ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ […]

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ

Updated on: Aug 31, 2020 | 3:01 PM

ಭಾರತದ ಮುಖ್ಯ ನ್ಯಾಯಾಧೀಶ ನಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಸುಪ್ರೀಂ ಕೋರ್ಟನ್ನು ತಮ್ಮ ಟ್ವೀಟ್​ಗಳ ಮೂಲಕ ಹೆಸರಾಂತ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಟೀಕಿಸಿರುವುದು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು ರೂ. 1 ಜುಲ್ಮಾನೆಯನ್ನು ಅವರಿಗೆ ವಿಧಿಸಿದೆ. ಒಂದು ಪಕ್ಷ ಭೂಷಣ್ ಸೆಪ್ಟಂಬರ್ 15ರೊಳಗಾಗಿ ತಮ್ಮ ಮೇಲೆ ವಿಧಿಸಿರುವ ದಂಡವನ್ನು ಭರಿಸದಿದ್ದರೆ ಮೂರು ತಿಂಗಳ ಸೆರೆವಾಸ ಇಲ್ಲವೆ ಮೂರು ತಿಂಗಳು ವಕೀಲಿಕೆಯನ್ನು ನಡೆಸದಿರುವ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ.

ಶಿಕ್ಷೆ ಪ್ರಕಟಿಸುವಾಗ, ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಭೂಷಣ್ ಕುರಿತು ನೀಡಿದ ಸಲಹೆಯನ್ನು ಉಲ್ಲೇಖಿಸಿದ ಕೋರ್ಟ್, ‘‘ಯಾವುದೇ ವ್ಯಕ್ತಿಯ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗದು’’ ಎಂದು ಅಭಿಪ್ರಾಯಪಟ್ಟಿತು.

‘‘ಬೇಷರತ್ ಕ್ಷಮಾಪಣೆ ಕೇಳಲು ಕೋರ್ಟ್ ಭೂಷಣ್ ಅವರಿಗೆ ಹಲವಾರು ಅವಕಾಶಗಳನ್ನು ನೀಡಿತು. ಆದರೆ ಅವರು ಹಾಗೆ ಮಾಡದೆ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡಿದರಲ್ಲದೆ ತಾವು ಮಾಡಿದ ಟೀಕೆಗಳಿಗೆ ಪ್ರಚಾರವನ್ನು ಗಿಟ್ಟಿಸಿಕೊಂಡರು,’’ ಎಂದು ಕೋರ್ಟ್ ಹೇಳಿತು.

ಕ್ಷಮಾಪಣೆ ಕೇಳಲು ಶುಕ್ರವಾರದಂದು ನಿರಾಕರಿಸಿದ್ದ ಪ್ರಶಾಂತ್ ಭೂಷಣ್ ಅವರು, ‘ವಿಷಾದ ವ್ಯಕ್ತಪಡಿಸುವುದೂ ನ್ಯಾಯಾಂಗ ನಿಂದನೆ ಮತ್ತು ನನ್ನ ಅಂತರಾತ್ಮ ಜೊತೆ ರಾಜಿ ಮಾಡಿಕೊಂಡಂತೆ,’ ಎಂದಿದ್ದರು. ‘ಪ್ರಜಾಪ್ರಭುತ್ವ ಮತ್ತು ಅದರ ಮೌಲ್ಯಗಳ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಬಹಿರಂಗ ಟೀಕೆಯ ಅವಶ್ಯಕತೆಯಿತ್ತು’ ಅಂತಲೂ ಭೂಷಣ್ ಹೇಳಿದ್ದರು.

ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಕಟಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಶಾಂತ್ ಭೂಷಣ್, ಜುಲ್ಮಾನೆ ಭರಿಸುವುದೋ ಅಥವಾ ಇತರ ಆದ್ಯತೆಗಳ ಬಗ್ಗೆ ಪರಿಶೀಲಿಸುವುದೋ ಎನ್ನುವುದರ ಬಗ್ಗೆ ಒಂದು ಸಾಮೂಹಿಕ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us