AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾಣಿ, ಜೋಷಿ ಪಾತ್ರ: ಬಾಬ್ರಿ ಮಸೀದಿ ಧ್ವಂಸ ತೀರ್ಪಿನ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಅವರನ್ನು ಆರೋಪಿಗಳೆಂದು ಹೂಡಿರುವ ಬಾಬ್ರಿ ಮಸೀದಿ ಧ್ವಂಸ ಆರೋಪಿಗಳೆಂದು ಹೂಡಿರುವ ಪ್ರಕರಣದ ತೀರ್ಪನ್ನು ನೀಡಲು ಒಂದು ತಿಂಗಳುಮಟ್ಟಿಗೆ ಸಮಯವನ್ನು ವಿಸ್ತರಿಸಿರುವ ಸರ್ವೋಚ್ಛ ನ್ಯಾಯಾಲಯವು, ಸೆಪ್ಟಂಬರ್ 30 ರೊಳಗಾಗಿ ಪ್ರಕರಣ ಇತ್ಯರ್ಥಗೊಳಿಸುವಂತೆ ವಿಶೇಷ ಸಿಬಿಐ ಕೋರ್ಟಿಗೆ ನಿರ್ದೇಶನ ನೀಡಿದೆ. ಅಯೋಧ್ಯೆ ವಿಶೇಷ ಕೋರ್ಟಿನ ನ್ಯಾಯಾಧೀಶರ ಮನವಿಯ ಮೇರೆಗೆ ನ್ಯಾಯಮೂರ್ತಿ ರೋಹಿಂಟನ್ ಎಫ್ ನಾರಿಮನ್ ಅವರ ನೇತೃತ್ವದ ಪೀಠವು ಅವಧಿಯನ್ನು ವಿಸ್ತರಿಸಿತು. ಪ್ರಕರಣದ […]

ಅಡ್ವಾಣಿ, ಜೋಷಿ ಪಾತ್ರ: ಬಾಬ್ರಿ ಮಸೀದಿ ಧ್ವಂಸ ತೀರ್ಪಿನ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 22, 2020 | 6:19 PM

ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಅವರನ್ನು ಆರೋಪಿಗಳೆಂದು ಹೂಡಿರುವ ಬಾಬ್ರಿ ಮಸೀದಿ ಧ್ವಂಸ ಆರೋಪಿಗಳೆಂದು ಹೂಡಿರುವ ಪ್ರಕರಣದ ತೀರ್ಪನ್ನು ನೀಡಲು ಒಂದು ತಿಂಗಳುಮಟ್ಟಿಗೆ ಸಮಯವನ್ನು ವಿಸ್ತರಿಸಿರುವ ಸರ್ವೋಚ್ಛ ನ್ಯಾಯಾಲಯವು, ಸೆಪ್ಟಂಬರ್ 30 ರೊಳಗಾಗಿ ಪ್ರಕರಣ ಇತ್ಯರ್ಥಗೊಳಿಸುವಂತೆ ವಿಶೇಷ ಸಿಬಿಐ ಕೋರ್ಟಿಗೆ ನಿರ್ದೇಶನ ನೀಡಿದೆ.

ಅಯೋಧ್ಯೆ ವಿಶೇಷ ಕೋರ್ಟಿನ ನ್ಯಾಯಾಧೀಶರ ಮನವಿಯ ಮೇರೆಗೆ ನ್ಯಾಯಮೂರ್ತಿ ರೋಹಿಂಟನ್ ಎಫ್ ನಾರಿಮನ್ ಅವರ ನೇತೃತ್ವದ ಪೀಠವು ಅವಧಿಯನ್ನು ವಿಸ್ತರಿಸಿತು. ಪ್ರಕರಣದ ಬಗ್ಗೆ ಪ್ರಗತಿ ವರದಿಯನ್ನು ಅಪೆಕ್ಸ್ ಕೋರ್ಟಿಗೆ ನೀಡಿರುವ ಅಯೋಧ್ಯೆ ಕೋರ್ಟಿನ ನ್ಯಾಯಾಧೀಶರು, ಅದರೊಂದಿಗೆ ಅವಧಿ ವಿಸ್ತರಿಸಬೇಕೆನ್ನುವ ಕೋರಿಕೆಯನ್ನು ಸಹ ಸಲ್ಲಿಸಿದ್ದರು.

ಕಳೆದ ತಿಂಗಳು, ವಿಡಿಯೊಕಾನ್ಫರೆನ್ಸಿಂಗ್ ಮೂಲಕ ಬಿಜೆಪಿ ಅತ್ಯಂತ ಹಿರಿಯ ನಾಯಕರಾಗಿರುವ ಅಡ್ವಾಣಿ ಹಾಗೂ ಜೋಷಿ ಅವರ ಹೇಳಿಕೆಗಳನ್ನು ಸಿಬಿಐ ಕೋರ್ಟ್ ದಾಖಲಿಸಿಕೊಂಡಿತ್ತು. ನಾಯಕರಿಬ್ಬರೂ ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ತಳ್ಳಿ ಹಾಕಿದ್ದರಲ್ಲದೆ, ಅವುಗಳನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದೆ ಎಂದಿದ್ದರು.

ಮಸೀದಿ ಕೆಡವುವ ಕೃತ್ಯದಲ್ಲಿ ತಾವು ಭಾಗಿಯೇ ಆಗಿರಲಿಲ್ಲವೆಂದು ಸಹ ಹೇಳಿದ್ದ ಅಡ್ವಾಣಿ ಹಾಗೂ ಜೋಷಿ, ದೇಶದ ಐಕ್ಯತೆ ಹಾಗೂ ಸೌಹಾರ್ದತೆಗೆ ಧಕ್ಕೆಯಾಗುವ ಯಾವುದೇ ಕೆಲಸದಲ್ಲಿ ತಾವು ಭಾಗಿಯಾಗಿಲ್ಲ ಅಂತ ಕೋರ್ಟ್​ಗೆ ತಿಳಿಸಿದ್ದರು.

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ