Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ

ಬಾಂಬೆ ಹೈಕೋರ್ಟಿನ ಗೋವಾ ಪೀಠದ ಹೊಸ ಕಟ್ಟಡದ ಉದ್ಘಾಟನೆ ಸಂದರ್ಭದಲ್ಲಿ ಸವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಜಾರಿಯಲ್ಲಿರುವ Uniform Civil Codeನ್ನು ಅಧ್ಯಯನ ಮಾಡಲು ಬುದ್ಧಿಜೀವಗಳಿಗೆ ಕರೆ ನೀಡಿದರು.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ
ಮುಖ್ಯ ನ್ಯಾಯಮೂರ್ತಿ ಎಸ್. ಎ ಬೋಬ್ಡೆ
Follow us
ಡಾ. ಭಾಸ್ಕರ ಹೆಗಡೆ
|

Updated on:Mar 27, 2021 | 7:03 PM

ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಅಥವಾ ಏಕರೂಪ ನಾಗರಿಕ ಸಂಹಿತೆ ಎಂದರೆ ಸಾಕು, ನಮ್ಮಲ್ಲಿ ಭಿನ್ನಾಭಿಪ್ರಾಯ ಶುರು. ಕೆಲವೊಮ್ಮೆ ಜಗಳದಲ್ಲೂ ಕೊನೆಗೊಂಡಿದ್ದಿದೆ. ಇದನ್ನು ಜಾರಿಗೆ ತರುವುದರಿಂದ ನಮ್ಮ ಧರ್ಮ ನಿರಪೇಕ್ಷ ಸಂವಿಧಾನಕ್ಕೆ ಅಪಚಾರವಾಗುತ್ತದೆ ಎಂದು ಬಹಳ ಜನ ಹೇಳುತ್ತಾರೆ. ನಿಮಗೆ ಗೊತ್ತಾ? ಗೋವಾದಲ್ಲಿ ಈ ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಬಹಳ ವರ್ಷಗಳಿಂದ ಜಾರಿಯಲ್ಲಿದೆ ಎಂಬುದು. ಅಲ್ಲಿ ಇದನ್ನು ಸಾಮಾನ್ಯ ಕುಟುಂಬ ಕಾಯ್ದೆ (Uniform Family Law) ಎಂದು ಕರೆಯುತ್ತಾರೆ. ಗೋವಾ ರಾಜ್ಯದಲ್ಲಿ ವಾಸಿಸುವ ಎಲ್ಲ ಧರ್ಮವನ್ನು ಅನುಸರಿಸುವ ಜನರು ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ.

ಈಗ ಈ ಸುದ್ದಿ ಏಕೆ?

ಇಂದು ಗೋವಾದಲ್ಲಿರುವ ಬಾಂಬೆ ಹೈ ಕೋರ್ಟ್​ನ ಗೋವಾ ಪೀಠದ​ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಏಕರೂಪ ನಾಗರಿಕ ಸಂಹಿತೆ ಇದೆ ಎಂದು ಹೇಳಿದರು. ಮುಖ್ಯ ನ್ಯಾಯಮೂರ್ತಿ ಅಲ್ಲಿಗೇ ನಿಲ್ಲದೆ.. ದೇಶದ ಬುದ್ಧಿಜೀವಿಗಳು ಇಲ್ಲಿಗೆ ಬಂದು ಅಧ್ಯಯನ ಮಾಡಬೇಕು. ಪ್ರತಿ ಬಾರಿ ಈ ವಿಚಾರ ಬಂದಾಗ ಬಿಸಿ ಬಿಸಿ ಚರ್ಚಿಸುವ ಈ ಬುದ್ಧಿಜೀವಿಗಳು ಇಲ್ಲಿಗೆ ಬಂದು ನೋಡಿದರೆ ಅವರಿಗೆ ಅರ್ಥವಾಗುತ್ತದೆ, ಈ ಕಾನೂನು ಇಲ್ಲಿ ಹೇಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮದುವೆಯಿಂದ ಹಿಡಿದು ಆಸ್ತಿ ಹಂಚಿಕೆವರೆಗೆ ಎಲ್ಲ ವಿಚಾರದಲ್ಲಿಯೂ ಗೋವಾದ ಏಕರೂಪ ನಾಗರಿಕ ಸಂಹಿತೆ, ಇಲ್ಲಿ ವಾಸಿಸುವ ಎಲ್ಲ ಧರ್ಮದ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಈ ಹಿಂದೆ ನಾನಿಲ್ಲಿ ಕೆಲಸ ಮಾಡಿದ್ದೇನೆ. ಅನೇಕ ಕೇಸುಗಳನ್ನು ಈ ಕಾನೂನಿನ ಅಡಿ ನಿರ್ಣಯಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇನ್ನೊಂದು ವಿಚಾರವನ್ನು ನಾನು ಹೇಳುತ್ತೇನೆ. ಬಾಂಬೆ ಹೈ ಕೋರ್ಟಿನ ಮುಖ್ಯ ಪೀಠ ಇರುವುದು ಮುಂಬೈಯಲ್ಲಿ. ಅಲ್ಲಿರುವ ಪ್ರಧಾನ ಉಚ್ಛ ನ್ಯಾಯಾಲಯಕ್ಕೆ ಹೊಸ ಕಟ್ಟಡ ಬೇಕು ಎಂದು, ಈ ಸಂದರ್ಭದಲ್ಲಿ ಇಲ್ಲಿ ಹಾಜರಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರಿಗೆ ಹೇಳಲು ಇಚ್ಛಿಸುತ್ತೇನೆ ಎಂದರು. ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನಿಯುಕ್ತಿಗೊಂಡಿರುವ ಎನ್​.ವಿ. ರಮಣ ಅವರಿಗೆ ಈ ಕುರಿತು ಕಿವಿಮಾತು ಹೇಳಿದ ಬೋಬ್ಡೆ ಅವರು, ತಾವು ಈ ನಿಟ್ಟಿನಲ್ಲಿ ಪ್ರಯತ್ನಿಸಿ ಎಂದರು.

ರವಿಶಂಕರ್​ ಪ್ರಸಾದ್​ ಮಾತನಾಡಿ ಗೋವಾ ರಾಜ್ಯವನ್ನು ಕದಂಬರು ಆಳಿದ್ದರು. ಹತ್ತರಿಂದ ಹದಿನಾಲ್ಕನೇ ಶತಮಾನದ ಮಧ್ಯೆ ಕದಂಬರು ಆಳುವಾಗ ನ್ಯಾಯ ಪದ್ಧತಿ ಹಿಂದೂ ನ್ಯಾಯಶಾಸ್ತ್ರದ ಆಧಾರದ ಮೇಲೆ ನಡೆಯುತ್ತಿತ್ತು ಮತ್ತು ಮುಖ್ಯ ನ್ಯಾಯಮೂರ್ತಿಯನ್ನು ಧರ್ಮ ಅಧ್ಯಕ್ಷ ಎಂದು ಕರೆಯುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ:

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Published On - 7:01 pm, Sat, 27 March 21

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ