AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳ ಪ್ರಾರ್ಥನೆ ತಡೆಗೆ ಸುಪ್ರೀಂಕೋರ್ಟ್ ನಿರಾಕರಣೆ

“ಜ.17 ಮತ್ತು ಜನವರಿ 31ರ ಆದೇಶದ ನಂತರ ಮುಸ್ಲಿಂ ಸಮುದಾಯದಿಂದ ನಮಾಜ್ ಅಡೆತಡೆಯಿಲ್ಲದೆ ಮತ್ತು ಹಿಂದೂ ಅರ್ಚಕರ ಪೂಜೆಯನ್ನು ತೆಹ್ಖಾನಾ ಪ್ರದೇಶಕ್ಕೆ ಸೀಮಿತಗೊಳಿಸಲಾಗಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ಪೀಠ ಹೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳ ಪ್ರಾರ್ಥನೆ ತಡೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜ್ಞಾನವಾಪಿ ಮಸೀದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 01, 2024 | 4:04 PM

Share

ದೆಹಲಿ ಏಪ್ರಿಲ್ 01: ವಾರಣಾಸಿಯ (Varanasi) ಜ್ಞಾನವಾಪಿ ಮಸೀದಿಯ (Gyanvapi mosque) ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆ ನಿಲ್ಲಿಸಲು ಸುಪ್ರೀಂಕೋರ್ಟ್ (Supreme Court)  ಸೋಮವಾರ ನಿರಾಕರಿಸಿದೆ. ಆದರೆ, ಮಸೀದಿ ಆವರಣದೊಳಗೆ ಹಿಂದೂಗಳ ಧಾರ್ಮಿಕ ಆಚರಣೆಗಳ ಮೇಲೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.  “ಜ.17 ಮತ್ತು ಜನವರಿ 31ರ ಆದೇಶದ ನಂತರ ಮುಸ್ಲಿಂ ಸಮುದಾಯದಿಂದ ನಮಾಜ್ ಅಡೆತಡೆಯಿಲ್ಲದೆ ಮತ್ತು ಹಿಂದೂ ಅರ್ಚಕರ ಪೂಜೆಯನ್ನು ತೆಹ್ಖಾನಾ ಪ್ರದೇಶಕ್ಕೆ ಸೀಮಿತಗೊಳಿಸಲಾಗಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತ ಎಂದು ಪೀಠ ಹೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ.

ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪೂಜೆಗೆ ಅನುಮತಿಯನ್ನು ವಿರೋಧಿಸಿ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯನ್ನು ಸುಪ್ರೀಂಕೋರ್ಟ್ ಜುಲೈನಲ್ಲಿ ಅಂತಿಮ ನಿರ್ಧಾರಕ್ಕೆ ನಿಗದಿಪಡಿಸಿದೆ.

ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ಅವಕಾಶ ನೀಡುವ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಹೊಸ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಮಸೀದಿ ಸಮಿತಿಯ ಮನವಿಗೆ ಏಪ್ರಿಲ್ 30 ರೊಳಗೆ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರ ಪ್ರತಿಕ್ರಿಯೆಯನ್ನು ಕೇಳಿದೆ. ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಾರಣಾಸಿಯ ಜ್ಞಾನವಾಪಿ ಮಸೀದಿಯ ವ್ಯವಹಾರಗಳನ್ನು ನಿರ್ವಹಿಸುವ ಮಸೀದಿ ಸಮಿತಿಯ ಮನವಿಯನ್ನು ಆಲಿಸಿತು.

ಫೆಬ್ರುವರಿ 26 ರಂದು ಹೈಕೋರ್ಟ್, ಹಿಂದೂಗಳಿಗೆ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಜಿಲ್ಲಾ ನ್ಯಾಯಾಲಯದ ಜನವರಿ 31 ರ ಆದೇಶವನ್ನು ಪ್ರಶ್ನಿಸಿ ಸಮಿತಿಯ ಮನವಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಏ.15ರವರೆಗೆ ನ್ಯಾಯಾಂಗ ಬಂಧನ

ಮಸೀದಿ ಸಮಿತಿಯ ಮನವಿಯನ್ನು ವಜಾಗೊಳಿಸುವಾಗ, ಜ್ಞಾನವಾಪಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವ್ಯಾಸ್ ತೆಹ್ಖಾನಾದಲ್ಲಿ ಪೂಜಾ ವಿಧಿವಿಧಾನಗಳನ್ನು ನಿಲ್ಲಿಸುವ ಉತ್ತರ ಪ್ರದೇಶ ಸರ್ಕಾರದ 1993 ರ ನಿರ್ಧಾರವು “ಕಾನೂನುಬಾಹಿರ” ಎಂದು ಹೈಕೋರ್ಟ್ ಗಮನಿಸಿತ್ತು.

ಜ್ಞಾನವಾಪಿ ಮಸೀದಿಯ ನಿರ್ಮಾಣಕ್ಕೆ ಮೊದಲು ಹಿಂದೂ ದೇವಾಲಯವಿತ್ತು ಎಂದು ತಿಳಿಸಿರುವ ಭಾರತೀಯ ಪುರಾತತ್ವ ಇಲಾಖೆ ವರದಿಯ ಪ್ರತಿಗಳನ್ನು ದಾವೆದಾರರಿಗೆ ನೀಡಿದ ಆರು ದಿನಗಳ ನಂತರ, ವಾರಣಾಸಿ ಜಿಲ್ಲಾ ನ್ಯಾಯಾಲಯವು ಮಸೀದಿ ಸಂಕೀರ್ಣದ ದಕ್ಷಿಣ ನೆಲಮಾಳಿಗೆಯಲ್ಲಿ ಜನವರಿ 31 ರಂದು ಪೂಜಾರಿಯೊಬ್ಬರಿಗೆ ಪೂಜೆ ಮಾಡಲು ಅವಕಾಶ ನೀಡುವಂತೆ ನಿರ್ದೇಶಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 1 April 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ