AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು?

ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾ ಪಡೆಯಲು ಬೌದ್ಧ ಧರ್ಮಕ್ಕೆ ಮತಾಂತರಗೊಂಡ ವಿದ್ಯಾರ್ಥಿಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೊನೆಯ ಕ್ಷಣದಲ್ಲಿ ಮತಾಂತರಗೊಳ್ಳುವುದು ವಂಚನೆಯ ಮಾರ್ಗ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಶ್ರೀಮಂತ ಮೇಲ್ಜಾತಿಯವರು ಅಂತಹ ವಿಧಾನಗಳನ್ನು ಬಳಸಬಾರದು, ಬದಲಿಗೆ ತಮ್ಮ ಅರ್ಹತೆಯ ಬಗ್ಗೆ ಹೆಮ್ಮೆ ಪಡಬೇಕು ಎಂದು ಸಿಜೆಐ ಸೂರ್ಯ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು?
ಸುಪ್ರೀಂಕೋರ್ಟ್​Image Credit source: Citizens for Justice and Peace
ನಯನಾ ರಾಜೀವ್
|

Updated on: Jan 29, 2026 | 9:39 AM

Share

ನವದೆಹಲಿ, ಜನವರಿ 29: ಬೌದ್ಧ ಧರ್ಮ(Buddhism)ಕ್ಕೆ ಮತಾಂತರ(Conversion)ಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಮೇಲ್ಜಾತಿಯ ವಿದ್ಯಾರ್ಥಿಗಳನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಕೋಟಾದಡಿ ಪ್ರವೇಶ ಬೇಕೆಂದು ಕೊನೇ ಹಂತದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅಂಥಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕೆ ಎಂದು ಪ್ರಶ್ನಿಸಿದೆ. ಈ ಕ್ರಮವು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಘೋಷಿಸಲಾದ ಉತ್ತರ ಪ್ರದೇಶದ ಸುಭಾರ್ತಿ ವೈದ್ಯಕೀಯ ಕಾಲೇಜಿನಲ್ಲಿ ಬೌದ್ಧ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶ ಪಡೆಯಲು ನಿರ್ದೇಶನಗಳನ್ನು ಕೋರಿ ಹರಿಯಾಣದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರು ತಾವು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇವೆಂದು ಹೇಳಿಕೊಂಡು, ಬೌದ್ಧ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಉಪವಿಭಾಗಾಧಿಕಾರಿ ನೀಡಿದ ಪ್ರಮಾಣಪತ್ರಗಳನ್ನು ಹಾಜರುಪಡಿಸಿದರು.

ಮತ್ತಷ್ಟು ಓದಿ: ಗದಗದಲ್ಲಿ ಇಸ್ಲಾಂ ಧರ್ಮಕ್ಕೆ ಹಿಂದೂ ಯುವಕನ ಮತಾಂತರ ಆರೋಪ: ಅಷ್ಟಕ್ಕೂ ಆಗಿದ್ದೇನು?

ಅರ್ಜಿದಾರರು ಪುನಿಯಾ ಜಾತಿಗೆ ಸೇರಿದವರು ಎಂದು ಗಮನಿಸಿದ ಸಿಜೆಐ ಸೂರ್ಯ ಕಾಂತ್, ಪುನಿಯಾಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಇರಬಹುದು, ಪುನಿಯಾಗಳು ಜಾಟ್ ಕೂಡ ಆಗಿರಬಹುದು, ಅದು ಸಾಮಾನ್ಯ ವರ್ಗ. ನೀವು ಯಾವ ಪುನಿಯಾ? ಎಂದು ಕೇಳಿದರು. ಅವರು ಜಾಟ್ ಎಂದು ವಕೀಲರು ಉತ್ತರಿಸಿದರು ಹಾಗಾದರೆ ನೀವು (ಅಲ್ಪಸಂಖ್ಯಾತರು) ಹೇಗೆ ಆಗುತ್ತೀರಿ ಎಂದು ಸಿಜೆಐ ಕೇಳಿದರು.

ಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ, ಯಾರಾದರೂ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಬಹುದು ಎಂದು ವಕೀಲರು ಉತ್ತರಿಸಿದರು. ಇದು ವಂಚನೆಯ ಮತ್ತೊಂದು ಮಾರ್ಗ, ನೀವು ಕೆಲವು ನಿಜವಾದ ಪ್ರಾಮಾಣಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದೀರ, ನೀವು ಶ್ರೀಮಂತ, ಉತ್ತಮ ಸ್ಥಾನಮಾನ ಹೊಂದಿರುವ, ಮೇಲ್ಜಾತಿಯ ಸಮುದಾಯಗಳಲ್ಲಿ ಒಬ್ಬರು, ಕೃಷಿ ಭೂಮಿಯನ್ನು ಹೊಂದಿರುವ ಮತ್ತು ಸೌಲಭ್ಯಗಳನ್ನು ಹೊಂದಿರುವ, ನೀವು ನಿಮ್ಮ ಅರ್ಹತೆಯ ಬಗ್ಗೆ ಹೆಮ್ಮೆ ಪಡಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?