AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಘಟನೆ […]

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..
ಡ್ರಮ್​ ಹಿಂದೆ ಅಡಗಿ ಕುಳಿತ ವೃದ್ಧೆ
TV9 Web
| Edited By: |

Updated on: Jun 03, 2021 | 5:08 PM

Share

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಘಟನೆ ನಡೆದಿದ್ದು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ. ಅಲ್ಲಿನ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಅವರು ಆರೋಘ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೊವಿಡ್ 19 ಲಸಿಕೆ ಅಭಿಯಾನಕ್ಕಾಗಿ ಚಂದ್ರಾಪುರ ಗ್ರಾಮಕ್ಕೆ ಹೋಗಿದ್ದರು. ಮೊದಲು ಗ್ರಾಮದ ಹರ್​ದೇವಿ ಎಂಬುವರ ಮನೆಗೆ ಹೋಗದರು. ಆದರೆ ಅವರನ್ನು ನೋಡುತ್ತಿದ್ದಂತೆ ಹೆದರಿದ ಹರ್​​ದೇವಿ ಮೊದಲು ಬಾಗಿಲ ಹಿಂದೆ ಅಡಗಿದರು. ಆದರೂ ಆರೋಗ್ಯ ಸಿಬ್ಬಂದಿ ಅವರಿಗೆ ತಿಳಿವಳಿಕೆ ನೀಡಿ, ಲಸಿಕೆ ನೀಡಲು ಮುಂದಾದರು. ಅದನ್ನು ನೋಡುತ್ತಿದ್ದಂತೆ ಮತ್ತಷ್ಟು ಹೆದರಿದ ಅಜ್ಜಿ ಅಲ್ಲಿಯೇ ಇದ್ದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತಿದ್ದಾರೆ. ಅದನ್ನು ನೋಡಿದ ಆರೋಗ್ಯ ಸಿಬ್ಬಂದಿಯೊಬ್ಬ ಅಮ್ಮ ಹೊರಗೆ ಬನ್ನಿ ಎಂದು ಕರೆದಿದ್ದಾರೆ. ಆದರೆ ಒಪ್ಪಲಿಲ್ಲ..ಆಗ ಅಲ್ಲಿಗೆ ಹೋದ ವೈದ್ಯೆಯೊಬ್ಬರು, ನಾವು ನಿಮಗೆ ಇಂಜೆಕ್ಷನ್​ ಕೊಡಲು ಬಂದಿಲ್ಲ. ಹೊರಗೆ ಬನ್ನಿ ಎಂದು ಕರೆದುಕೊಂಡು ಬಂದಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ನೋಡಲು ತುಂಬ ಫನ್ನಿ ಎನ್ನಿಸಿದರೂ ಒಂದು ದುರಂತವೇ ಸರಿ. ಹಳ್ಳಿಗಳ ಜನರಿಗೆ ಲಸಿಕೆ ಬಗ್ಗೆ ಸರಿಯಾಗಿ ಅರಿವು ಮೂಡಲಿಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ShameOnYouSamantha; ಬ್ಯಾನ್​ ಆಗಲಿದೆಯೇ ‘ದಿ ಫ್ಯಾಮಿಲಿ ಮ್ಯಾನ್​ 2’?

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?