Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ ಮುಖ್ಯ ಶಿಕ್ಷಕ; ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

Bihar: ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ತುಂಬ ಪ್ರಯತ್ನ ಮಾಡಬೇಕಾಯಿತು. ನಂತರವಷ್ಟೇ ಪೊಲೀಸರು ಆರೋಪಿಯನ್ನು ಜನರಿಂದ ರಕ್ಷಿಸಿ ಸ್ಟೇಶನ್​ಗೆ ಕರೆದುಕೊಂಡು ಹೋದರು.

ಶಾಲೆಯಲ್ಲಿ ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ ಮುಖ್ಯ ಶಿಕ್ಷಕ; ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Sep 19, 2021 | 12:45 PM

ಕಟಿಹಾರ್​: ವಿದ್ಯಾರ್ಥಿನಿಯೊಬ್ಬಳ ಜತೆ ಅನುಚಿತವಾಗಿ ವರ್ತಿಸಿದ ಶಾಲಾ ಮುಖ್ಯಶಿಕ್ಷಕನಿಗೆ ಸ್ಥಳೀಯರೆಲ್ಲ ಸೇರಿ ಸಿಕ್ಕಾಪಟೆ ಹೊಡೆದಿದ್ದಾರೆ. ಅಷ್ಟೇ ಅಲ್ಲ ಪೊಲೀಸರು ಆ ಶಿಕ್ಷಕನನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.  ಈ ಘಟನೆ ನಡೆದದ್ದು ಬಿಹಾರದ ಕಟಿಹಾರ ಜಿಲ್ಲೆಯ ಸೇಮಾಪುರ ಎಂಬಲ್ಲಿರುವ ಪಿಪ್ರಿ ಬಹಿಯಾರ್​ ಎಂಬ ಪ್ರಾಥಮಿಕ ಶಾಲೆಯಲ್ಲಿ. ಇಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 12ವರ್ಷದ ಬಾಲಕಿಗೆ ಮುಖ್ಯಶಿಕ್ಷಕ ಕೆನ್ನೆಯ ಮೇಲೆ ಕಚ್ಚಿದ್ದ.

ಮುಖ್ಯ ಶಿಕ್ಷಕ ಕಚ್ಚಿದ್ದರಿಂದ ಬಾಲಕಿ ದೊಡ್ಡದಾಗಿ ಅಳಲು ಶುರು ಮಾಡಿದ್ದಳು. ಬಾಲಕಿಯ ಅಳುವಿನ ಶಬ್ದ ಕೇಳಿ ಅಲ್ಲೇ ಅಕ್ಕ-ಪಕ್ಕ ಇದ್ದವರೆಲ್ಲ ಓಡಿಬಂದಿದ್ದಾರೆ. ಜನರನ್ನು ನೋಡುತ್ತಿದ್ದಂತೆ  ಶಾಲೆಯ ಒಂದು ಕೋಣೆಗೆ ಹೋಗಿ ಲಾಕ್​ ಮಾಡಿಕೊಂಡಿದ್ದ. ಆದರೆ ಸ್ಥಳೀಯ ಜನರು ಅವನನ್ನು ಬಿಡಲಿಲ್ಲ. ಪೊಲೀಸರಿಗೆ ಕರೆ ಮಾಡಿ, ತಾವೆಲ್ಲ ಶಾಲೆಯ ಹೊರಗೇ ಸುತ್ತುವರಿದು ನಿಂತಿದ್ದರು. ಪೊಲೀಸರು ಬಂದು ಮುಖ್ಯಶಿಕ್ಷಕನನ್ನು ಹೊರಗೆ ಕರೆದುತರುತ್ತಿದ್ದಂತೆ ಆತನ ಮೇಲೆ ಜನರು ದಾಳಿ ಮಾಡಿದ್ದಾರೆ. ಕೋಲು, ಬಡಿಗೆಗಳಿಂದ ಪೊಲೀಸರ ಎದುರೇ ಹೊಡೆದಿದ್ದಾರೆ.

ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ತುಂಬ ಪ್ರಯತ್ನ ಮಾಡಬೇಕಾಯಿತು. ನಂತರವಷ್ಟೇ ಪೊಲೀಸರು ಆರೋಪಿಯನ್ನು ಜನರಿಂದ ರಕ್ಷಿಸಿ ಸ್ಟೇಶನ್​ಗೆ ಕರೆದುಕೊಂಡು ಹೋದರು. ಮುಖ್ಯಶಿಕ್ಷಕನಿಗೆ ಸ್ಥಳೀಯರು ಹೊಡೆಯುತ್ತಿರುವ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿವೆ.  ಈ ವ್ಯಕ್ತಿ ಹುಡುಗಿಯರ ಮೇಲೆ ದೌರ್ಜನ್ಯ ನಡೆಸಿದ್ದು ಇದೇ ಮೊದಲಲ್ಲ ಎಂದು ಹಳ್ಳಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂಓದಿ: ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರ್; ದಂಪತಿ ಸ್ಥಳದಲ್ಲೇ ದುರ್ಮರಣ, ಮಕ್ಕಳು ಪಾರು

Published On - 12:43 pm, Sun, 19 September 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್