AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಹಾದಿ ಸಭೆಗಳಿಗೆ ಹಾಜರಾಗುವುದು ಭಯೋತ್ಪಾದಕ ಕೃತ್ಯವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಮೇಲ್ಮನವಿ; ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಸರ್ಕಾರವು ನಿಷೇಧಿಸದ ಸಂಘಟನೆಯ ಸದಸ್ಯರಿಗೆ ಜಿಹಾದಿ ಸಭೆಗಳಿಗೆ ಹಾಜರಾಗುವುದು, ತರಬೇತಿ ಸಾಮಗ್ರಿಗಳನ್ನು ಖರೀದಿಸುವುದು ಮತ್ತು ಸಂಸ್ಥೆಯ ಸದಸ್ಯರಿಗೆ ತರಬೇತಿ ಆಶ್ರಯವನ್ನು ಆಯೋಜಿಸುವುದು ಯುಎಪಿಎ ಸೆಕ್ಷನ್ 2(ಕೆ) ಅಡಿಯಲ್ಲಿ 'ಭಯೋತ್ಪಾದಕ ಕೃತ್ಯ' ಎಂದು ಈ ವರ್ಷದ ಏಪ್ರಿಲ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

ಜಿಹಾದಿ ಸಭೆಗಳಿಗೆ ಹಾಜರಾಗುವುದು ಭಯೋತ್ಪಾದಕ ಕೃತ್ಯವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಮೇಲ್ಮನವಿ; ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 27, 2022 | 5:20 PM

Share

ಸರ್ಕಾರವು ಕಾನೂನುಬಾಹಿರವಲ್ಲದ ಸಂಘಟನೆಗಳ “ಜಿಹಾದಿ ಸಭೆಗಳಿಗೆ” ಹಾಜರಾಗುವುದು “ಭಯೋತ್ಪಾದಕ ಕೃತ್ಯ” (terrorist act) ಎಂದು ಕರ್ನಾಟಕ ಹೈಕೋರ್ಟ್ (Karnataka High Court)ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿ ಸುಪ್ರೀಂಕೋರ್ಟ್ (Supreme Court) ಶುಕ್ರವಾರ ನೋಟಿಸ್ ಜಾರಿ ಮಾಡಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ನೀಡಿದೆ.ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ವಾದ ಮಂಡಿಸಿದರು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ((UAPA) ಅಡಿಯಲ್ಲಿ ಸರ್ಕಾರವು ನಿಷೇಧಿಸದ ಸಂಘಟನೆಯ ಸದಸ್ಯರಿಗೆ ಜಿಹಾದಿ ಸಭೆಗಳಿಗೆ ಹಾಜರಾಗುವುದು, ತರಬೇತಿ ಸಾಮಗ್ರಿಗಳನ್ನು ಖರೀದಿಸುವುದು ಮತ್ತು ಸಂಸ್ಥೆಯ ಸದಸ್ಯರಿಗೆ ತರಬೇತಿ ಆಶ್ರಯವನ್ನು ಆಯೋಜಿಸುವುದು ಯುಎಪಿಎ ಸೆಕ್ಷನ್ 2(ಕೆ) ಅಡಿಯಲ್ಲಿ ‘ಭಯೋತ್ಪಾದಕ ಕೃತ್ಯ’ ಎಂದು ಈ ವರ್ಷದ ಏಪ್ರಿಲ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಯುಎಪಿಎ ಅಡಿಯಲ್ಲಿ ಭಯೋತ್ಪಾದನಾ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬನಿಗೆ, ಆತ ಜೊತೆಗಿದ್ದ ಗುಂಪು ನಿಷೇಧಿತ ಸಂಘಟನೆಯಲ್ಲ ಎಂಬ ಕಾರಣಕ್ಕೆ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಎಸ್ ರಾಚಯ್ಯ ಅವರ ವಿಭಾಗೀಯ ಪೀಠದಿಂದ ಜಾಮೀನು ನೀಡಲಾಗಿತ್ತು.ಪ್ರಸ್ತುತ ಪ್ರಕರಣದಲ್ಲಿ, ಆರೋಪಿ ಸಂಖ್ಯೆ 11 ಯುಎ (ಪಿ) ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ನಿಷೇಧಿಸಲಾದ ಅಥವಾ ನಿರ್ಬಂಧಿಸಲಾದ ಯಾವುದೇ ಸಂಸ್ಥೆಯೊಂದಿಗೆ ಸಂಬಂಧ ಹೊಂದಿರುವುದಾಗಿ ಪ್ರಾಸಿಕ್ಯೂಷನ್ ಸಾಬೀತುಪಡಿಸಿಲ್ಲ. ಅವರೇ ಹೇಳಿದಂತೆ ಅವರು ಅಲ್-ಹಿಂದ್ ಗುಂಪಿನ ಸದಸ್ಯರಾಗಿದ್ದಾರೆ. ಇದು ಯುಎ(ಪಿ) ಆಕ್ಟ್, 1967 ರ ಅಡಿಯಲ್ಲಿ ನಿಷೇಧಿತ ಸಂಘಟನೆಯಾಗಿಲ್ಲ. ಆರೋಪಪಟ್ಟಿಯಲ್ಲಿ ಹೇಳಿರುವ ಅಪರಾಧಗಳು ಅಥವಾ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಅವರು ಅಪರಾಧಿ ಎಂದು ಹೇಳುವುದಿಲ್ಲ. ಆರೋಪಿಗಳ ವಿರುದ್ಧದ ಆರೋಪವನ್ನು ಪ್ರಾಥಮಿಕವಾಗಿ ನಿಜವೆಂದು ನಂಬಲು ಯಾವುದೇ ಸಮಂಜಸವಾದ ಆಧಾರಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಪೊಲೀಸರಿಗೆ ದೊರೆತ ಮಾಹಿತಿಯ ಮೇರೆಗೆ 17 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವರ್ಗಾಯಿಸಲಾಯಿತು.ಅದರ ತನಿಖೆಯ ಸಮಯದಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿದಾರರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಕೊಂಡಿದೆ. ನಂತರ ಅವರ ವಿರುದ್ಧ ಸೆಕ್ಷನ್ 18 (ಪಿತೂರಿಗಾಗಿ ಶಿಕ್ಷೆ) 18 ಎ (ಭಯೋತ್ಪಾದಕ ಶಿಬಿರಗಳನ್ನು ಆಯೋಜಿಸುವುದು) 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯರಾಗಿದ್ದಕ್ಕಾಗಿ ಶಿಕ್ಷೆ) ಮತ್ತು 39 (ಭಯೋತ್ಪಾದಕ ಸಂಘಟನೆಗೆ ನೀಡಿದ ಬೆಂಬಲಕ್ಕೆ ಸಂಬಂಧಿಸಿದ ಅಪರಾಧ) ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA), ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 120B (ಅಪರಾಧದ ಪಿತೂರಿ) ಅಡಿಯಲ್ಲಿ ಆರೋಪ ಪಟ್ಟಿಸಲ್ಲಿಸಲಾಯಿತು.

ಇಬ್ಬರು ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆಪಾದಿತ ಅಪರಾಧದಲ್ಲಿ ಅವರು ಭಾಗಿಯಾಗಿರುವುದನ್ನು ಸೂಚಿಸುವ ಸಾಕಷ್ಟು ಅಂಶಗಳಿವೆ ಎಂಬ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯವು ಅದನ್ನು ತಿರಸ್ಕರಿಸಿದ್ದು ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಈಗ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.