AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾಣಿ, ಜೋಷಿ ಪಾತ್ರ: ಬಾಬ್ರಿ ಮಸೀದಿ ಧ್ವಂಸ ತೀರ್ಪಿನ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಅವರನ್ನು ಆರೋಪಿಗಳೆಂದು ಹೂಡಿರುವ ಬಾಬ್ರಿ ಮಸೀದಿ ಧ್ವಂಸ ಆರೋಪಿಗಳೆಂದು ಹೂಡಿರುವ ಪ್ರಕರಣದ ತೀರ್ಪನ್ನು ನೀಡಲು ಒಂದು ತಿಂಗಳುಮಟ್ಟಿಗೆ ಸಮಯವನ್ನು ವಿಸ್ತರಿಸಿರುವ ಸರ್ವೋಚ್ಛ ನ್ಯಾಯಾಲಯವು, ಸೆಪ್ಟಂಬರ್ 30 ರೊಳಗಾಗಿ ಪ್ರಕರಣ ಇತ್ಯರ್ಥಗೊಳಿಸುವಂತೆ ವಿಶೇಷ ಸಿಬಿಐ ಕೋರ್ಟಿಗೆ ನಿರ್ದೇಶನ ನೀಡಿದೆ. ಅಯೋಧ್ಯೆ ವಿಶೇಷ ಕೋರ್ಟಿನ ನ್ಯಾಯಾಧೀಶರ ಮನವಿಯ ಮೇರೆಗೆ ನ್ಯಾಯಮೂರ್ತಿ ರೋಹಿಂಟನ್ ಎಫ್ ನಾರಿಮನ್ ಅವರ ನೇತೃತ್ವದ ಪೀಠವು ಅವಧಿಯನ್ನು ವಿಸ್ತರಿಸಿತು. ಪ್ರಕರಣದ […]

ಅಡ್ವಾಣಿ, ಜೋಷಿ ಪಾತ್ರ: ಬಾಬ್ರಿ ಮಸೀದಿ ಧ್ವಂಸ ತೀರ್ಪಿನ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 22, 2020 | 6:19 PM

Share

ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಅವರನ್ನು ಆರೋಪಿಗಳೆಂದು ಹೂಡಿರುವ ಬಾಬ್ರಿ ಮಸೀದಿ ಧ್ವಂಸ ಆರೋಪಿಗಳೆಂದು ಹೂಡಿರುವ ಪ್ರಕರಣದ ತೀರ್ಪನ್ನು ನೀಡಲು ಒಂದು ತಿಂಗಳುಮಟ್ಟಿಗೆ ಸಮಯವನ್ನು ವಿಸ್ತರಿಸಿರುವ ಸರ್ವೋಚ್ಛ ನ್ಯಾಯಾಲಯವು, ಸೆಪ್ಟಂಬರ್ 30 ರೊಳಗಾಗಿ ಪ್ರಕರಣ ಇತ್ಯರ್ಥಗೊಳಿಸುವಂತೆ ವಿಶೇಷ ಸಿಬಿಐ ಕೋರ್ಟಿಗೆ ನಿರ್ದೇಶನ ನೀಡಿದೆ.

ಅಯೋಧ್ಯೆ ವಿಶೇಷ ಕೋರ್ಟಿನ ನ್ಯಾಯಾಧೀಶರ ಮನವಿಯ ಮೇರೆಗೆ ನ್ಯಾಯಮೂರ್ತಿ ರೋಹಿಂಟನ್ ಎಫ್ ನಾರಿಮನ್ ಅವರ ನೇತೃತ್ವದ ಪೀಠವು ಅವಧಿಯನ್ನು ವಿಸ್ತರಿಸಿತು. ಪ್ರಕರಣದ ಬಗ್ಗೆ ಪ್ರಗತಿ ವರದಿಯನ್ನು ಅಪೆಕ್ಸ್ ಕೋರ್ಟಿಗೆ ನೀಡಿರುವ ಅಯೋಧ್ಯೆ ಕೋರ್ಟಿನ ನ್ಯಾಯಾಧೀಶರು, ಅದರೊಂದಿಗೆ ಅವಧಿ ವಿಸ್ತರಿಸಬೇಕೆನ್ನುವ ಕೋರಿಕೆಯನ್ನು ಸಹ ಸಲ್ಲಿಸಿದ್ದರು.

ಕಳೆದ ತಿಂಗಳು, ವಿಡಿಯೊಕಾನ್ಫರೆನ್ಸಿಂಗ್ ಮೂಲಕ ಬಿಜೆಪಿ ಅತ್ಯಂತ ಹಿರಿಯ ನಾಯಕರಾಗಿರುವ ಅಡ್ವಾಣಿ ಹಾಗೂ ಜೋಷಿ ಅವರ ಹೇಳಿಕೆಗಳನ್ನು ಸಿಬಿಐ ಕೋರ್ಟ್ ದಾಖಲಿಸಿಕೊಂಡಿತ್ತು. ನಾಯಕರಿಬ್ಬರೂ ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳನ್ನು ತಳ್ಳಿ ಹಾಕಿದ್ದರಲ್ಲದೆ, ಅವುಗಳನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದೆ ಎಂದಿದ್ದರು.

ಮಸೀದಿ ಕೆಡವುವ ಕೃತ್ಯದಲ್ಲಿ ತಾವು ಭಾಗಿಯೇ ಆಗಿರಲಿಲ್ಲವೆಂದು ಸಹ ಹೇಳಿದ್ದ ಅಡ್ವಾಣಿ ಹಾಗೂ ಜೋಷಿ, ದೇಶದ ಐಕ್ಯತೆ ಹಾಗೂ ಸೌಹಾರ್ದತೆಗೆ ಧಕ್ಕೆಯಾಗುವ ಯಾವುದೇ ಕೆಲಸದಲ್ಲಿ ತಾವು ಭಾಗಿಯಾಗಿಲ್ಲ ಅಂತ ಕೋರ್ಟ್​ಗೆ ತಿಳಿಸಿದ್ದರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ