AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 9:24 AM

Share

ತಿರುವನಂತಪುರಂ: ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆನೆ ಮರಿಯೊಂದು (Elephant) ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಮಂಗಳವಾರ ಸಂಜೆ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ.

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಡ್ರಮ್ಮರ್ ಆನೆ; ಸೊಂಡಿಲಿನಿಂದ ಡ್ರಮ್ ನುಡಿಸುತ್ತಿರುವ ಆನೆಯ ವಿಡಿಯೋ ವೈರಲ್

ಪುಷ್ಕರನ್ ಪಿಳ್ಳೆ ಆ ಕರುವಿಗೆ ಊಟವನ್ನು ನೀಡುತ್ತಿರುವಾಗ ಆಸುಪಾಸಿನಲ್ಲಿ ಜೆಸಿಬಿ ಯಂತ್ರಗಳು ಕೆಲಸ ಮಾಡುತ್ತಿತ್ತು. ಆ ಯಂತ್ರದ ದೊಡ್ಡ ಶಬ್ದದಿಂದ ಮರಿ ಆನೆ ಹೆದರಿ, ಪುಷ್ಕರನ್ ಪಿಳ್ಳೈ ಅವರ ಬೆರಳನ್ನು ಕಚ್ಚಿದೆ ಎಂದು ರಿಪೋರ್ಟರ್ ಲೈವ್ ವರದಿಯಲ್ಲಿ ತಿಳಿಸಿದೆ.

ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ, ಬೇರ್ಪಡಿಸಿದ ಬೆರಳನ್ನು ಮತ್ತೆ ಹೊಲಿಯಲು ವೈದ್ಯಕೀಯ ತಂಡವು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Puducherry: ಪುದುಚೇರಿಯ ಪ್ರಸಿದ್ಧ ಮನಕುಲ ವಿನಾಯಕ ದೇವಾಲಯದ ಲಕ್ಷ್ಮೀ ಆನೆ ಹೃದಯಾಘಾತದಿಂದ ಸಾವು

ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದ ಪಶುವೈದ್ಯರು ಮತ್ತು ಸಹಾಯಕರ ಅಸಮರ್ಥ ವರ್ತನೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊಟ್ಟೂರಿನಲ್ಲಿರುವ ಆನೆ ಪುನರ್ವಸತಿ ಕೇಂದ್ರವು 56 ಹೆಕ್ಟೇರ್‌ಗಳಲ್ಲಿ ಹರಡಿಕೊಂಡಿದೆ. ಅಲ್ಲಿ ದೈತ್ಯ ಸಸ್ತನಿಗಳು ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ತಿರುಗಾಡಲು ಅವಕಾಶವಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ