AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು […]

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 25, 2020 | 4:53 PM

Share

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು ಕೊಲ್ಕತಾ ಹೈಕೋರ್ಟ್​ನಲ್ಲಿದ್ದಾಗ ಮಮತಾ ಬ್ಯಾನರ್ಜಿ ಕೋರ್ಟಿನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನ್ಯಾಯಮೂರ್ತಿ ಬಗ್ಚಿ ತೀರ್ಪನ್ನು ಬರೆದರಾದರೂ ನ್ಯಾಯಮೂರ್ತಿ ಮಿಶ್ರಾ, ‘ಮಮತಾ ಒಬ್ಬ ರಾಜಕಾರಣಿಯಾಗಿರುವುದರಿಂದ ಕೋರ್ಟ್ ಅವರಿಗೆ ಶಿಕ್ಷೆಗೊಳಪಡಿಸುವುದಿಲ್ಲ’ ಎಂದಿದ್ದರು. ಮಮತಾರವರು ಸಾರ್ವಜನಿಕ ವ್ಯಕ್ತಿಯಾಗಿರುವ ಹಿನ್ನಲೆಯಲ್ಲಿ ಅವರನ್ನು ಕ್ಷಮಿಸುವುದಾದರೆ, ಪ್ರಶಾಂತ್ ಭೂಷಣ್ ಅವರನ್ನು ಹುತಾತ್ಮರನ್ನಾಗಿಸಬೇಡಿ,’’ ಎಂದರು.

ಶಿಕ್ಷೆಯ ತೀರ್ಪು ಘೋಷಣೆಗೆ ಮೊದಲು, ಕೋರ್ಟ್ ಪ್ರಶಾಂತ್ ಭೂಷಣ್ ಅವರಿಗೆ 30 ನಿಮಿಷಗಳ ಕಾಲಾವಕಾಶ ನೀಡಿ, ನ್ಯಾಯಾಂಗದ ವಿರುದ್ಧ ಮಾಡಿರುವ ಆಪಾದನೆಗಳನ್ನು ಮತ್ತು ಭಾರತದ ಮುಖ್ಯ ನ್ಯಾಯಾಧೀಶ ಎಸ್ ಎ ಬೊಬ್ಡೆ ಅವರ ವಿರುದ್ಧ ಬರೆದಿರುವ ಟ್ವೀಟ್​ಗಳ ಬಗ್ಗೆ ಕ್ಷಮೆಯಾಚಿಸದಿರುವ ತಮ್ಮ ನಿಲುವನ್ನು ಪುನರ್​ಪರಿಶೀಲಿಸುವಂತೆ ಹೇಳಿತು.

ಎಜಿ ವೇಣುಗೋಪಾಲ ಅವರು ಸಹ ಪ್ರಶಾಂತ್ ಭೂಷಣ್ ಅವರನ್ನು ಕ್ಷಮಿಸುವಂತೆ ಪೀಠಕ್ಕೆ ಮನವಿ ಮಾಡಿದಾಗಲೂ ಭೂಷಣ್ ಆವರಿಗೆ ಮತ್ತೊಂದು ಅವಕಾಶವನ್ನು ಪೀಠ ನೀಡಿತು. ಆದರೆ, ಪ್ರಶಾಂತ್ ಭೂಷಣ್‌ ತಮ್ಮ ನಿಲುವನ್ನು ಬದಲಿಸಲು ನಿರಾಕರಿಸಿದರು.

ಅಂತಿಮವಾಗಿ ಪೀಠವು ಶಿಕ್ಷೆ ಪ್ರಮಾಣ ಪ್ರಕಟಿಸುವ ತೀರ್ಪನ್ನು ಕಾಯ್ದಿರಿಸಿತು.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು