AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata: ಶಾಲಾ ಶಿಕ್ಷಕಿ ಮತ್ತು ಆಕೆಯ ಪುತ್ರನ ಭೀಕರ ಹತ್ಯೆ; ಪತಿ-ಟ್ಯೂಷನ್​ ಶಿಕ್ಷಕನ ವಿಚಾರಣೆ

Crime News: ತಾಯಿ-ಮಗನ ಶವ  ರಕ್ತದ ಮಡುವಲ್ಲಿ ಬಿದ್ದಿತ್ತು. ಆ ಬಾಲಕ ಶಾಲೆಯ ಯೂನಿಫಾರ್ಮ್​ನಲ್ಲೇ ಇದ್ದ. ಆತ ಕಟ್ಟಿದ್ದ ಟೈ ಕೂಡ ಹಾಗೇ ಇತ್ತು.

Kolkata: ಶಾಲಾ ಶಿಕ್ಷಕಿ ಮತ್ತು ಆಕೆಯ ಪುತ್ರನ ಭೀಕರ ಹತ್ಯೆ; ಪತಿ-ಟ್ಯೂಷನ್​ ಶಿಕ್ಷಕನ ವಿಚಾರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 07, 2021 | 2:52 PM

Share

ಕೋಲ್ಕತ್ತ: ಶಾಲಾ ಶಿಕ್ಷಕಿ (School Teacher) ಮತ್ತು ಅವರ 14 ವರ್ಷದ ಪುತ್ರನ ಮೃತದೇಹ  ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಕಿಯ ಪತಿ ಮತ್ತು ಆ ಹುಡುಗನಿಗೆ ಟ್ಯೂಷನ್​ ಹೇಳುತ್ತಿದ್ದ ಶಿಕ್ಷಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕಿಯ ಕುಟುಂಬ ಕೋಲ್ಕತ್ತದ ಬೆಹಾಲಾ ಪರ್ನಶ್ರೀ ಏರಿಯಾದ ಒಂದು ಬಹುಅಂತಸ್ತಿನ ವಸತಿ ಕಟ್ಟಡದ ಫ್ಲ್ಯಾಟ್​ವೊಂದರಲ್ಲಿ ವಾಸವಾಗಿತ್ತು. ಸೋಮವಾರ ಸಂಜೆ  ಮನೆಗೆ ಬರುವಷ್ಟರಲ್ಲಿ ಬಾಗಿಲು ತೆರೆದೇ ಇತ್ತು. ಒಳಗೆ ಬಂದು ನೋಡಿದಾಗ ಪತ್ನಿ ಮತ್ತು ಮಗ ಇಬ್ಬರೂ ಶವವಾಗಿ ಬಿದ್ದಿದ್ದರು ಎಂದು ಶಿಕ್ಷಕಿಯ ಪತಿ ತಿಳಿಸಿದ್ದಾರೆ.  

ತಾಯಿ-ಮಗನ ಶವ  ರಕ್ತದ ಮಡುವಲ್ಲಿ ಬಿದ್ದಿತ್ತು. ಆ ಬಾಲಕ ಶಾಲೆಯ ಯೂನಿಫಾರ್ಮ್​ನಲ್ಲೇ ಇದ್ದ. ಆತ ಕಟ್ಟಿದ್ದ ಟೈ ಕೂಡ ಹಾಗೇ ಇತ್ತು. ಹುಡುಗನ ದೇಹ ಬೆಡ್​ ಮೇಲೆ ಇದ್ದರೆ, ತಾಯಿಯ ಶವ ನೆಲದ ಮೇಲೆ ಬಿದ್ದಿತ್ತು. ಇವರಿಬ್ಬರನ್ನೂ ಅಡುಗೆ ಮನೆಯಲ್ಲಿದ್ದ ಚಾಕುವಿನಲ್ಲಿಯೇ ಕೊಲ್ಲಲಾಗಿದೆ ಎಂದು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತದೇಹಗಳನ್ನು ಪೋಸ್ಟ್ ಮಾರ್ಟಮ್​ಗೆ ಕಳಿಸಲಾಗಿದೆ. ಸದ್ಯ ಮೃತ ಶಿಕ್ಷಕಿಯ ಪತಿ ಮತ್ತು ಮನೆ ಪಾಠ ಹೇಳಿಕೊಡಲು ಬರುತ್ತಿದ್ದ ಶಿಕ್ಷಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೋಮವಾರ ಸಂಜೆ 5ಗಂಟೆ ಹೊತ್ತಿಗೆ ನಾನು ಅವರ ಮನೆಗೆ ಹೋದೆ. ಆದರೆ ಬಾಗಿಲು ಹಾಕಿತ್ತು. ಬಾಗಿಲು ಬಡಿದರೂ ಯಾರೂ ತೆರೆಯಲಿಲ್ಲ. ಮನೆಯೊಳಗೆ ಕತ್ತಲಿತ್ತು. ಹಾಗಾಗಿ ವಾಪಸ್ ಹೋದೆ ಎಂದು ಟ್ಯೂಷನ್​ ಶಿಕ್ಷಕ ಹೇಳಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾವಿನ ಬಾಲ ಹಿಡಿದು ಕಚ್ಚಿಸಿಕೊಳ್ಳುತ್ತಿದ್ದ ಉರಗ ತಜ್ಞ; ಸೆಕೆಂಡುಗಳಲ್ಲಿ ಅಪಾಯದಿಂದ ಪಾರು

Redmi 10 Prime: 6000mAh ಬ್ಯಾಟರಿ, 50MP ಕ್ಯಾಮೆರಾದ ರೆಡ್ಮಿ 10 ಪ್ರೈಮ್ ಈಗ ಖರೀದಿಗೆ ಲಭ್ಯ: ಅತಿ ಕಡಿಮೆ ಬೆಲೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?