AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coal Crisis ದೇಶದಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಇಲ್ಲ ಎಂದ ಕೇಂದ್ರ, ಇದೆ ಎನ್ನುತ್ತಿವೆ ರಾಜ್ಯಗಳು; ಹೇಗಿದೆ ಪರಿಸ್ಥಿತಿ?

ದೇಶದಲ್ಲಿ ಕಲ್ಲಿದ್ದಲು ಕೊರತೆಗೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರವನ್ನು ದೂಷಿಸಿದೆ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ನಂತರ ಈಗ ವಿದ್ಯುತ್ ದರಗಳನ್ನು ಹೆಚ್ಚಿಸಬಹುದು ಎಂಬ ಭಯವನ್ನು ವ್ಯಕ್ತಪಡಿಸಿದೆ.

Coal Crisis ದೇಶದಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಇಲ್ಲ ಎಂದ ಕೇಂದ್ರ, ಇದೆ ಎನ್ನುತ್ತಿವೆ ರಾಜ್ಯಗಳು; ಹೇಗಿದೆ ಪರಿಸ್ಥಿತಿ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 11, 2021 | 11:49 AM

ದೆಹಲಿ: ವಿದ್ಯುತ್ ಉತ್ಪಾದಿಸಲು ದೇಶದಲ್ಲಿ ಸಾಕಷ್ಟು ಕಲ್ಲಿದ್ದಲು ನಿಕ್ಷೇಪಗಳಿವೆ ಎಂದು ಕೇಂದ್ರವು ಭರವಸೆ ನೀಡಿದೆ. ಆದರೆ ಕಲ್ಲಿದ್ದಲು ಕೊರತೆಯಿಂದಾಗಿ ಉಷ್ಣ ವಿದ್ಯುತ್ ಕೇಂದ್ರಗಳನ್ನು ಸ್ಥಗಿತಗೊಳಿಸುವ ಬಗ್ಗೆ ರಾಜ್ಯ ಸರ್ಕಾರಗಳು ಪದೇ ಪದೇ ದನಿಯೆತ್ತುತ್ತಿವೆ. ಲೈವ್ ಹಿಂದೂಸ್ತಾನ್ ವರದಿ ಪ್ರಕಾರ ಪಂಜಾಬ್ ನಲ್ಲಿ ಮೂರು, ಕೇರಳದಲ್ಲಿ ನಾಲ್ಕು ಮತ್ತು ಮಹಾರಾಷ್ಟ್ರದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳನ್ನು ಮುಚ್ಚಲಾಗಿದೆ. ಕರ್ನಾಟಕ ಮತ್ತು ಪಂಜಾಬ್ ಮುಖ್ಯಮಂತ್ರಿಗಳು ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ದೇಶದಲ್ಲಿ ಕಲ್ಲಿದ್ದಲು ಕೊರತೆಗೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರವನ್ನು ದೂಷಿಸಿದೆ ಮತ್ತು ಪೆಟ್ರೋಲ್ ಬೆಲೆ ಏರಿಕೆಯ ನಂತರ ಈಗ ವಿದ್ಯುತ್ ದರಗಳನ್ನು ಹೆಚ್ಚಿಸಬಹುದು ಎಂಬ ಭಯವನ್ನು ವ್ಯಕ್ತಪಡಿಸಿದೆ. ದೇಶದಲ್ಲಿ ಕಲ್ಲಿದ್ದಲು ಬಿಕ್ಕಟ್ಟು: 10 ಅಂಶಗಳು 1. ಭಾರತದಲ್ಲಿ ವಿದ್ಯುತ್ ಬಿಕ್ಕಟ್ಟಿನ ಭೀತಿ ಮಿತಿಮೀರಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಕಲ್ಲಿದ್ದಲು ಸಚಿವಾಲಯವು “ಬೇಡಿಕೆಯನ್ನು ಪೂರೈಸಲು ದೇಶದಲ್ಲಿ ಸಾಕಷ್ಟು ಕಲ್ಲಿದ್ದಲು ಲಭ್ಯವಿದೆ” ಎಂದು ಹೇಳಿದೆ.

2. ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಭಾನುವಾರ ಎಲ್ಲಾ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಪರಿಶೀಲಿಸಿದರು. ಭಾರತದ ಅರ್ಧದಷ್ಟು ವಿದ್ಯುತ್ ಸರಬರಾಜು ಮಾಡುವ 135 ಕಲ್ಲಿದ್ದಲು ಆಧಾರಿತ ಯುಟಿಲಿಟಿಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚಿನವು ಇಂಧನ ದಾಸ್ತಾನು ಕೇವಲ ಮೂರು ದಿನಗಳವರೆಗೆ ಇರುತ್ತದೆ ಎಂದು ಈ ಮೊದಲು ವರದಿಗಳು ಹೇಳಿವೆ.

3. ಕೇಂದ್ರ ಸರ್ಕಾರವು ವಿದ್ಯುತ್ ಸ್ಥಾವರಗಳಲ್ಲಿನ ಕಲ್ಲಿದ್ದಲು ಕೊರತೆಯನ್ನು ತ್ವರಿತವಾಗಿ ಪರಿಹರಿಸದಿದ್ದರೆ ದೆಹಲಿ ವಿದ್ಯುತ್ ಕಡಿತ ಎದುರಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ ನಂತರ ಕೇಂದ್ರ ಈ ಬಗ್ಗೆ ಹೇಳಿಕೆ ನೀಡಿತ್ತು. ಕೇಜ್ರಿವಾಲ್ ಅವರು ಬಿಕ್ಕಟ್ಟನ್ನು ಪರಿಹರಿಸಲು ಪ್ರಧಾನ ಮಂತ್ರಿಯ ಮಧ್ಯಸ್ಥಿಕೆಯನ್ನು ಕೋರಿದರು.

4. ಕೇಂದ್ರ ವಿದ್ಯುತ್ ಸಚಿವಾಲಯದ ಹೇಳಿಕೆಯ ನಂತರ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಲ್ಲಿದ್ದಲು ಬಿಕ್ಕಟ್ಟನ್ನು ಒಪ್ಪಿಕೊಳ್ಳಲು ಕೇಂದ್ರ ಸಿದ್ಧವಿಲ್ಲ ಎಂದು ಹೇಳಿದರು. ಪ್ರತಿಯೊಂದು ಸಮಸ್ಯೆ ಬಗ್ಗೆಯೂ ಜಾಣಕುರುಡು ನೀತಿಯು ದೇಶಕ್ಕೆ ಕೆಟ್ಟದ್ದಾಗಿದೆ ಎಂದು ಅವರು ಹೇಳಿದರು.

5. ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಲ್ಲಿದ್ದಲು ಕೊರತೆಯ ತನಿಖೆಗೆ ಆಗ್ರಹಿಸಿದರು.

6. ಏತನ್ಮಧ್ಯೆ, ಮಧ್ಯಪ್ರದೇಶ ಇಂಧನ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾನುವಾರ ರಾಜ್ಯವು ಉತ್ತಮ ಸ್ಥಿತಿಯಲ್ಲಿದೆ ಎಂದು ಹೇಳಿಕೊಂಡಿದ್ದಾರೆ. ರಾಜ್ಯ ಸರ್ಕಾರವು ತನ್ನ ವಿದ್ಯುತ್ ಕೇಂದ್ರಗಳಿಗಾಗಿ ಎಂಟು ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಖರೀದಿಸಲು ಟೆಂಡರ್‌ಗಳನ್ನು ಮಾಡಿದೆ ಎಂದು ಸಚಿವರು ಹೇಳಿದರು.

7. ಪಂಜಾಬ್​​ನಲ್ಲಿ ಶಿರೋಮಣಿ ಅಕಾಲಿದಳ (SAD) ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಟೀಕಿಸಿದರು, ಪ್ರಸ್ತುತ ಬಿಕ್ಕಟ್ಟು ಸಂಪೂರ್ಣವಾಗಿ “ಮಾನವ ನಿರ್ಮಿತ” ಮತ್ತು ಆಡಳಿತದ ಸಂಪೂರ್ಣ ನಿರ್ಲಕ್ಷ್ಯ ಮತ್ತು ನೇರ ಯೋಜನೆಯ ಅನುಪಸ್ಥಿತಿಯ ನೇರ ಪರಿಣಾಮವಾಗಿದೆ ಎಂದು ಆರೋಪಿಸಿದರು.

8. ಪಂಜಾಬ್‌ನಲ್ಲಿ ವಿದ್ಯುತ್ ಸರಬರಾಜು ಪರಿಸ್ಥಿತಿ ಭೀಕರವಾಗಿ ಮುಂದುವರಿದಿದೆ ಎಂದು ಸರ್ಕಾರಿ ಸ್ವಾಮ್ಯದ ಪಿಎಸ್‌ಪಿಸಿಎಲ್ ಭಾನುವಾರ ಭಾನುವಾರ ಹೇಳಿದೆ. ಅಕ್ಟೋಬರ್ 13 ರವರೆಗೆ ರಾಜ್ಯದಲ್ಲಿ ಮೂರು ಗಂಟೆಗಳ ದೈನಂದಿನ ವಿದ್ಯುತ್ ಕಡಿತ ಇರುತ್ತದೆ.

9. ದೇಶವು ದಾಖಲೆಯ ಕಲ್ಲಿದ್ದಲನ್ನು ಉತ್ಪಾದಿಸಿದ ಒಂದು ವರ್ಷದಲ್ಲಿ, ಕಲ್ಲಿದ್ದಲಿನಲ್ಲಿ ಉತ್ಪತ್ತಿಯಾಗುವ ಅತಿಯಾದ ಮಳೆಯು ಗಣಿಗಳಿಂದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಇಂಧನದ ಪೂರೈಕೆಯನ್ನು ಬಾಧಿಸಿದೆ. ಇದು ಪಂಜಾಬ್, ರಾಜಸ್ಥಾನ, ದೆಹಲಿ ಮತ್ತು ಆಂಧ್ರಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿದ್ಯುತ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿತು.

10. ಪ್ರಸ್ತುತ ಬಿಕ್ಕಟ್ಟಿಗೆ ಕಾರಣವಾಗಿರುವ ಇನ್ನೊಂದು ಅಂಶವೆಂದರೆ ಅಂತಾರಾಷ್ಟ್ರೀಯ ಇಂಧನ ಬೆಲೆಯಲ್ಲಿನ ಏರಿಕೆಯು ನಿರ್ದಿಷ್ಟ ದರದಲ್ಲಿ ರಾಜ್ಯಗಳಿಗೆ ಬದ್ಧತೆಗಳನ್ನು ಪೂರೈಸಲು ಕಷ್ಟಾವಾದ ಕಾರಣ ವಿದ್ಯುತ್ ಉತ್ಪಾದಿಸಲು ಆಮದು ಮಾಡಿದ ಕಲ್ಲಿದ್ದಲನ್ನು ಬಳಸಿದ ವಿದ್ಯುತ್ ಸ್ಥಾವರಗಳು, ಉತ್ಪಾದನೆಯನ್ನು ಮೊಟಕುಗೊಳಿಸಿದವು ಅಥವಾ ಸಂಪೂರ್ಣವಾಗಿ ನಿಲ್ಲಿಸಿದವು.

ಇದನ್ನೂ ಓದಿ: ಕಲ್ಲಿದ್ದಲು ಬಿಕ್ಕಟ್ಟು: ಕತ್ತಲಲ್ಲಿ ಮುಳುಗಲಿವೆ ಈ ರಾಜ್ಯಗಳು, ದೀರ್ಘ ಪವರ್​ ಕಟ್ ನಿರೀಕ್ಷಿತ

ಇದನ್ನೂ ಓದಿ: Coal Crisis ಕಲ್ಲಿದ್ದಲು ಕೊರತೆ ಪರಿಹರಿಸದಿದ್ದರೆ ದೆಹಲಿಯಲ್ಲಿ ವಿದ್ಯುತ್ ಕಡಿತ ಎದುರಾಗಬಹುದು: ಮನೀಶ್ ಸಿಸೋಡಿಯಾ

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!