AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ

ಬಾಂಬೆ ಹೈಕೋರ್ಟಿನ ಗೋವಾ ಪೀಠದ ಹೊಸ ಕಟ್ಟಡದ ಉದ್ಘಾಟನೆ ಸಂದರ್ಭದಲ್ಲಿ ಸವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಜಾರಿಯಲ್ಲಿರುವ Uniform Civil Codeನ್ನು ಅಧ್ಯಯನ ಮಾಡಲು ಬುದ್ಧಿಜೀವಗಳಿಗೆ ಕರೆ ನೀಡಿದರು.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ
ಮುಖ್ಯ ನ್ಯಾಯಮೂರ್ತಿ ಎಸ್. ಎ ಬೋಬ್ಡೆ
ಡಾ. ಭಾಸ್ಕರ ಹೆಗಡೆ
|

Updated on:Mar 27, 2021 | 7:03 PM

Share

ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಅಥವಾ ಏಕರೂಪ ನಾಗರಿಕ ಸಂಹಿತೆ ಎಂದರೆ ಸಾಕು, ನಮ್ಮಲ್ಲಿ ಭಿನ್ನಾಭಿಪ್ರಾಯ ಶುರು. ಕೆಲವೊಮ್ಮೆ ಜಗಳದಲ್ಲೂ ಕೊನೆಗೊಂಡಿದ್ದಿದೆ. ಇದನ್ನು ಜಾರಿಗೆ ತರುವುದರಿಂದ ನಮ್ಮ ಧರ್ಮ ನಿರಪೇಕ್ಷ ಸಂವಿಧಾನಕ್ಕೆ ಅಪಚಾರವಾಗುತ್ತದೆ ಎಂದು ಬಹಳ ಜನ ಹೇಳುತ್ತಾರೆ. ನಿಮಗೆ ಗೊತ್ತಾ? ಗೋವಾದಲ್ಲಿ ಈ ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಬಹಳ ವರ್ಷಗಳಿಂದ ಜಾರಿಯಲ್ಲಿದೆ ಎಂಬುದು. ಅಲ್ಲಿ ಇದನ್ನು ಸಾಮಾನ್ಯ ಕುಟುಂಬ ಕಾಯ್ದೆ (Uniform Family Law) ಎಂದು ಕರೆಯುತ್ತಾರೆ. ಗೋವಾ ರಾಜ್ಯದಲ್ಲಿ ವಾಸಿಸುವ ಎಲ್ಲ ಧರ್ಮವನ್ನು ಅನುಸರಿಸುವ ಜನರು ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ.

ಈಗ ಈ ಸುದ್ದಿ ಏಕೆ?

ಇಂದು ಗೋವಾದಲ್ಲಿರುವ ಬಾಂಬೆ ಹೈ ಕೋರ್ಟ್​ನ ಗೋವಾ ಪೀಠದ​ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಏಕರೂಪ ನಾಗರಿಕ ಸಂಹಿತೆ ಇದೆ ಎಂದು ಹೇಳಿದರು. ಮುಖ್ಯ ನ್ಯಾಯಮೂರ್ತಿ ಅಲ್ಲಿಗೇ ನಿಲ್ಲದೆ.. ದೇಶದ ಬುದ್ಧಿಜೀವಿಗಳು ಇಲ್ಲಿಗೆ ಬಂದು ಅಧ್ಯಯನ ಮಾಡಬೇಕು. ಪ್ರತಿ ಬಾರಿ ಈ ವಿಚಾರ ಬಂದಾಗ ಬಿಸಿ ಬಿಸಿ ಚರ್ಚಿಸುವ ಈ ಬುದ್ಧಿಜೀವಿಗಳು ಇಲ್ಲಿಗೆ ಬಂದು ನೋಡಿದರೆ ಅವರಿಗೆ ಅರ್ಥವಾಗುತ್ತದೆ, ಈ ಕಾನೂನು ಇಲ್ಲಿ ಹೇಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮದುವೆಯಿಂದ ಹಿಡಿದು ಆಸ್ತಿ ಹಂಚಿಕೆವರೆಗೆ ಎಲ್ಲ ವಿಚಾರದಲ್ಲಿಯೂ ಗೋವಾದ ಏಕರೂಪ ನಾಗರಿಕ ಸಂಹಿತೆ, ಇಲ್ಲಿ ವಾಸಿಸುವ ಎಲ್ಲ ಧರ್ಮದ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಈ ಹಿಂದೆ ನಾನಿಲ್ಲಿ ಕೆಲಸ ಮಾಡಿದ್ದೇನೆ. ಅನೇಕ ಕೇಸುಗಳನ್ನು ಈ ಕಾನೂನಿನ ಅಡಿ ನಿರ್ಣಯಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇನ್ನೊಂದು ವಿಚಾರವನ್ನು ನಾನು ಹೇಳುತ್ತೇನೆ. ಬಾಂಬೆ ಹೈ ಕೋರ್ಟಿನ ಮುಖ್ಯ ಪೀಠ ಇರುವುದು ಮುಂಬೈಯಲ್ಲಿ. ಅಲ್ಲಿರುವ ಪ್ರಧಾನ ಉಚ್ಛ ನ್ಯಾಯಾಲಯಕ್ಕೆ ಹೊಸ ಕಟ್ಟಡ ಬೇಕು ಎಂದು, ಈ ಸಂದರ್ಭದಲ್ಲಿ ಇಲ್ಲಿ ಹಾಜರಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರಿಗೆ ಹೇಳಲು ಇಚ್ಛಿಸುತ್ತೇನೆ ಎಂದರು. ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನಿಯುಕ್ತಿಗೊಂಡಿರುವ ಎನ್​.ವಿ. ರಮಣ ಅವರಿಗೆ ಈ ಕುರಿತು ಕಿವಿಮಾತು ಹೇಳಿದ ಬೋಬ್ಡೆ ಅವರು, ತಾವು ಈ ನಿಟ್ಟಿನಲ್ಲಿ ಪ್ರಯತ್ನಿಸಿ ಎಂದರು.

ರವಿಶಂಕರ್​ ಪ್ರಸಾದ್​ ಮಾತನಾಡಿ ಗೋವಾ ರಾಜ್ಯವನ್ನು ಕದಂಬರು ಆಳಿದ್ದರು. ಹತ್ತರಿಂದ ಹದಿನಾಲ್ಕನೇ ಶತಮಾನದ ಮಧ್ಯೆ ಕದಂಬರು ಆಳುವಾಗ ನ್ಯಾಯ ಪದ್ಧತಿ ಹಿಂದೂ ನ್ಯಾಯಶಾಸ್ತ್ರದ ಆಧಾರದ ಮೇಲೆ ನಡೆಯುತ್ತಿತ್ತು ಮತ್ತು ಮುಖ್ಯ ನ್ಯಾಯಮೂರ್ತಿಯನ್ನು ಧರ್ಮ ಅಧ್ಯಕ್ಷ ಎಂದು ಕರೆಯುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ:

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Published On - 7:01 pm, Sat, 27 March 21

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ