್ಣಯಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇನ್ನೊಂದು ವಿಚಾರವನ್ನು ನಾನು ಹೇಳುತ್ತೇನೆ. ಬಾಂಬೆ ಹೈ ಕೋರ್ಟಿನ ಮುಖ್ಯ ಪೀಠ ಇರುವುದು ಮುಂಬೈಯಲ್ಲಿ. ಅಲ್ಲಿರುವ ಪ್ರಧಾನ ಉಚ್ಛ ನ್ಯಾಯಾಲಯಕ್ಕೆ ಹೊಸ ಕಟ್ಟಡ ಬೇಕು ಎಂದು, ಈ ಸಂದರ್ಭದಲ್ಲಿ ಇಲ್ಲಿ ಹಾಜರಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರಿಗೆ ಹೇಳಲು ಇಚ್ಛಿಸುತ್ತೇನೆ ಎಂದರು. ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನಿಯುಕ್ತಿಗೊಂಡಿರುವ ಎನ್​.ವಿ. ರಮಣ ಅವರಿಗೆ ಈ ಕುರಿತು ಕಿವಿಮಾತು ಹೇಳಿದ ಬೋಬ್ಡೆ ಅವರು, ತಾವು ಈ ನಿಟ್ಟಿನಲ್ಲಿ ಪ್ರಯತ್ನಿಸಿ ಎಂದರು.

ರವಿಶಂಕರ್​ ಪ್ರಸಾದ್​ ಮಾತನಾಡಿ ಗೋವಾ ರಾಜ್ಯವನ್ನು ಕದಂಬರು ಆಳಿದ್ದರು. ಹತ್ತರಿಂದ ಹದಿನಾಲ್ಕನೇ ಶತಮಾನದ ಮಧ್ಯೆ ಕದಂಬರು ಆಳುವಾಗ ನ್ಯಾಯ ಪದ್ಧತಿ ಹಿಂದೂ ನ್ಯಾಯಶಾಸ್ತ್ರದ ಆಧಾರದ ಮೇಲೆ ನಡೆಯುತ್ತಿತ್ತು ಮತ್ತು ಮುಖ್ಯ ನ್ಯಾಯಮೂರ್ತಿಯನ್ನು ಧರ್ಮ ಅಧ್ಯಕ್ಷ ಎಂದು ಕರೆಯುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ:

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Published On - 7:01 pm, Sat, 27 March 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ