AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ.

Shocking News: ಊಟ ಕೊಡಲು ಬಂದ ಮಾವುತನ ಕೈ ಬೆರಳು ಕಚ್ಚಿ, ತುಂಡರಿಸಿದ ಆನೆ ಮರಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 9:24 AM

Share

ತಿರುವನಂತಪುರಂ: ಕೇರಳದ ತಿರುವನಂತಪುರಂ (Tiruvanantapuram) ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆನೆ ಮರಿಯೊಂದು (Elephant) ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಮಂಗಳವಾರ ಸಂಜೆ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಪಕ್ಕದಲ್ಲೇ ಜೆಸಿಬಿ ಕೆಲಸ ನಡೆಯುತ್ತಿತ್ತು. ಇದರಿಂದ ಹೆದರಿದ ಆನೆ ಮರಿ ಊಟ ತಿನ್ನಿಸಲು ಬಂದ ಮಾವುತನ ಕೈ ಬೆರಳನ್ನು ಕಚ್ಚಿದೆ.

ಪುಷ್ಕರನ್ ಪಿಳ್ಳೈ ಎಂಬ ವ್ಯಕ್ತಿ ಅರಣ್ಯ ಎಂಬ ಕರುವಿಗೆ ಆಹಾರ ಮತ್ತು ಔಷಧಿಗಳನ್ನು ನೀಡುತ್ತಿದ್ದಾಗ ಆ ಆನೆಮರಿ ಆತನ ಬೆರಳುಗಳಿಗೆ ಕಚ್ಚಿ, ಗಂಭೀರವಾದ ಗಾಯಗಳಾಗಿವೆ. 2 ತಿಂಗಳ ಹಿಂದೆ ತಾಯಿ ಆನೆ ಸತ್ತ ನಂತರ ಅರಣ್ಯ ಎಂಬ ಮರಿಯಾನೆಯನ್ನು ಕೊಟ್ಟೂರು ಅರಣ್ಯದಿಂದ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಡ್ರಮ್ಮರ್ ಆನೆ; ಸೊಂಡಿಲಿನಿಂದ ಡ್ರಮ್ ನುಡಿಸುತ್ತಿರುವ ಆನೆಯ ವಿಡಿಯೋ ವೈರಲ್

ಪುಷ್ಕರನ್ ಪಿಳ್ಳೆ ಆ ಕರುವಿಗೆ ಊಟವನ್ನು ನೀಡುತ್ತಿರುವಾಗ ಆಸುಪಾಸಿನಲ್ಲಿ ಜೆಸಿಬಿ ಯಂತ್ರಗಳು ಕೆಲಸ ಮಾಡುತ್ತಿತ್ತು. ಆ ಯಂತ್ರದ ದೊಡ್ಡ ಶಬ್ದದಿಂದ ಮರಿ ಆನೆ ಹೆದರಿ, ಪುಷ್ಕರನ್ ಪಿಳ್ಳೈ ಅವರ ಬೆರಳನ್ನು ಕಚ್ಚಿದೆ ಎಂದು ರಿಪೋರ್ಟರ್ ಲೈವ್ ವರದಿಯಲ್ಲಿ ತಿಳಿಸಿದೆ.

ಮಾವುತನ ಎರಡು ಬೆರಳುಗಳು ಆನೆ ಮರಿಯ ಬಾಯಿಯೊಳಗೆ ಸಿಕ್ಕಿಹಾಕಿಕೊಂಡವು. ಕೂಡಲೇ ಆತನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತಾದರೂ, ಬೇರ್ಪಡಿಸಿದ ಬೆರಳನ್ನು ಮತ್ತೆ ಹೊಲಿಯಲು ವೈದ್ಯಕೀಯ ತಂಡವು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: Puducherry: ಪುದುಚೇರಿಯ ಪ್ರಸಿದ್ಧ ಮನಕುಲ ವಿನಾಯಕ ದೇವಾಲಯದ ಲಕ್ಷ್ಮೀ ಆನೆ ಹೃದಯಾಘಾತದಿಂದ ಸಾವು

ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದ ಪಶುವೈದ್ಯರು ಮತ್ತು ಸಹಾಯಕರ ಅಸಮರ್ಥ ವರ್ತನೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊಟ್ಟೂರಿನಲ್ಲಿರುವ ಆನೆ ಪುನರ್ವಸತಿ ಕೇಂದ್ರವು 56 ಹೆಕ್ಟೇರ್‌ಗಳಲ್ಲಿ ಹರಡಿಕೊಂಡಿದೆ. ಅಲ್ಲಿ ದೈತ್ಯ ಸಸ್ತನಿಗಳು ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ತಿರುಗಾಡಲು ಅವಕಾಶವಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು