AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಘಟನೆ […]

Viral Video:‘ನಾನು ಇಂಜೆಕ್ಷನ್​ ತೆಗೆದುಕೊಳ್ಳೋದಿಲ್ಲ..’- ಲಸಿಕೆ ಕೊಡಲು ಬಂದವರನ್ನು ನೋಡಿ ಭಯದಿಂದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿ..
ಡ್ರಮ್​ ಹಿಂದೆ ಅಡಗಿ ಕುಳಿತ ವೃದ್ಧೆ
TV9 Web
| Edited By: |

Updated on: Jun 03, 2021 | 5:08 PM

Share

ಕೊವಿಡ್ 19 ಲಸಿಕೆ ಅಭಿಯಾದ ದೇಶಾದ್ಯಂತ ನಡೆಯುತ್ತಿದೆ. ಆದರೆ ಕೆಲವು ಹಿಂದುಳಿದ ಹಳ್ಳಿಗಳಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಲಸಿಕೆ ಬಗ್ಗೆ ಇನ್ನೂ ಸರಿಯಾಗಿ ಅರಿವು ಮೂಡಿಲ್ಲ ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದೆ. ಕೊವಿಡ್​ 19 ಲಸಿಕೆಯ ಮಹತ್ವ ಏನು? ಯಾಕಾಗಿ ತೆಗೆದುಕೊಳ್ಳಬೇಕು ಎಂಬುದಿನ್ನೂ ಅವರಿಗೆ ಸ್ಪಷ್ಟವಾಗಿಲ್ಲ. ಕೊವಿಡ್ ಲಸಿಕೆ ನೀಡಲು ಬಂದವರನ್ನು ನೋಡಿ ಭಯಪಟ್ಟು, ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತ ಅಜ್ಜಿಯ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಘಟನೆ ನಡೆದಿದ್ದು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ. ಅಲ್ಲಿನ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಅವರು ಆರೋಘ್ಯ ಇಲಾಖೆ ಸಿಬ್ಬಂದಿಯೊಂದಿಗೆ ಕೊವಿಡ್ 19 ಲಸಿಕೆ ಅಭಿಯಾನಕ್ಕಾಗಿ ಚಂದ್ರಾಪುರ ಗ್ರಾಮಕ್ಕೆ ಹೋಗಿದ್ದರು. ಮೊದಲು ಗ್ರಾಮದ ಹರ್​ದೇವಿ ಎಂಬುವರ ಮನೆಗೆ ಹೋಗದರು. ಆದರೆ ಅವರನ್ನು ನೋಡುತ್ತಿದ್ದಂತೆ ಹೆದರಿದ ಹರ್​​ದೇವಿ ಮೊದಲು ಬಾಗಿಲ ಹಿಂದೆ ಅಡಗಿದರು. ಆದರೂ ಆರೋಗ್ಯ ಸಿಬ್ಬಂದಿ ಅವರಿಗೆ ತಿಳಿವಳಿಕೆ ನೀಡಿ, ಲಸಿಕೆ ನೀಡಲು ಮುಂದಾದರು. ಅದನ್ನು ನೋಡುತ್ತಿದ್ದಂತೆ ಮತ್ತಷ್ಟು ಹೆದರಿದ ಅಜ್ಜಿ ಅಲ್ಲಿಯೇ ಇದ್ದ ದೊಡ್ಡ ಡ್ರಮ್​​ನ ಹಿಂದೆ ಅಡಗಿ ಕುಳಿತಿದ್ದಾರೆ. ಅದನ್ನು ನೋಡಿದ ಆರೋಗ್ಯ ಸಿಬ್ಬಂದಿಯೊಬ್ಬ ಅಮ್ಮ ಹೊರಗೆ ಬನ್ನಿ ಎಂದು ಕರೆದಿದ್ದಾರೆ. ಆದರೆ ಒಪ್ಪಲಿಲ್ಲ..ಆಗ ಅಲ್ಲಿಗೆ ಹೋದ ವೈದ್ಯೆಯೊಬ್ಬರು, ನಾವು ನಿಮಗೆ ಇಂಜೆಕ್ಷನ್​ ಕೊಡಲು ಬಂದಿಲ್ಲ. ಹೊರಗೆ ಬನ್ನಿ ಎಂದು ಕರೆದುಕೊಂಡು ಬಂದಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದು ನೋಡಲು ತುಂಬ ಫನ್ನಿ ಎನ್ನಿಸಿದರೂ ಒಂದು ದುರಂತವೇ ಸರಿ. ಹಳ್ಳಿಗಳ ಜನರಿಗೆ ಲಸಿಕೆ ಬಗ್ಗೆ ಸರಿಯಾಗಿ ಅರಿವು ಮೂಡಲಿಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ShameOnYouSamantha; ಬ್ಯಾನ್​ ಆಗಲಿದೆಯೇ ‘ದಿ ಫ್ಯಾಮಿಲಿ ಮ್ಯಾನ್​ 2’?

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ