AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ […]

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 31, 2020 | 3:01 PM

Share

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ.

ಶಿಕ್ಷೆ ಪ್ರಕಟಿಸುವಾಗ, ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಭೂಷಣ್ ಕುರಿತು ನೀಡಿದ ಸಲಹೆಯನ್ನು ಉಲ್ಲೇಖಿಸಿದ ಕೋರ್ಟ್, ‘‘ಯಾವುದೇ ವ್ಯಕ್ತಿಯ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗದು’’ ಎಂದು ಅಭಿಪ್ರಾಯಪಟ್ಟಿತು.

‘‘ಬೇಷರತ್ ಕ್ಷಮಾಪಣೆ ಕೇಳಲು ಕೋರ್ಟ್ ಭೂಷಣ್ ಅವರಿಗೆ ಹಲವಾರು ಅವಕಾಶಗಳನ್ನು ನೀಡಿತು. ಆದರೆ ಅವರು ಹಾಗೆ ಮಾಡದೆ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡಿದರಲ್ಲದೆ ತಾವು ಮಾಡಿದ ಟೀಕೆಗಳಿಗೆ ಪ್ರಚಾರವನ್ನು ಗಿಟ್ಟಿಸಿಕೊಂಡರು,’’ ಎಂದು ಕೋರ್ಟ್ ಹೇಳಿತು.

ಕ್ಷಮಾಪಣೆ ಕೇಳಲು ಶುಕ್ರವಾರದಂದು ನಿರಾಕರಿಸಿದ್ದ ಪ್ರಶಾಂತ್ ಭೂಷಣ್ ಅವರು, ‘ವಿಷಾದ ವ್ಯಕ್ತಪಡಿಸುವುದೂ ನ್ಯಾಯಾಂಗ ನಿಂದನೆ ಮತ್ತು ನನ್ನ ಅಂತರಾತ್ಮ ಜೊತೆ ರಾಜಿ ಮಾಡಿಕೊಂಡಂತೆ,’ ಎಂದಿದ್ದರು. ‘ಪ್ರಜಾಪ್ರಭುತ್ವ ಮತ್ತು ಅದರ ಮೌಲ್ಯಗಳ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಬಹಿರಂಗ ಟೀಕೆಯ ಅವಶ್ಯಕತೆಯಿತ್ತು’ ಅಂತಲೂ ಭೂಷಣ್ ಹೇಳಿದ್ದರು.

ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಕಟಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಶಾಂತ್ ಭೂಷಣ್, ಜುಲ್ಮಾನೆ ಭರಿಸುವುದೋ ಅಥವಾ ಇತರ ಆದ್ಯತೆಗಳ ಬಗ್ಗೆ ಪರಿಶೀಲಿಸುವುದೋ ಎನ್ನುವುದರ ಬಗ್ಗೆ ಒಂದು ಸಾಮೂಹಿಕ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದರು.

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್