AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ವಾಹಿನಿಯಲ್ಲಿ ಯಾರಾದರೂ ದ್ವೇಷದ ಮಾತುಗಳನ್ನಾಡಿದರೆ ಅದನ್ನು ಮುಂದುವರಿಯದಂತೆ ಮಾಡುವುದು ನಿರೂಪಕರ ಕರ್ತವ್ಯ: ಸುಪ್ರೀಂಕೋರ್ಟ್

ಮುಖ್ಯವಾಹಿನಿಯ ಮಾಧ್ಯಮಗಳು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಮಾತು ಗಳು ಅನಿಯಂತ್ರಿತವಾಗಿವೆ. ಯಾರಾದರೂ ದ್ವೇಷದ ಮಾತುಗಳನ್ನು ಆಡಿದರೆ ಅದನ್ನು ಮುಂದುವರಿಯದಂತೆ ನೋಡಿಕೊಳ್ಳುವುದು (ಆಂಕರ್‌ಗಳ) ಕರ್ತವ್ಯ

ಟಿವಿ ವಾಹಿನಿಯಲ್ಲಿ ಯಾರಾದರೂ ದ್ವೇಷದ ಮಾತುಗಳನ್ನಾಡಿದರೆ ಅದನ್ನು ಮುಂದುವರಿಯದಂತೆ ಮಾಡುವುದು ನಿರೂಪಕರ ಕರ್ತವ್ಯ: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
TV9 Web
| Edited By: |

Updated on:Sep 21, 2022 | 5:21 PM

Share

ದೆಹಲಿ: ದ್ವೇಷ ಭಾಷಣದ (Hate Speech) ಕುರಿತು ಟಿವಿ ಚಾನೆಲ್‌ಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್(Supreme Court) ನಿರೂಪಕರ ಪಾತ್ರ ತುಂಬಾ ಪ್ರಧಾನವಾದುದು ಎಂದು ಹೇಳಿದೆ. ಅದೇ ವೇಳೆ ಸರ್ಕಾರ ಯಾಕೆ ಮೂಕ ಪ್ರೇಕ್ಷಕರಾಗಿದೆ ಎಂದು ಕೇಳಿದೆ. ಮುಖ್ಯವಾಹಿನಿಯ ಮಾಧ್ಯಮಗಳು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಮಾತುಗಳು ಅನಿಯಂತ್ರಿತವಾಗಿವೆ. ಯಾರಾದರೂ ದ್ವೇಷದ ಮಾತುಗಳನ್ನು ಆಡಿದರೆ ಅದನ್ನು ಮುಂದುವರಿಯದಂತೆ ನೋಡಿಕೊಳ್ಳುವುದು (ಆಂಕರ್‌ಗಳ) ಕರ್ತವ್ಯ. ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ನಮ್ಮದು ಯುಎಸ್‌ನಂತೆ ಮುಕ್ತವಲ್ಲ. ಆದರೆ ನಾವು ಎಲ್ಲಿ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು ಎಂದು ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಹೇಳಿದ್ದಾರೆ.

ದ್ವೇಷ ಭಾಷಣವು ಹಲವು ಪದರಗಳನ್ನು ಹೊಂದಿದೆ. ಇದು ಯಾರನ್ನಾದರೂ ಕೊಲ್ಲುವಂತೆ. ನೀವು ಅದನ್ನು ನಿಧಾನವಾಗಿ ಅಥವಾ ಬೇರೆ ರೀತಿಯಲ್ಲಿ ಮಾಡಬಹುದು. ಅವರು ಕೆಲವು ನಂಬಿಕೆಗಳ ಆಧಾರದ ಮೇಲೆ ನಮ್ಮನ್ನು ಕೊಂಡಿಯಾಗಿರಿಸುತ್ತಾರೆ ಎಂದ ನ್ಯಾಯಾಲಯ ದ್ವೇಷ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿಯನ್ನುಂಟುಮಾಡುತ್ತದೆ ಎಂಬುದನ್ನು ವಿವರಸಿದೆ. ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು, “ಇದು ಕ್ಷುಲ್ಲಕ ವಿಷಯವೇ?” ಎಂದು ನ್ಯಾಯಾಲಯ ಟೀಕಿಸಿದೆ.

ದ್ವೇಷದ ಭಾಷಣ ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ಹೇಳಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ನವೆಂಬರ್ 23 ರಂದು ನಡೆಸಲಿದೆ.

Published On - 4:32 pm, Wed, 21 September 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ