AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 01, 2022 | 9:24 AM

ತಿರುವನಂತಪುರಂ: ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆನೆ ಮರಿಯೊಂದು (Elephant) ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಮಂಗಳವಾರ ಸಂಜೆ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ.

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಡ್ರಮ್ಮರ್ ಆನೆ; ಸೊಂಡಿಲಿನಿಂದ ಡ್ರಮ್ ನುಡಿಸುತ್ತಿರುವ ಆನೆಯ ವಿಡಿಯೋ ವೈರಲ್

ಪುಷ್ಕರನ್ ಪಿಳ್ಳೆ ಆ ಕರುವಿಗೆ ಊಟವನ್ನು ನೀಡುತ್ತಿರುವಾಗ ಆಸುಪಾಸಿನಲ್ಲಿ ಜೆಸಿಬಿ ಯಂತ್ರಗಳು ಕೆಲಸ ಮಾಡುತ್ತಿತ್ತು. ಆ ಯಂತ್ರದ ದೊಡ್ಡ ಶಬ್ದದಿಂದ ಮರಿ ಆನೆ ಹೆದರಿ, ಪುಷ್ಕರನ್ ಪಿಳ್ಳೈ ಅವರ ಬೆರಳನ್ನು ಕಚ್ಚಿದೆ ಎಂದು ರಿಪೋರ್ಟರ್ ಲೈವ್ ವರದಿಯಲ್ಲಿ ತಿಳಿಸಿದೆ.

ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ, ಬೇರ್ಪಡಿಸಿದ ಬೆರಳನ್ನು ಮತ್ತೆ ಹೊಲಿಯಲು ವೈದ್ಯಕೀಯ ತಂಡವು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Puducherry: ಪುದುಚೇರಿಯ ಪ್ರಸಿದ್ಧ ಮನಕುಲ ವಿನಾಯಕ ದೇವಾಲಯದ ಲಕ್ಷ್ಮೀ ಆನೆ ಹೃದಯಾಘಾತದಿಂದ ಸಾವು

ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದ ಪಶುವೈದ್ಯರು ಮತ್ತು ಸಹಾಯಕರ ಅಸಮರ್ಥ ವರ್ತನೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊಟ್ಟೂರಿನಲ್ಲಿರುವ ಆನೆ ಪುನರ್ವಸತಿ ಕೇಂದ್ರವು 56 ಹೆಕ್ಟೇರ್‌ಗಳಲ್ಲಿ ಹರಡಿಕೊಂಡಿದೆ. ಅಲ್ಲಿ ದೈತ್ಯ ಸಸ್ತನಿಗಳು ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ತಿರುಗಾಡಲು ಅವಕಾಶವಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ