AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಖ್ಯಮಂತ್ರಿ ಯೋಜನಾ’ ಪದದ ಬಗ್ಗೆ ಕೇಂದ್ರ ಆಕ್ಷೇಪ; ಹೆಸರಿಲ್ಲದೆ ಯೋಜನೆ ಜಾರಿಗೊಳಿಸುತ್ತೇವೆ ಎಂದ ಅರವಿಂದ್ ಕೇಜ್ರಿವಾಲ್

ಯೋಜನೆಯ ಹೆಸರಲ್ಲಿ ‘ಮುಖ್ಯಮಂತ್ರಿ’ ಎಂದು ಇರುವುದಕ್ಕೆ ಅಸಮ್ಮತಿ ಸೂಚಿಸಿ ಕೇಂದ್ರ ನಿನ್ನೆ (ಮಾರ್ಚ್ 19) ಪತ್ರ ಬರೆದಿದೆ. ದೆಹಲಿ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ, ಯೋಜನೆಯನ್ನು ‘ಮುಖ್ಯಮಂತ್ರಿ ಯೋಜನಾ’ ಎಂದು ಕರೆಯಬಾರದು ಎಂದು ಸೂಚಿಸಿರುವ ಬಗ್ಗೆ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಯೋಜನಾ’ ಪದದ ಬಗ್ಗೆ ಕೇಂದ್ರ ಆಕ್ಷೇಪ; ಹೆಸರಿಲ್ಲದೆ ಯೋಜನೆ ಜಾರಿಗೊಳಿಸುತ್ತೇವೆ ಎಂದ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Apr 06, 2022 | 6:57 PM

Share

ದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ AAP ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮನೆ ಮನೆಗೆ ಪಡಿತರ ವಿತರಣೆ ಮಾಡುವ ನೂತನ ಯೋಜನೆಯ ಹೆಸರಿಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರದ ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಯಾವುದೇ ಹೆಸರಿಲ್ಲದೆ ನಾವು ಅರ್ಹರ ಮನೆಗೆ ಪಡಿತರ ವಿತರಣೆ ಮಾಡುತ್ತೇವೆ ಎಂದು ಇಂದು (ಮಾರ್ಚ್ 20) ಹೇಳಿದ್ದಾರೆ. ಸದರಿ ಯೋಜನೆಗೆ ‘ಘರ್ ಘರ್ ರೇಷನ್ ಯೋಜನಾ’ ಎಂದು ಹೆಸರಿಸಲಾಗಿತ್ತು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ಆಹಾರ ಇಲಾಖೆ ಸಚಿವ ಇಮ್ರಾನ್ ಹುಸೈನ್ ತಿಳಿಸಿದ್ದರು. ಆದರೆ, ಯೋಜನೆಯ ಹೆಸರಿನ ಕುರಿತಾಗಿ ಕೇಂದ್ರ ಸರ್ಕಾರ ಆಕ್ಷೇಪ ಸೂಚಿಸಿತ್ತು.

ಯೋಜನೆಯ ಹೆಸರಲ್ಲಿ ‘ಮುಖ್ಯಮಂತ್ರಿ’ ಎಂದು ಇರುವುದಕ್ಕೆ ಅಸಮ್ಮತಿ ಸೂಚಿಸಿ ಕೇಂದ್ರ ನಿನ್ನೆ (ಮಾರ್ಚ್ 19) ಪತ್ರ ಬರೆದಿದೆ. ದೆಹಲಿ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ, ಯೋಜನೆಯನ್ನು ‘ಮುಖ್ಯಮಂತ್ರಿ ಯೋಜನಾ’ ಎಂದು ಕರೆಯಬಾರದು ಎಂದು ಸೂಚಿಸಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈ ಬಗ್ಗೆ ನಾನು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಯೋಜನೆಯ ಹೆಸರನ್ನು ತೆಗೆಯಲು ಸೂಚಿಸಿದ್ದೇನೆ. ಯಾವುದೇ ಹೆಸರಿಲ್ಲದೆ ನಾವು ಅರ್ಹರ ಮನೆಗೆ ಪಡಿತರ ವಿತರಣೆ ಮಾಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮಾರ್ಚ್ 20) ಹೇಳಿದ್ದಾರೆ.

ಮನೆ ಮನೆಗೆ ಪಡಿತರ ವಿತರಣೆ ಮಾಡುವ ದೆಹಲಿ ಸರ್ಕಾರದ ಯೋಜನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 25ರಂದು ಚಾಲನೆ ನೀಡಲಿದ್ದಾರೆ. ಯೋಜನೆಗೆ ಸಂಬಂಧಿಸಿ ಸೀಮಾಪುರಿ ಭಾಗದ ನಿಯಮಿತ ಸಂಖ್ಯೆಯ ಫಲಾನುಭವಿಗಳ ಮನೆಗಳಿಗೆ ಪಡಿತರ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಇಮ್ರಾನ್ ಹುಸೈನ್ ಮಾರ್ಚ್ 12ರಂದು ಹೇಳಿದ್ದರು. ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರ ಪಡಿತರ ಮತ್ತು ಬಯೋಮೆಟ್ರಿಕ್ ವಿವರ ಸಿದ್ಧಪಡಿಸಿ ಇಡುವಂತೆ ಸರ್ಕಾರ ಆಯಾ ಇಲಾಖೆಗಳಿಗೆ ಸೂಚನೆ ನೀಡಿತ್ತು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಇಮ್ರಾನ್ ಹುಸೈನ್, ಏಪ್ರಿಲ್ 1ರ ಬಳಿಕ ಈ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುವುದು. ರಾಷ್ಟ್ರ ರಾಜಧಾನಿಯ ಇತರಡೆಗೂ ಈ ಯೋಜನೆ ತಲುಪಿಸಲಾಗುವುದು ಎಂದು ಹೇಳಿದ್ದರು.

ಮನೆ ಮನೆಗೆ ಪಡಿತರ, ಬಯೋಮೆಟ್ರಿಕ್ ವೆರಿಫಿಕೇಷನ್ ನಂತರ ಆರಂಭ ಮನೆ ಮನೆಗೆ ಪಡಿತರ ಸಾಮಾಗ್ರಿಗಳನ್ನು ಒದಗಿಸುವ ಈ ಯೋಜನೆಯನ್ನು ದೆಹಲಿ ಸರ್ಕಾರ ಕಳೆದ ತಿಂಗಳೇ ಪರಿಚಯಿಸಿತ್ತು. ಯೋಜನೆಯ ಪ್ರಕಾರ ಪ್ರತಿ ಫಲಾನುಭವಿ ಮನೆಗಳಿಗೆ ಪಡಿತರ ಸಾಮಾಗ್ರಿಗಳು ಸರಬರಾಜು ಆಗಲಿದೆ. ಗೋಧಿ, ಅಕ್ಕಿ ಮನೆ ಮನೆಗೆ ತಲುಪಲಿದೆ. ಈ ಯೋಜನೆಗಾಗಿ ಬಯೋಮೆಟ್ರಿಕ್ ವೆರಿಫಿಕೇಷನ್ ಆಗಬೇಕಿದೆ.

ಗಣರಾಜ್ಯೋತ್ಸವ ದಿನದಂದು ಮಾತನಾಡಿದ್ದ ಆಮ್ ಆದ್ಮಿ ಪಾರ್ಟಿ (AAP) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೆ ಮನೆಗೆ ಪಡಿತರ ವಿತರಿಸುವ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದರು. ವರ್ಷಾಂತ್ಯದ ಒಳಗೆ ನಗರದ ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್ (Health Card) ನೀಡುವ ಕುರಿತು ಹೇಳಿದ್ದರು.

ಇದನ್ನೂ ಓದಿ: 2048 ರ ಒಲಿಂಪಿಕ್ಸ್​ ಆಯೋಜಿಸುವುದು ನಮ್ಮ ಕನಸು: ಅರವಿಂದ್ ಕೇಜ್ರಿವಾಲ್​

ನಾನು ರಾಮ ಮತ್ತು ಹನುಮನ ಭಕ್ತ; ರಾಮ ರಾಜ್ಯದಿಂದ ಸ್ಫೂರ್ತಿ ಪಡೆದ 10 ಅಂಶ ಪಟ್ಟಿ ಮಾಡಿದ ಅರವಿಂದ್ ಕೇಜ್ರಿವಾಲ್

Published On - 4:39 pm, Sat, 20 March 21

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!