ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು […]

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Updated on: Aug 25, 2020 | 4:53 PM

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು ಕೊಲ್ಕತಾ ಹೈಕೋರ್ಟ್​ನಲ್ಲಿದ್ದಾಗ ಮಮತಾ ಬ್ಯಾನರ್ಜಿ ಕೋರ್ಟಿನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನ್ಯಾಯಮೂರ್ತಿ ಬಗ್ಚಿ ತೀರ್ಪನ್ನು ಬರೆದರಾದರೂ ನ್ಯಾಯಮೂರ್ತಿ ಮಿಶ್ರಾ, ‘ಮಮತಾ ಒಬ್ಬ ರಾಜಕಾರಣಿಯಾಗಿರುವುದರಿಂದ ಕೋರ್ಟ್ ಅವರಿಗೆ ಶಿಕ್ಷೆಗೊಳಪಡಿಸುವುದಿಲ್ಲ’ ಎಂದಿದ್ದರು. ಮಮತಾರವರು ಸಾರ್ವಜನಿಕ ವ್ಯಕ್ತಿಯಾಗಿರುವ ಹಿನ್ನಲೆಯಲ್ಲಿ ಅವರನ್ನು ಕ್ಷಮಿಸುವುದಾದರೆ, ಪ್ರಶಾಂತ್ ಭೂಷಣ್ ಅವರನ್ನು ಹುತಾತ್ಮರನ್ನಾಗಿಸಬೇಡಿ,’’ ಎಂದರು.

ಶಿಕ್ಷೆಯ ತೀರ್ಪು ಘೋಷಣೆಗೆ ಮೊದಲು, ಕೋರ್ಟ್ ಪ್ರಶಾಂತ್ ಭೂಷಣ್ ಅವರಿಗೆ 30 ನಿಮಿಷಗಳ ಕಾಲಾವಕಾಶ ನೀಡಿ, ನ್ಯಾಯಾಂಗದ ವಿರುದ್ಧ ಮಾಡಿರುವ ಆಪಾದನೆಗಳನ್ನು ಮತ್ತು ಭಾರತದ ಮುಖ್ಯ ನ್ಯಾಯಾಧೀಶ ಎಸ್ ಎ ಬೊಬ್ಡೆ ಅವರ ವಿರುದ್ಧ ಬರೆದಿರುವ ಟ್ವೀಟ್​ಗಳ ಬಗ್ಗೆ ಕ್ಷಮೆಯಾಚಿಸದಿರುವ ತಮ್ಮ ನಿಲುವನ್ನು ಪುನರ್​ಪರಿಶೀಲಿಸುವಂತೆ ಹೇಳಿತು.

ಎಜಿ ವೇಣುಗೋಪಾಲ ಅವರು ಸಹ ಪ್ರಶಾಂತ್ ಭೂಷಣ್ ಅವರನ್ನು ಕ್ಷಮಿಸುವಂತೆ ಪೀಠಕ್ಕೆ ಮನವಿ ಮಾಡಿದಾಗಲೂ ಭೂಷಣ್ ಆವರಿಗೆ ಮತ್ತೊಂದು ಅವಕಾಶವನ್ನು ಪೀಠ ನೀಡಿತು. ಆದರೆ, ಪ್ರಶಾಂತ್ ಭೂಷಣ್‌ ತಮ್ಮ ನಿಲುವನ್ನು ಬದಲಿಸಲು ನಿರಾಕರಿಸಿದರು.

ಅಂತಿಮವಾಗಿ ಪೀಠವು ಶಿಕ್ಷೆ ಪ್ರಮಾಣ ಪ್ರಕಟಿಸುವ ತೀರ್ಪನ್ನು ಕಾಯ್ದಿರಿಸಿತು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
Follow Us