AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ […]

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 31, 2020 | 3:01 PM

Share

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ.

ಶಿಕ್ಷೆ ಪ್ರಕಟಿಸುವಾಗ, ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಭೂಷಣ್ ಕುರಿತು ನೀಡಿದ ಸಲಹೆಯನ್ನು ಉಲ್ಲೇಖಿಸಿದ ಕೋರ್ಟ್, ‘‘ಯಾವುದೇ ವ್ಯಕ್ತಿಯ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗದು’’ ಎಂದು ಅಭಿಪ್ರಾಯಪಟ್ಟಿತು.

‘‘ಬೇಷರತ್ ಕ್ಷಮಾಪಣೆ ಕೇಳಲು ಕೋರ್ಟ್ ಭೂಷಣ್ ಅವರಿಗೆ ಹಲವಾರು ಅವಕಾಶಗಳನ್ನು ನೀಡಿತು. ಆದರೆ ಅವರು ಹಾಗೆ ಮಾಡದೆ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡಿದರಲ್ಲದೆ ತಾವು ಮಾಡಿದ ಟೀಕೆಗಳಿಗೆ ಪ್ರಚಾರವನ್ನು ಗಿಟ್ಟಿಸಿಕೊಂಡರು,’’ ಎಂದು ಕೋರ್ಟ್ ಹೇಳಿತು.

ಕ್ಷಮಾಪಣೆ ಕೇಳಲು ಶುಕ್ರವಾರದಂದು ನಿರಾಕರಿಸಿದ್ದ ಪ್ರಶಾಂತ್ ಭೂಷಣ್ ಅವರು, ‘ವಿಷಾದ ವ್ಯಕ್ತಪಡಿಸುವುದೂ ನ್ಯಾಯಾಂಗ ನಿಂದನೆ ಮತ್ತು ನನ್ನ ಅಂತರಾತ್ಮ ಜೊತೆ ರಾಜಿ ಮಾಡಿಕೊಂಡಂತೆ,’ ಎಂದಿದ್ದರು. ‘ಪ್ರಜಾಪ್ರಭುತ್ವ ಮತ್ತು ಅದರ ಮೌಲ್ಯಗಳ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಬಹಿರಂಗ ಟೀಕೆಯ ಅವಶ್ಯಕತೆಯಿತ್ತು’ ಅಂತಲೂ ಭೂಷಣ್ ಹೇಳಿದ್ದರು.

ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಕಟಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಶಾಂತ್ ಭೂಷಣ್, ಜುಲ್ಮಾನೆ ಭರಿಸುವುದೋ ಅಥವಾ ಇತರ ಆದ್ಯತೆಗಳ ಬಗ್ಗೆ ಪರಿಶೀಲಿಸುವುದೋ ಎನ್ನುವುದರ ಬಗ್ಗೆ ಒಂದು ಸಾಮೂಹಿಕ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದರು.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ