AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?

ಪುಷ್ಪ ಅವರು ಇಂತಹ ಇನ್ನಷ್ಟು ಪ್ರಕರಣಗಳನ್ನು ಎದುರಿಸಬೇಕಾಗಿದೆ. ವಕೀಲರಾಗಿದ್ದಾಗ ಅವರು ಇಂತಹ ಪ್ರಕರಣಗಳನ್ನು ಬಹುಶಃ ನಿರ್ವಹಿಸಿಲ್ಲ ಎಂದು ಕಾಣುತ್ತದೆ. ಹೀಗಾಗಿ ಅವರಿಗೆ ಇನ್ನೂ ತರಬೇತಿಯ ಅವಶ್ಯಕತೆಯಿದೆ ಎಂಬುದು ಕೊಲಿಜಿಯಂನ ಅನಿಸಿಕೆಯಾಗಿದೆ.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?
ನ್ಯಾಯಮೂರ್ತಿ ಪುಷ್ಪ
Follow us
ಪೃಥ್ವಿಶಂಕರ
|

Updated on:Jan 31, 2021 | 10:02 AM

ದೆಹಲಿ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಎರಡು ವಿವಾದಾತ್ಮಕ ತೀರ್ಪುಗಳನ್ನು ಅನುಸರಿಸಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪ ಅವರನ್ನು ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್​ನ ಕೊಲಿಜಿಯಂ ತಡೆ ನೀಡಿದೆ.

ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣದ ತೀರ್ಪು ನೀಡುವ ವೇಳೆ, ಅಪ್ರಾಪ್ತ ಬಾಲಕಿಯ ಕೈ ಹಿಡಿಯುವುದು ಹಾಗೂ ಪ್ಯಾಂಟ್ ಜಿಪ್‌ ತೆಗೆಯುವುದನ್ನು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸುವಂತಿಲ್ಲ ಎಂದು ನ್ಯಾಯಮೂರ್ತಿ ಪುಷ್ಪ ತೀರ್ಪು ನೀಡಿದ್ದರು. ಈ ಹಿಂದೆ ಇದೇ ಪುಷ್ಪ ಅವರು ಚರ್ಮ ತಟ್ಟಿದರೆ ಮಾತ್ರ ಲೈಂಗಿಕ ದೌರ್ಜನ್ಯ ಎಂದು ತೀರ್ಪು ನೀಡಿದ್ದರು.

ಕೊಲಿಜಿಯಂ ತನ್ನ ಶಿಪಾರಸ್ಸನ್ನು ಹಿಂಪಡೆದಿದೆ.. ಜನವರಿ 20 ರಂದು ನಡೆದ ಸಭೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ಕೊಲಿಜಿಯಂ, ನ್ಯಾಯಮೂರ್ತಿ ಪುಷ್ಪ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಮಾಡುವ ಪ್ರಸ್ತಾಪವನ್ನಿಟ್ಟಿತ್ತು. ಆದರೆ ಪುಷ್ಪ ಅವರ ಈ ವಿವಾದಾತ್ಮಕ ತೀರ್ಪಿನಿಂದ ಎಚ್ಚೆತ್ತುಕೊಂಡ ಕೊಲಿಜಿಯಂ ತನ್ನ ಶಿಪಾರಸ್ಸನ್ನು ಹಿಂಪಡೆದಿದೆ. ಈ ಹಿನ್ನೆಲೆಯಿಂದಾಗಿ ಪುಷ್ಪ ಅವರನ್ನು ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಬ್ರೇಕ್​ ಬಿದ್ದಿದೆ.

ಪುಷ್ಪ ಅವರ ಈ ತೀರ್ಪನ್ನು ಗಮನಿಸಿದ ಕೊಲಿಜಿಯಂ ಪುಷ್ಪ ಅವರು ಇಂತಹ ಇನ್ನಷ್ಟು ಪ್ರಕರಣಗಳನ್ನು ಎದುರಿಸಬೇಕಾಗಿದೆ. ವಕೀಲರಾಗಿದ್ದಾಗ ಅವರು ಇಂತಹ ಪ್ರಕರಣಗಳನ್ನು ಬಹುಶಃ ನಿರ್ವಹಿಸಿಲ್ಲ ಎಂದು ಕಾಣುತ್ತದೆ. ಹೀಗಾಗಿ ಅವರಿಗೆ ಇನ್ನೂ ತರಬೇತಿಯ ಅವಶ್ಯಕತೆಯಿದೆ ಎಂಬುದು ಕೊಲಿಜಿಯಂನ ಅನಿಸಿಕೆಯಾಗಿದೆ.

ನ್ಯಾಯಮೂರ್ತಿ ಪುಷ್ಪಾ ಹಿನ್ನೆಲೆ.. ನ್ಯಾಯಮೂರ್ತಿ ಪುಷ್ಪಾ ವೀರೇಂದ್ರ ಗಣದೇವಾಲಾ ಅವರು ಮಾರ್ಚ್ 3, 1969 ರಂದು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಪರತ್ವಾಡದಲ್ಲಿ ಜನಿಸಿದರು. ಅವರು ವಿವಿಧ ಬ್ಯಾಂಕುಗಳು ಮತ್ತು ವಿಮಾ ಕಂಪನಿಗಳಿಗೆ ಪ್ಯಾನಲ್ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.

ಜೊತೆಗೆ ಅಮರಾವತಿಯ ವಿವಿಧ ಕಾಲೇಜುಗಳಲ್ಲಿ ಗೌರವ ಉಪನ್ಯಾಸಕರಾಗಿ ಹಾಗೂ ಅಮರಾವತಿ ವಿಶ್ವವಿದ್ಯಾಲಯದ ಎಂಬಿಎ ಮತ್ತು ಎಲ್ಎಲ್ಎಂ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ್ದಾರೆ. 2007 ರಲ್ಲಿ ನೇರವಾಗಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡ ಅವರು, ಫೆಬ್ರವರಿ 13, 2019 ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು.

ಅಪ್ರಾಪ್ತೆಯ ಕೈ ಹಿಡಿದು, ಪ್ಯಾಂಟ್​ ಜಿಪ್​ ತೆರೆದರೆ ಅದು ಲೈಂಗಿಕ ದೌರ್ಜನ್ಯವಲ್ಲ.. ಹೊರಬಿತ್ತು ಬಾಂಬೆ ಹೈಕೋರ್ಟ್​ನ ಮತ್ತೊಂದು ತೀರ್ಪು

Published On - 10:00 am, Sun, 31 January 21

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ