AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಿರುವ ಕೊರೊನಾ ಸೋಂಕು; ಉತ್ತರ ಪ್ರದೇಶದಲ್ಲಿ ಜ.23ರವರೆಗೆ ಎಲ್ಲ ಶಾಲಾ-ಕಾಲೇಜುಗಳೂ ಬಂದ್

ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಇಂದು ರಾಜ್ಯದ ಕೊರೊನಾ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ್ದರು. ಕೊವಿಡ್​ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ಲಖನೌದ ಕಿಂಗ್ ಜಾರ್ಜ್​ ಮೆಡಿಕಲ್​ ವಿಶ್ವವಿದ್ಯಾಲಯದಲ್ಲಿ ಮಾಡಲಾಗಿರುವ ವ್ಯವಸ್ಥೆ ಪರಿಶೀಲನೆ ಮಾಡಿದ್ದಾರೆ.

ಹೆಚ್ಚುತ್ತಿರುವ ಕೊರೊನಾ ಸೋಂಕು; ಉತ್ತರ ಪ್ರದೇಶದಲ್ಲಿ ಜ.23ರವರೆಗೆ ಎಲ್ಲ ಶಾಲಾ-ಕಾಲೇಜುಗಳೂ ಬಂದ್
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Jan 16, 2022 | 4:29 PM

Share

ಲಖನೌ: ಉತ್ತರಪ್ರದೇಶದಲ್ಲಿ ಜನವರಿ 23ರವರೆಗೂ ಎಲ್ಲ ಶಾಲಾ-ಕಾಲೇಜುಗಳೂ ಬಂದ್ ಇರಲಿವೆ ಎಂದು ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊವಿಡ್​ 19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸಕ್ತ ಆದೇಶ ಹೊರಡಿಸಿದೆ. ಈ ಹಿಂದೆ ಜನವರಿ 5ರಂದು ಆದೇಶ ಪ್ರಕಟಣೆ ಹೊರಡಿಸಿದ್ದ ಸರ್ಕಾರ, ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10ನೇ ತರಗತಿವರೆಗಿನ ಎಲ್ಲ  ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿತ್ತು. ಆ ನಿಯಮದ ವ್ಯಾಪ್ತಿಯನ್ನೀಗ ವಿಸ್ತರಿಸಲಾಗಿದ್ದು, ಜನವರಿ 23ರವರೆಗೆ ಎಲ್ಲ ಶಾಲೆ-ಕಾಲೇಜುಗಳನ್ನೂ ಬಂದ್​ ಮಾಡಲು ನಿರ್ಧಾರ ಮಾಡಿದೆ. 

ಉತ್ತರಪ್ರದೇಶವಷ್ಟೇ ಅಲ್ಲ, ಇತರ ಕೆಲವು ರಾಜ್ಯಗಳೂ ಕೂಡ ಶಾಲೆ-ಕಾಲೇಜುಗಳಿಗೆ ನಿರ್ಬಂಧ ವಿಧಿಸಿವೆ.  ತೆಲಂಗಾಣದಲ್ಲಿ ಜನವರಿ 30ರವರೆಗೆ, ಮಧ್ಯಪ್ರದೇಶದಲ್ಲಿ ಜನವರಿ 31ರವರೆಗೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುವುದಿಲ್ಲ. ಇನ್ನು ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಮಾತ್ರ ಶಾಲೆಗಳು ಜನವರಿ 31ರವರೆಗೆ ಬಂದ್ ಇರಲಿದೆ. ಕೇರಳದಲ್ಲಿ ಜನವರಿ 21ರವರೆಗೆ, 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್​ಲೈನ್​ ಕ್ಲಾಸ್​ ನಡೆಯಲಿದೆ.  ತಮಿಳುನಾಡಲ್ಲೂ ಕೂಡ ಶಾಲೆಗಳನ್ನು ಬಂದ್​ ಮಾಡಲಾಗಿದೆ.

ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಇಂದು ರಾಜ್ಯದ ಕೊರೊನಾ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ್ದರು. ಕೊವಿಡ್​ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ಲಖನೌದ ಕಿಂಗ್ ಜಾರ್ಜ್​ ಮೆಡಿಕಲ್​ ವಿಶ್ವವಿದ್ಯಾಲಯದಲ್ಲಿ ಮಾಡಲಾಗಿರುವ ವ್ಯವಸ್ಥೆ ಪರಿಶೀಲನೆ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಉತ್ತರ ಪ್ರದೇಶದಲ್ಲಿ 1.03 ಲಕ್ಷ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ ಲಖನೌದಲ್ಲಿ ಇಂದು 2300 ಕೇಸ್​ಗಳು ದಾಖಲಾಗಿವೆ. ಹಾಗೇ, ಲಖನೌನದಲ್ಲಿ 16,300 ಕೊರೊನಾ ಸೋಂಕಿನ ಸಕ್ರಿಯ ಕೇಸ್​ಗಳಿವೆ. ಆದರೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಶೇ.1ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ಸಾಗುತ್ತಿದೆ. ಹೀಗಾಗಿ ಮೂರನೇ ಅಲೆ, ಜನರ ಮೇಲೆ ಅಷ್ಟೊಂದು ವ್ಯತಿರಿಕ್ತ ಪ್ರಭಾವ ಬೀರಲಾರದು. ಉತ್ತರ ಪ್ರದೇಶದಲ್ಲಿ ಈಗಾಗಲೇ 22.87 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಹಾಗೇ, 15-18 ವರ್ಷದವರಿಗೆ 21.37 ಲಕ್ಷ ಡೋಸ್ ನೀಡಿಕೆಯಾಗಿದೆ. 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಯಿಂದ ಬಳಲುತ್ತಿರುವ 3.87 ಮಂದಿಗೆ ಬೂಸ್ಟರ್​ ಡೋಸ್ ಕೊಡಲಾಗಿದೆ ಎಂದು ಯೋಗಿ ಆದಿತ್ಯನಾಥ್​ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಬರುವ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿ, ಲಸಿಕೆ ನೀಡಿಕೆ ವೇಗ ಹೆಚ್ಚಿಸುವ ಅನಿವಾರ್ಯತೆಯಿದೆ.

ಇದನ್ನೂ ಓದಿ: Australian Open 2021: ವೀಸಾ ರದ್ದತಿ ಎತ್ತಿಹಿಡಿದ ಕೋರ್ಟ್​; ಆಸ್ಟ್ರೇಲಿಯನ್ ಓಪನ್‌ನಿಂದ ಜೊಕೊವಿಕ್ ಔಟ್!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!