AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಶಿಕ್ಷಕಿಯರ ಶೌಚಾಲಯದೊಳಗೆ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನ ಬಂಧನ

ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್​ರೂಮನ್​ ಬಲ್ಬ್​ ಸಾಕೆಟ್​ನಲ್ಲಿ ಸ್ಪೈ ಕ್ಯಾಮರಾವನ್ನು ಇಟ್ಟಿದ್ದ ಎನ್ನಲಾಗಿದೆ. ಆತ ತನ್ನ ಕಂಪ್ಯೂಟರ್​ ಹಾಗೂ ಮೊಬೈಲ್ ಮೂಲಕ ವಾಶ್​ರೂಂನ ವಿಡಿಯೋವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ. ಈ ಕುರಿತು ಶಿಕ್ಷಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನೋಯ್ಡಾ: ಶಿಕ್ಷಕಿಯರ ಶೌಚಾಲಯದೊಳಗೆ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನ ಬಂಧನ
Director
ನಯನಾ ರಾಜೀವ್
|

Updated on: Dec 18, 2024 | 12:38 PM

Share

ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್​ರೂಮನ್​ ಬಲ್ಬ್​ ಸಾಕೆಟ್​ನಲ್ಲಿ ಸ್ಪೈ ಕ್ಯಾಮರಾವನ್ನು ಇಟ್ಟಿದ್ದ ಎನ್ನಲಾಗಿದೆ. ಆತ ತನ್ನ ಕಂಪ್ಯೂಟರ್​ ಹಾಗೂ ಮೊಬೈಲ್ ಮೂಲಕ ವಾಶ್​ರೂಂನ ವಿಡಿಯೋವನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ. ಈ ಕುರಿತು ಶಿಕ್ಷಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಘಟನೆಯು ನೋಯ್ಡಾದ ಸೆಕ್ಟರ್ 70 ರ ಪ್ಲೇ ಸ್ಕೂಲ್ ಆದ ಲರ್ನ್ ವಿತ್ ಫನ್‌ನಲ್ಲಿ ನಡೆದಿದೆ. ಡಿಸೆಂಬರ್ 10 ರಂದು ಶಿಕ್ಷಕಿಯೊಬ್ಬರು ವಾಶ್‌ರೂಮ್‌ನ ಬಲ್ಬ್ ಹೋಲ್ಡರ್‌ನಲ್ಲಿ ಅಸಹಜವಾದದ್ದನ್ನು ಗಮನಿಸಿದರು. ಹೋಲ್ಡರ್​ನಲ್ಲಿ ಮಸುಕಾದ ಬೆಳಕಿರುವುದನ್ನು ಗಮನಿಸಿದರು. ಅದು ಅನುಮಾನವನ್ನು ಹುಟ್ಟುಹಾಕಿತ್ತು. ಸೂಕ್ಷ್ಮವಾಗಿ ಗಮನಿಸಿದಾಗ ಅಲ್ಲಿ ಸ್ಪೈ ಕ್ಯಾಮರಾ ಇರುವುದು ಕಂಡುಬಂದಿತ್ತು. ಕೂಡಲೇ ಶಾಲೆಯ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಸಾಧನ ಇರುವುದನ್ನು ಖಚಿತಪಡಿಸಿದ್ದಾರೆ.

ಶಿಕ್ಷಕಿಯು ಶಾಲೆಯ ನಿರ್ದೇಶಕ ನವನಿಷ್ ಸಹಾಯ್ ಮತ್ತು ಶಾಲೆಯ ಸಂಯೋಜಕರಾದ ಪಾರುಲ್ ಅವರಿಗೆ ವಿಷಯ ತಿಳಿಸಿದ್ದಾರೆ. ಅವರು ಆರೋಪಗಳನ್ನು ನಿರಾಕರಿಸಿದರು. ಸಹಾಯ್ ಅಥವಾ ಪಾರುಲ್ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕಿ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಬಾಡಿಗೆ ಮನೆಯ ಬೆಡ್​ರೂಂ, ಬಾತ್​ರೂಂನಲ್ಲೂ ಕ್ಯಾಮೆರಾ ಇಟ್ಟಿದ್ದ ಮನೆ ಮಾಲೀಕನ ಮಗ, ಸಿಕ್ಕಿಬಿದ್ದಿದ್ಹೇಗೆ?

ಶಿಕ್ಷಕಿಯ ದೂರಿನ ಮೇರೆಗೆ ನೋಯ್ಡಾದ ಕೇಂದ್ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶಕ್ತಿ ಮೋಹನ್ ಅವಸ್ತಿ ಅವರು ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೆಕಾರ್ಡ್​ ಮಾಡದೆಯೇ ಲೈವ್​ ಸ್ಟ್ರೀಮಿಂಗ್ ಮಾಡುವ ಸಾಮರ್ಥ್ಯವನ್ನು ಅದು ಹೊಂದಿದೆ. ನಂತರ ಡೈರೆಕ್ಟರ್ ನವೀಶ್ ಸಹಾಯ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಸಹಾಯ್ ವಿಚಾರಣೆಯ ಸಮಯದಲ್ಲಿ ತಾನು ಆನ್‌ಲೈನ್‌ನಲ್ಲಿ ₹ 22,000 ಕ್ಕೆ ಸ್ಪೈ ಕ್ಯಾಮೆರಾವನ್ನು ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ . ಸಾಧನವನ್ನು ನಿರ್ದಿಷ್ಟವಾಗಿ ಬಲ್ಬ್ ಹೋಲ್ಡರ್‌ನೊಳಗೆ ಮರೆಮಾಡಲು ವಿನ್ಯಾಸಗೊಳಿಸಲಾಗಿದೆ. ಇದು ಸಾಮಾನ್ಯವಾಗಿ ಯಾರ ಕಣ್ಣಿಗೂ ಕಾಣಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಈ ಹಿಂದೆ ಶಾಲೆಯ ಶೌಚಾಲಯದಲ್ಲಿ ಇದೇ ರೀತಿಯ ಪತ್ತೇದಾರಿ ಕ್ಯಾಮೆರಾ ಸಿಕ್ಕಿತ್ತು ಇದು ಮೊದಲಲ್ಲ ಎಂದು ಶಿಕ್ಷಕಿ ಹೇಳಿದ್ದಾರೆ. ಅದನ್ನು ಪಾರುಲ್​ಗೆ ಹಸ್ತಾಂತರಿಸಲಾಗಿತ್ತು ಆದರೆ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!