AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಾಂಗ ನಿಂದನೆ ಆರೋಪ ಕೇಸ್​: ಆರ್ನಬ್ ಗೋಸ್ವಾಮಿಗೆ ಮಧ್ಯಂತರ ಗೆಲುವು

ಮುಂಬೈ: ಅನ್ವಯ್ ನಾಯಕ್ ಆತ್ಮಹತ್ಯೆಗೆ ಕಾರಣವಾಗಿದ್ದಾನೆ ಎಂಬ ಆರೋಪದಡಿ ಸದ್ಯ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸುದ್ದಿವಾಹಿನಿಯ ಪ್ರಧಾನ ಸಂಪಾದಕ ಆರ್ನಬ್ ಗೋಸ್ವಾಮಿಗೆ ಮಹಾರಾಷ್ಟ್ರ ವಿಧಾನಸಭೆ ನಿಂದನಾ ಕೇಸ್​ನಲ್ಲಿ ಸರ್ವೋಚ್ಛ ನ್ಯಾಯಾಲಯದಿಂದ ಸಂತೋಷದ ಸುದ್ದಿ ಸಿಕ್ಕಿದೆ. ಮಹಾರಾಷ್ಟ್ರ ವಿಧಾನ ಸಭೆ ಕೊಟ್ಟ ಶಾಸಕಾಂಗ ನಿಂದನಾ ನೋಟಿಸನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ಮರು ನೋಟಿಸ್ ಕೊಟ್ಟಿರುವ ಮಹಾರಾಷ್ಟ್ರ ವಿಧಾನ ಸಭೆಯ ಕ್ರಮದ ವಿರುದ್ಧ ಗೋಸ್ವಾಮಿ ಮತ್ತೆ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು. ಇಂದು ಈ ಕೇಸನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ […]

ಶಾಸಕಾಂಗ ನಿಂದನೆ ಆರೋಪ ಕೇಸ್​: ಆರ್ನಬ್ ಗೋಸ್ವಾಮಿಗೆ ಮಧ್ಯಂತರ ಗೆಲುವು
KUSHAL V
|

Updated on: Nov 06, 2020 | 7:44 PM

Share

ಮುಂಬೈ: ಅನ್ವಯ್ ನಾಯಕ್ ಆತ್ಮಹತ್ಯೆಗೆ ಕಾರಣವಾಗಿದ್ದಾನೆ ಎಂಬ ಆರೋಪದಡಿ ಸದ್ಯ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸುದ್ದಿವಾಹಿನಿಯ ಪ್ರಧಾನ ಸಂಪಾದಕ ಆರ್ನಬ್ ಗೋಸ್ವಾಮಿಗೆ ಮಹಾರಾಷ್ಟ್ರ ವಿಧಾನಸಭೆ ನಿಂದನಾ ಕೇಸ್​ನಲ್ಲಿ ಸರ್ವೋಚ್ಛ ನ್ಯಾಯಾಲಯದಿಂದ ಸಂತೋಷದ ಸುದ್ದಿ ಸಿಕ್ಕಿದೆ. ಮಹಾರಾಷ್ಟ್ರ ವಿಧಾನ ಸಭೆ ಕೊಟ್ಟ ಶಾಸಕಾಂಗ ನಿಂದನಾ ನೋಟಿಸನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ಮರು ನೋಟಿಸ್ ಕೊಟ್ಟಿರುವ ಮಹಾರಾಷ್ಟ್ರ ವಿಧಾನ ಸಭೆಯ ಕ್ರಮದ ವಿರುದ್ಧ ಗೋಸ್ವಾಮಿ ಮತ್ತೆ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರು.

ಇಂದು ಈ ಕೇಸನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರ ಪೀಠ ಮಹಾರಾಷ್ಟ್ರ ವಿಧಾನ ಸಭೆ ಕಾರ್ಯದರ್ಶಿಯ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲ, ಮುಂದಿನ ವಿಚಾರಣಾ ದಿನದಂದು ಮಹಾರಾಷ್ಟ್ರ ವಿಧಾನ ಸಭೆಯ ಕಾರ್ಯದರ್ಶಿಗೆ ಖುದ್ದಾಗಿ ಹಾಜರಿರಲು ನಿರ್ದೇಶನ ನೀಡಿದೆ. ಅಕ್ಟೋಬರ್​ 13ರಂದು ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿ ಗೋಸ್ವಾಮಿಗೆ ಬರೆದು, ತಾವು ಈ ಹಿಂದೆ ಕೊಟ್ಟ ಶಾಸಕಾಂಗ ನಿಂದನಾ ನೋಟಿಸ್​ಮ ಸರ್ವೋಚ್ಛ ನ್ಯಾಯಾಲಯಕ್ಕೆ ಒಪ್ಪಿಸಿದ ಅವರ ಕ್ರಮವನ್ನು ಪ್ರಶ್ನಿಸಿದ್ದರು. ಅಷ್ಟೇ ಅಲ್ಲ, ಇದು ತೀವ್ರ ಖಂಡನೀಯ ಎಂದು ಹೇಳಿ ಮತ್ತೊಂದು ನೋಟಿಸ್​ನ ಸಹ ನೀಡಿದ್ದರು.

ವಿಧಾನಸಭಾ ಕಾರ್ಯದರ್ಶಿಯ ಈ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆಯವರ ಪೀಠ ವಿಧಾನಸಭಾ ಕಾರ್ಯದರ್ಶಿಯ ಈ ಕೃತ್ಯವನ್ನು ಖಂಡಿಸಿದ್ದಾರೆ. ಓರ್ವ ನಾಗರಿಕ, ತನಗೆ ಅನ್ಯಾಯವಾದಾಗ ನ್ಯಾಯಾಲಯದ ಮೆಟ್ಟಿಲೇರುವ ಮೂಲಭೂತ ಹಕ್ಕನ್ನು ಪ್ರಶ್ನಿಸಿದಂತಾಗುತ್ತದೆ. ಇದು ಸಂವಿಧಾನದ 32ನೇ ಕಲಂನ ಅನ್ವಯ ಅಪರಾಧವಾಗಿರುತ್ತದೆ. ವಿಧಾನಸಭಾ ಕಾರ್ಯದರ್ಶಿಯವರ ಈ ಕ್ರಮ ನ್ಯಾಯಾಂಗ ನಿಂದನೆಯಾಗುತ್ತದೆ. ನಾಗರೀಕರು ತಮ್ಮ ಹಕ್ಕಿನಿಂದ ವಂಚಿತರಾಗುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಆದ್ದರಿಂದ, ಇದು ಗಂಭೀರ ವಿಚಾರ ಎಂದು ಹೇಳಿದ ನ್ಯಾಯಾಲಯ ವಿಧಾನಸಭಾ ಕಾರ್ಯದರ್ಶಿಯ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ವಿಧಾನ ಸಭಾ ಕಾರ್ಯದರ್ಶಿಗೆ ಮುಂದಿನ ವಿಚಾರಣೆಯ ವೇಳೆ ಖುದ್ದಾಗಿ ಹಾಜರಿರುವಂತೆ ಮತ್ತು ನ್ಯಾಯಾಲಯಕ್ಕೆ ಸ್ಪಷ್ಟೀಕರಣ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಆದೇಶಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ