AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಘಟನೆ […]

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..
ಡ್ರಮ್​ ಹಿಂದೆ ಅಡಗಿ ಕುಳಿತ ವೃದ್ಧೆ
TV9 Web
| Edited By: |

Updated on: Jun 03, 2021 | 5:08 PM

Share

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಘಟನೆ ನಡೆದಿದ್ದು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ. ಅಲ್ಲಿನ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಅವರು ಆರೋಘ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೊವಿಡ್ 19 ಲಸಿಕೆ ಅಭಿಯಾನಕ್ಕಾಗಿ ಚಂದ್ರಾಪುರ ಗ್ರಾಮಕ್ಕೆ ಹೋಗಿದ್ದರು. ಮೊದಲು ಗ್ರಾಮದ ಹರ್​ದೇವಿ ಎಂಬುವರ ಮನೆಗೆ ಹೋಗದರು. ಆದರೆ ಅವರನ್ನು ನೋಡುತ್ತಿದ್ದಂತೆ ಹೆದರಿದ ಹರ್​​ದೇವಿ ಮೊದಲು ಬಾಗಿಲ ಹಿಂದೆ ಅಡಗಿದರು. ಆದರೂ ಆರೋಗ್ಯ ಸಿಬ್ಬಂದಿ ಅವರಿಗೆ ತಿಳಿವಳಿಕೆ ನೀಡಿ, ಲಸಿಕೆ ನೀಡಲು ಮುಂದಾದರು. ಅದನ್ನು ನೋಡುತ್ತಿದ್ದಂತೆ ಮತ್ತಷ್ಟು ಹೆದರಿದ ಅಜ್ಜಿ ಅಲ್ಲಿಯೇ ಇದ್ದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತಿದ್ದಾರೆ. ಅದನ್ನು ನೋಡಿದ ಆರೋಗ್ಯ ಸಿಬ್ಬಂದಿಯೊಬ್ಬ ಅಮ್ಮ ಹೊರಗೆ ಬನ್ನಿ ಎಂದು ಕರೆದಿದ್ದಾರೆ. ಆದರೆ ಒಪ್ಪಲಿಲ್ಲ..ಆಗ ಅಲ್ಲಿಗೆ ಹೋದ ವೈದ್ಯೆಯೊಬ್ಬರು, ನಾವು ನಿಮಗೆ ಇಂಜೆಕ್ಷನ್​ ಕೊಡಲು ಬಂದಿಲ್ಲ. ಹೊರಗೆ ಬನ್ನಿ ಎಂದು ಕರೆದುಕೊಂಡು ಬಂದಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ನೋಡಲು ತುಂಬ ಫನ್ನಿ ಎನ್ನಿಸಿದರೂ ಒಂದು ದುರಂತವೇ ಸರಿ. ಹಳ್ಳಿಗಳ ಜನರಿಗೆ ಲಸಿಕೆ ಬಗ್ಗೆ ಸರಿಯಾಗಿ ಅರಿವು ಮೂಡಲಿಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ShameOnYouSamantha; ಬ್ಯಾನ್​ ಆಗಲಿದೆಯೇ ‘ದಿ ಫ್ಯಾಮಿಲಿ ಮ್ಯಾನ್​ 2’?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು