AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC Verdict on NEET-UG: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ, ನೀಟ್​ ಅಕ್ರಮದ ಕುರಿತು ಸುಪ್ರೀಂಕೋರ್ಟ್​ ಅಂತಿಮ ತೀರ್ಪು

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ವೈಫಲ್ಯವಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ ಹಾಗೂ ಹಜಾರಿಬಾಗ್​ಗೆ ಮಾತ್ರ ಸೀಮಿತವಾಗಿತ್ತು ಹೀಗಾಗಿ ನೀಟ್​ ಯುಜಿ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ.

SC Verdict on NEET-UG: ಇದು ವ್ಯವಸ್ಥಿತ ಉಲ್ಲಂಘನೆಯಲ್ಲ, ನೀಟ್​ ಅಕ್ರಮದ ಕುರಿತು ಸುಪ್ರೀಂಕೋರ್ಟ್​ ಅಂತಿಮ ತೀರ್ಪು
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on:Aug 02, 2024 | 1:02 PM

Share

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಅಂತಿಮ ತೀರ್ಪು ನೀಡಿದೆ. ಎಲ್ಲಾ ಕಕ್ಷಿದಾರರ ವಾದ ಆಲಿಸಿದ ಬಳಿಕ ಇದು ವ್ಯವಸ್ಥಿತ ಉಲ್ಲಂಘನೆಯಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪಾಟ್ನಾ ಹಾಗೂ ಹಜಾರಿಬಾಗ್​ಗೆ ಮಾತ್ರ ಸೀಮಿತವಾಗಿತ್ತು ಹೀಗಾಗಿ ನೀಟ್​ ಯುಜಿ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ವ್ಯವಸ್ಥಿತ ಉಲ್ಲಂಘನೆಯಾಗಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಆದರೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರವನ್ನು ಇಲ್ಲಿಗೇ ಬಿಡಲು ಸಾಧ್ಯವಿಲ್ಲ, ಹಾಗಾಗಿ ಉದ್ಭವಿಸಿರುವ ಸಮಸ್ಯೆಗಳನ್ನು ಕೇಂದ್ರ ಈ ವರ್ಷವೇ ಸರಿಪಡಿಸಿ ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್​ ಹೇಳಿದೆ.

ನಾವು ರಚನಾತ್ಮಕ ನ್ಯೂನತೆಗಳ ಬಗ್ಗೆ ಗಮನಹರಿಸಿದ್ದೇವೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಗುರುತನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪೇಪರ್ ಸೋರಿಕೆಯನ್ನು ತಡೆಗಟ್ಟಲು ಎಸ್​ಒಪಿ ಸಿದ್ಧಪಡಿಸುವುದು ಸರ್ಕಾರ ಹಾಗೂ ಎನ್​ಟಿಎ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಮತ್ತಷ್ಟು ಓದಿ: ನೀಟ್ ಪರೀಕ್ಷೆ ವಿವಾದ; ಮೆಡಿಕಲ್, ಎಂಜಿನಿಯರಿಂಗ್ ಸೀಟ್​ ಗೊಂದಲ, ಈ ವಾರದಲ್ಲಿ ಕೌನ್ಸೆಲಿಂಗ್ ದಿನಾಂಕ ಪ್ರಕಟ

ಸುಪ್ರೀಂಕೋರ್ಟ್​ನ ತೀರ್ಪಿನಿಂದ ಯಾರೊಬ್ಬರ ದೂರು ಪರಿಹಾರವಾಗಿಲ್ಲವೆನಿಸಿದರೆ ಅವರು ಹೈಕೋರ್ಟ್​ಗೆ ಹೋಗಬಹುದು. ಪೇಪರ್ ಸೋರಿಕೆ ವ್ಯವಸ್ಥಿತವಾಗಿಲ್ಲ ಎಂಬುದು ನಮ್ಮ ತೀರ್ಮಾನ. ಪೇಪರ್ ಸೋರಿಕೆ ದೊಡ್ಡ ಪ್ರಮಾಣದಲ್ಲಿ ನಡೆದಿಲ್ಲ ಎಂದು ಕೋರ್ಟ್​ ಹೇಳಿದೆ. ನೀಟ್ ಮರುಪರೀಕ್ಷೆಯ ಬೇಡಿಕೆಯನ್ನು ನಾವು ತಿರಸ್ಕರಿಸುತ್ತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಧಾನ ಬದಲಿಸುವಂತೆ ನ್ಯಾಯಾಲಯವು ಎನ್​ಟಿಎಗೆ ಕೇಳಿದೆ. ಪ್ರಶ್ನೆ ಪತ್ರಿಕೆಯನ್ನು ಹೊಂದಿಸುವ ಸಮಯದಿಂದ ಪರೀಕ್ಷೆ ಮುಗಿಯುವವರೆಗೆ ಸಂಸ್ಥೆಯು ಕಠಿಣ ತನಿಖೆ ನಡೆಸಬೇಕು. ತೆರೆದ ಈ ರಿಕ್ಷಾ ಬದಲಿಗೆ ಲಾಕ್​ ಮಾಡಿರುವ ವಾಹನದಲ್ಲೇ ಪ್ರಶ್ನೆಪತ್ರಿಕೆ ಕೊಂಡೊಯ್ಯಬೇಕು. ಎಲೆಕ್ಟ್ರಾನಿಕ್ ಫಿಂಗರ್​ಪ್ರಿಂಟ್​ಗಳ ರೆಕಾರ್ಡಿಂಗ್ ಮತ್ತು ಸೈಬರ್ ಭದ್ರತೆಗೆ ವ್ಯವಸ್ಥೆ ಮಾಡಿ ಇದರಿಂದ ಡೇಟಾವನ್ನು ಸುರಕ್ಷಿತವಾಗಿರಿಸಿಕೊಳ್ಳಬಹುದು.

ನೀಟ್ ಪೇಪಟ್ ಸೋರಿಕೆ ಪ್ರಕರಣವನ್ನು ಸಿಬಿಐ ಮತ್ತು ಇಒಯು ನಡೆಸಿತ್ತು. ಈ ತನಿಖೆಯ ಸಮಯದಲ್ಲಿ ಅನೇಕ ಆರೋಪಿಗಳನ್ನು ಬಂಧಿಸಲಾಗಿತ್ತು. ಜಾರ್ಖಂಡ್​ನ ಹಜಾರಿಬಾಗ್ ಮತ್ತು ಪಾಟ್ನಾದಿಂದ ಪತ್ರಿಕೆ ಸೋರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸಿತು. ಸಿಬಿಐ ಮೊದಲು ದಾಖಲಿಸಿದ್ದ ಎಫ್​ಐಆರ್​ನಲ್ಲಿ ಎಂಟು ಆರೋಪಿಗಳ ಹೆಸರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:49 pm, Fri, 2 August 24

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!