AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC Verdict on NEET-UG: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ, ನೀಟ್​ ಅಕ್ರಮದ ಕುರಿತು ಸುಪ್ರೀಂಕೋರ್ಟ್​ ಅಂತಿಮ ತೀರ್ಪು

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ವೈಫಲ್ಯವಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ ಹಾಗೂ ಹಜಾರಿಬಾಗ್​ಗೆ ಮಾತ್ರ ಸೀಮಿತವಾಗಿತ್ತು ಹೀಗಾಗಿ ನೀಟ್​ ಯುಜಿ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ.

SC Verdict on NEET-UG: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ, ನೀಟ್​ ಅಕ್ರಮದ ಕುರಿತು ಸುಪ್ರೀಂಕೋರ್ಟ್​ ಅಂತಿಮ ತೀರ್ಪು
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on:Aug 02, 2024 | 1:02 PM

Share

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ ಹಾಗೂ ಹಜಾರಿಬಾಗ್​ಗೆ ಮಾತ್ರ ಸೀಮಿತವಾಗಿತ್ತು ಹೀಗಾಗಿ ನೀಟ್​ ಯುಜಿ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಆದರೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರವನ್ನು ಇಲ್ಲಿಗೇ ಬಿಡಲು ಸಾಧ್ಯವಿಲ್ಲ, ಹಾಗಾಗಿ ಉದ್ಭವಿಸಿರುವ ಸಮಸ್ಯೆಗಳನ್ನು ಕೇಂದ್ರ ಈ ವರ್ಷವೇ ಸರಿಪಡಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್​ ಹೇಳಿದೆ.

ನಾವು ರಚನಾತ್ಮಕ ನ್ಯೂನತೆಗಳ ಬಗ್ಗೆ ಗಮನಹರಿಸಿದ್ದೇವೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಗುರುತನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪೇಪರ್ ಸೋರಿಕೆಯನ್ನು ತಡೆಗಟ್ಟಲು ಎಸ್​ಒಪಿ ಸಿದ್ಧಪಡಿಸುವುದು ಸರ್ಕಾರ ಹಾಗೂ ಎನ್​ಟಿಎ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ಓದಿ: ನೀಟ್ ಪರೀಕ್ಷೆ ವಿವಾದ; ಮೆಡಿಕಲ್, ಎಂಜಿನಿಯರಿಂಗ್ ಸೀಟ್​ ಗೊಂದಲ, ಈ ವಾರದಲ್ಲಿ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಸುಪ್ರೀಂಕೋರ್ಟ್​ನ ತೀರ್ಪಿನಿಂದ ಯಾರೊಬ್ಬರ ದೂರು ಪರಿಹಾರವಾಗಿಲ್ಲವೆನಿಸಿದರೆ ಅವರು ಹೈಕೋರ್ಟ್​ಗೆ ಹೋಗಬಹುದು. ಪೇಪರ್ ಸೋರಿಕೆ ವ್ಯವಸ್ಥಿತವಾಗಿಲ್ಲ ಎಂಬುದು ನಮ್ಮ ತೀರ್ಮಾನ. ಪೇಪರ್ ಸೋರಿಕೆ ದೊಡ್ಡ ಪ್ರಮಾಣದಲ್ಲಿ ನಡೆದಿಲ್ಲ ಎಂದು ಕೋರ್ಟ್​ ಹೇಳಿದೆ. ನೀಟ್ ಮರುಪರೀಕ್ಷೆಯ ಬೇಡಿಕೆಯನ್ನು ನಾವು ತಿರಸ್ಕರಿಸುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಧಾನ ಬದಲಿಸುವಂತೆ ನ್ಯಾಯಾಲಯವು ಎನ್​ಟಿಎಗೆ ಕೇಳಿದೆ. ಪ್ರಶ್ನೆ ಪತ್ರಿಕೆಯನ್ನು ಹೊಂದಿಸುವ ಸಮಯದಿಂದ ಪರೀಕ್ಷೆ ಮುಗಿಯುವವರೆಗೆ ಸಂಸ್ಥೆಯು ಕಠಿಣ ತನಿಖೆ ನಡೆಸಬೇಕು. ತೆರೆದ ಈ ರಿಕ್ಷಾ ಬದಲಿಗೆ ಲಾಕ್​ ಮಾಡಿರುವ ವಾಹನದಲ್ಲೇ ಪ್ರಶ್ನೆಪತ್ರಿಕೆ ಕೊಂಡೊಯ್ಯಬೇಕು. ಎಲೆಕ್ಟ್ರಾನಿಕ್ ಫಿಂಗರ್​ಪ್ರಿಂಟ್​ಗಳ ರೆಕಾರ್ಡಿಂಗ್ ಮತ್ತು ಸೈಬರ್ ಭದ್ರತೆಗೆ ವ್ಯವಸ್ಥೆ ಮಾಡಿ ಇದರಿಂದ ಡೇಟಾವನ್ನು ಸುರಕ್ಷಿತವಾಗಿರಿಸಿಕೊಳ್ಳಬಹುದು.

ನೀಟ್ ಪೇಪಟ್ ಸೋರಿಕೆ ಪ್ರಕರಣವನ್ನು ಸಿಬಿಐ ಮತ್ತು ಇಒಯು ನಡೆಸಿತ್ತು. ಈ ತನಿಖೆಯ ಸಮಯದಲ್ಲಿ ಅನೇಕ ಆರೋಪಿಗಳನ್ನು ಬಂಧಿಸಲಾಗಿತ್ತು. ಜಾರ್ಖಂಡ್​ನ ಹಜಾರಿಬಾಗ್ ಮತ್ತು ಪಾಟ್ನಾದಿಂದ ಪತ್ರಿಕೆ ಸೋರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿತು. ಸಿಬಿಐ ಮೊದಲು ದಾಖಲಿಸಿದ್ದ ಎಫ್​ಐಆರ್​ನಲ್ಲಿ ಎಂಟು ಆರೋಪಿಗಳ ಹೆಸರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:49 pm, Fri, 2 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ